ಸಾಧಿಕ್‌ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿ


Team Udayavani, Jan 30, 2019, 9:50 AM IST

cta-2.jpg

ಚಿತ್ರದುರ್ಗ: ಇಲ್ಲಿನ ಸಾಧಿಕ್‌ ನಗರದ ಎಲ್ಲ ನಿವಾಸಿಗಳಿಗೆ ಕೂಡಲೇ ವಿದ್ಯುತ್‌ ಸಂಪರ್ಕ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆ ಜಿಲ್ಲಾಡಳಿತದ ಮೇಲಿದೆ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು.

ಸಾಧಿಕ್‌ ನಗರಕ್ಕೆ ಮಂಗಳವಾರ ಭೇಟಿ ನೀಡಿ ನಿವಾಸಿಗಳ ಅಹವಾಲುಗಳನ್ನು ಆಲಿಸಿ ಅವರು ಮಾತನಾಡಿದರು. ಹತ್ತಾರು ವರ್ಷಗಳಿಂದ ನಿವಾಸಿಗಳು ವಿದ್ಯುತ್‌ ಇಲ್ಲದೆ ಕತ್ತಲಲ್ಲಿ ಬದುಕಲು ಹೇಗೆ ಸಾಧ್ಯ, ಗುಡ್ಡ, ಬೆಟ್ಟದ ಸಮೀಪ ರಾಜೀವ್‌ ಗಾಂಧಿ ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಿ ಸರ್ಕಾರವೇ ನೀಡಿದೆ. ಆದರೆ ವಿದ್ಯುತ್‌, ಕುಡಿಯುವ ನೀರು, ಚರಂಡಿಯ ಮೂಲ ಸೌಲಭ್ಯಗಳನ್ನು ಕಲ್ಪಿಸದಿದ್ದರೆ ಹೇಗೆಂದು ಪ್ರಶ್ನಿಸಿದರು. ಸಮಸ್ಯೆ ನಿವಾರಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಇಲಾಖೆ, ಬೆಸ್ಕಾಂ, ನಗರಸಭೆ ಅಧಿಕಾರಿಗಳು ಕಾನೂನಿನ ತೊಡಕು ನಿವಾರಿಸಿಕೊಂಡು ಸಾಧಿಕ್‌ ನಗರದ ವಿವಿಧ ಬೀದಿಗಳಿಗೆ ವಿದ್ಯುತ್‌ ಕಂಬ ಹಾಕಿ ಒಂದು ವಾರದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಮುಂದಾಗಬೇಕು ಎಂದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಮಾತನಾಡಿ, ಈ ಬಡಾವಣೆಗೆ ವಿದ್ಯುತ್‌ ಏಕೆ ನೀಡಲಾಗಿಲ್ಲ ಎನ್ನುವ ಸಮಸ್ಯೆ ಅರಿತು ಇನ್ನೊಂದು ವಾರದಲ್ಲಿ ತಾಂತ್ರಿಕ ತೊಂದರೆ ಏನು ಎಂಬುದನ್ನು ತಿಳಿಸಲಾಗುತ್ತದೆ. ನಿರ್ದಿಷ್ಟ ಸಮಸ್ಯೆ ತಿಳಿದ ಮೇಲೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಕಂದಾಯ, ಬೆಸ್ಕಾಂ, ನಗರಾಭಿವೃದ್ಧಿ ಇಲಾಖೆ, ನಗರಸಭೆ ಅಧಿಕಾರಿಗಳು ಜ. 30 ರಂದು ಒಟ್ಟಿಗೆ ಸಭೆ ನಡೆಸಬೇಕು. ಸಮಸ್ಯೆ ಏನೆಂದು ಅರಿತು ವರದಿ ನೀಡಬೇಕು ಎಂದು ಸೂಚಿಸಿದರು.

ಅನರ್ಹ ಫಲಾನುಭವಿಗಳಿಗೆ ಆಶ್ರಯ ಮನೆಗಳು ಮಂಜೂರಾಗಿದ್ದು ಅವರೆಲ್ಲ ಬಡವರಿಗೆ ಬಾಡಿಗೆ ನೀಡಿ ಹೋಗಿದ್ದಾರೆ ಎನ್ನುವ ದೂರು ಆಲಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಪರಿಶೀಲನೆ ನಡೆಸಿ ಯಾವ ಮನೆಯಲ್ಲಿ ಅನರ್ಹರು ವಾಸವಾಗಿದ್ದಾರೆ, ಯಾರಿಗೆ ಮಂಜೂರಾಗಿತ್ತು, ಮಂಜೂರುದಾರರು ಏಕೆ ವಾಸಿಸುತ್ತಿಲ್ಲ ಇತ್ಯಾದಿ ಮಾಹಿತಿಗಳುಳ್ಳ ವರದಿಯನ್ನು ತುರ್ತಾಗಿ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಮಲ್ಲಿಕಾರ್ಜುನ್‌ ಮಾತನಾಡಿ, ಸಾಧಿಕ್‌ ನಗರದ ಸಮಗ್ರ ನಕ್ಷೆ, ಸರ್ಕಾರದಿಂದ ಭೂ ಪರಿವರ್ತನೆಯಾದ ದಾಖಲೆ, ಯಾವ್ಯಾವ ಮನೆ, ಬೀದಿಗಳಿಗೆ ವಿದ್ಯುತ್‌ ಕಂಬ ಹಾಕಿ ಲೈನ್‌ ಎಳೆಯಬೇಕು ಎನ್ನುವ ಪ್ರತ್ಯೇಕ ನಕ್ಷೆ ನೀಡಿದರೆ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ನೀಡಲಾಗುತ್ತದೆ. ಕನಿಷ್ಠ 10 ಲಕ್ಷ ರೂ. ವೆಚ್ಚ ಆಗುವ ಸಾಧ್ಯತೆ ಇದ್ದು ಇದರಲ್ಲಿ ಶೇ.10 ರಷ್ಟು ನಿರ್ವಹಣಾ ವೆಚ್ಚವನ್ನು ಬೆಸ್ಕಾಂಗೆ ತುಂಬಬೇಕು. ವಿದ್ಯುತ್‌ ಕಂಬ, ವೈರ್‌ ಖರೀದಿ ಮಾಡಿ ಕೊಟ್ಟರೆ ಒಂದು ವಾರದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು.

ನಗರಸಭೆ ಸಹಾಯಕ ಇಂಜಿನಿಯರ್‌ ರಂಗನಾಥ್‌ ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ವತಿಯಿಂದ 2004ರಲ್ಲೇ ಅನುಮೋದನೆ ಪಡೆಯಲಾಗಿದೆ. ಮತ್ತೆ ಪ್ರತ್ಯೇಕ ನಕ್ಷೆ ಕೇಳಿದರೆ ಕೊಡಲು ಬರುವುದಿಲ್ಲ. ಇರುವ ನಕ್ಷೆಗೆ ಇಂತಿಷ್ಟು ಭಾಗದಲ್ಲಿ ವಿದ್ಯುತ್‌ ಲೈನ್‌ ಎಳೆದಿಲ್ಲ, ಇದಕ್ಕೆ ಎಸ್ಟಿಮೇಟ್ ಮಾಡಿಕೊಟ್ಟರೆ ನಿರ್ವಹಣಾ ವೆಚ್ಚ ಕಟ್ಟಿ ವಿದ್ಯುತ್‌ ಲೈನ್‌ ಎಳೆಸಬಹುದು ಎಂದು ಹೇಳಿದರು.

ಉಪವಿಭಾಗಾಧಿಕಾರಿ ವಿಜಯ್‌ಕುಮಾರ್‌ ಮಾತನಾಡಿ, ಸರ್ಕಾರಿ ಬಡಾವಣೆಗಳಿಗೆ ಅಥವಾ ಸರ್ಕಾರದ ಜಮೀನುಗಳನ್ನು ಭೂ ಪರಿವರ್ತನೆ ಮಾಡಿಕೊಡುವ ಅಗತ್ಯವಿಲ್ಲ. ಬೆಸ್ಕಾಂ ಅಧಿಕಾರಿಗಳು ಭೂ ಪರಿವರ್ತನೆ ದಾಖಲೆ ಕೇಳಿದರೆ ಹೇಗೆ ಕೊಡಲು ಸಾಧ್ಯ, ಇರುವ ದಾಖಲೆಗಳನ್ನೇ ಪಡೆದು ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದರು.

ದೂರುಗಳ ಸುರಿಮಳೆ
ಗುಡ್ಡ, ಬೆಟ್ಟದ ಸಮೀಪ ಇದ್ದು ಹತ್ತಾರು ವರ್ಷಗಳಿಂದ ಕತ್ತಲಲ್ಲಿ ಬದುಕುತ್ತಿದ್ದೇವೆ. ಬಹುತೇಕ ಮನೆಗಳು ಕಳಪೆಯಾಗಿವೆ. ಅನರ್ಹರಿಗೆ ಮನೆ ಮಂಜೂರು ಮಾಡಲಾಗಿದ್ದು, ಅವರೆಲ್ಲ ಬಾಡಿಗೆಗೆ ನೀಡಿ ಹೋಗಿದ್ದಾರೆ. ಬಡವರು ವಾಸಿಸುತ್ತಿದ್ದು ಅವರನ್ನೇ ಫಲಾನುಭವಿಗಳು ಎಂದು ತೀರ್ಮಾನ ಮಾಡಬೇಕು. ಕುಡಿಯುವ ನೀರು, ಚರಂಡಿ, ಬೀದಿದೀಪದ ವ್ಯವಸ್ಥೆ ಮಾಡಬೇಕು ಎಂದು ಸಂಸದರು, ಜಿಲ್ಲಾಧಿಕಾರಿಗಳ ಬಳಿ ಸಾಧಿಕ್‌ ನಗರದ ನಿವಾಸಿಗಳು ದೂರುಗಳ ಸುರಿಮಳೆಗೈದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.