21 ಜನ ತಬ್ಲೀಘಿಗಳಿಗೆ ಕ್ವಾರಂಟೈನ್
Team Udayavani, May 9, 2020, 8:14 AM IST
ಹೊಳಲ್ಕೆರೆ: ಗುಜರಾತ್ ರಾಜ್ಯದ ಸೂರತ್ನಲ್ಲಿ ನಡೆದ ಮುಸ್ಲಿಂ ಧರ್ಮಸಭೆಯಲ್ಲಿ ಭಾಗವಹಿಸಿದ್ದ 21 ಜನ ತಬ್ಲೀಘಿಗಳನ್ನು ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಹಶೀಲ್ದಾರ್ ಕೆ. ನಾಗರಾಜ್ ತಿಳಿಸಿದ್ದಾರೆ.
ಚಿತ್ರದುರ್ಗ ಮತ್ತು ದಾವಣಗೆರೆ ತಾಲೂಕಿಗೆ ಸೇರಿದ ತಬ್ಲೀಘಿ ಗಳು ಸೂರತ್ನಲ್ಲಿ ಧರ್ಮಸಭೆ ಮುಗಿಸಿಕೊಂಡು ಕ್ವಾರಂಟೈನ್ ಆಗಿದ್ದರು. ಅಲ್ಲಿಂದ ಅಥಣಿ ಮಾರ್ಗವಾಗಿ ಹೊಳಲ್ಕೆರೆಗೆ ಜಿಲ್ಲಾಡಳಿತದ ಆದೇಶದಂತೆ ಆಗಮಿಸಿದ್ದಾರೆ. ಅವರ ಆರೋಗ್ಯ ತಪಾಸಣೆ ಬಳಿಕ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದರು.
ವಸತಿ ಶಾಲೆ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಿದೆ. ಜತೆಗೆ 5 ಕೊಠಡಿಯಲ್ಲಿ ತಲಾ ನಾಲ್ಕು ಜನರಂತೆ ವಾಸಿಸಲು ಆಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ರೋಜಾ ಸಮಯವಾಗಿರುವುದರಿಂದ ವಿಶೇಷ ಭೋಜನ ಹಾಗೂ ಪ್ರಾರ್ಥನಾ ಸೌಲಭ್ಯ ಒದಗಿಸಲಾಗಿದೆ. ನಿತ್ಯ ವೈದ್ಯಕೀಯ ತಪಾಸಣೆಗೆ ವಿಶೇಷ ಆರೋಗ್ಯ ಸೇವಾ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರ ವಿರೋಧ: ತಬ್ಲಿಘಿ ಗಳ ಕ್ವಾರಂಟೈನ್ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದು, ತಕ್ಷಣ ತಬ್ಲೀಘಿಗಳನ್ನು ಅವರ ಮಾತೃ ತಾಲೂಕುಗಳಿಗೆ ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ತಾಲೂಕು ವಕೀಲರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು