ಹೊಳಲ್ಕೆರೆ ಕ್ಷೇತ್ರಕ್ಕೆ ಆಂಜನೇಯ ಕೊಡುಗೆ ಶೂನ್ಯ
Team Udayavani, Mar 23, 2021, 5:25 PM IST
ಹೊಳಲ್ಕೆರೆ: ಐದು ವರ್ಷ ಶಾಸಕರಾಗಿ ಹಾಗೂ ಸಚಿವರಾಗಿ ಎಚ್. ಆಂಜನೇಯ ಸರಕಾರದ ದೊಡ್ಡ ಖಾತೆ ನಿರ್ವಹಣೆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೊಟ್ಟ ಕೊಡುಗೆ ಏನೆಂಬುದನ್ನು ಕ್ಷೇತ್ರದ ಜನತೆ ಅರಿತಿದ್ದಾರೆ. ಹಾಗಾಗಿ ಎಂ. ಚಂದ್ರಪ್ಪ ಅವರಿಗೆ ಒಂದು ಲಕ್ಷದ ಎಂಟು ಸಾವಿರ ಮತ ನೀಡಿ 40 ಸಾವಿರ ಮತಗಳ ಅಂತರದಿಂದ ಆಂಜನೇಯ ಅವರನ್ನು ಸೋಲಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಸಿ. ರಘುಚಂದನ್ ಟೀಕಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಎಂ. ಚಂದ್ರಪ್ಪ ಬಗ್ಗೆ ಮಾಜಿ ಸಚಿವ ಎಚ್. ಆಂಜನೇಯ ಬದ್ಧತೆ ಇಟ್ಟುಕೊಂಡು ಮಾತನಾಡಬೇಕು. ಚುನಾವಣೆಯಲ್ಲಿ ಸೋತಿರುವ ಆಂಜನೇಯ ಅವರಿಗೆ ಮತಿಭ್ರಮಣೆಯಾಗಿದೆ. ಶಾಸಕ ಎಂ. ಚಂದ್ರಪ್ಪನವರು ಸುಳ್ಳು ಹೇಳುತ್ತಾರೆಂದು ಹೇಳುವ ಆಂಜನೇಯ ಸೋಲು ಅನುಭವಿಸಿದ್ದೇಕೆ, ಅಧಿಕಾರದಲ್ಲಿದ್ದಾಗ ಕೆಲಸ ಮಾಡಿದ್ದರೆ ಜನರೇಕೆ ಸೋಲಿಸುತ್ತಿದ್ದರು ಎಂದು ಪ್ರಶ್ನಿಸಿದರು.
ಶಾಸಕ ಎಂ. ಚಂದ್ರಪ್ಪ ಮಾಡಿರುವ ಕೆಲಸಕ್ಕೆ ಜನರು ಮತ ನೀಡಿದ್ದಾರೆ. ಅ ಧಿಕಾರವಿದ್ದಾಗ ಕೆಲಸ ಮಾಡದೆ ಶಾಸಕ ಎಂ.ಚಂದ್ರಪ್ಪ ಅವರ ಬಗ್ಗೆ ಅಪಪ್ರಚಾರ ಮಾಡುವುದು ಆಂಜನೇಯ ಅವರಿಗೆ ಶೋಭೆ ತರುವುದಿಲ್ಲ. ಶಾಸಕ ಎಂ. ಚಂದ್ರಪ್ಪ ಕ್ಷೇತ್ರದಲ್ಲಿ ಅಭಿವೃದ್ಧಿ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಕೆರೆಗಳಿಗೆ ನೀರು ತುಂಬಿಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಸಹಕಾರದಿಂದ ಸಾವಿರಾರು ಕೋಟಿ ಅನುದಾನದ ತಂದು ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯುವಂತೆ ಮಾಡಿದ್ದಾರೆ ಎಂದರು.
ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ರೂಪಾ ಸುರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…