ಮುಂದುವರೆದ ಮಳೆ, ಹಲವು ಪ್ರದೇಶಗಳು ಜಲಾವೃತ
Team Udayavani, Oct 22, 2019, 7:50 AM IST
ಚಿತ್ರದುರ್ಗ: ಕೋಟೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕೆಲ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.
ಸೋಮವಾರ ರಾತ್ರಿ ಪೂರ್ತಿ ಸುರಿದ ವರ್ಷಧಾರೆಗೆ ಈಗಾಗಲೇ ತುಂಬಿದ್ದ ಕೆರೆ ಕಟ್ಟೆಗಳು ಮತ್ತಷ್ಟು ಮೈದುಂಬಿಕೊಂಡಿವೆ.
ಹೊಸದುರ್ಗ ತಾಲೂಕಿನ ಕಂಠಾಪುರ ಗ್ರಾಮದಲ್ಲಿ ಪೂರ್ತಿ ನೀರು ನಿಂತಿದ್ದು ಹಲವು ಮನೆಗಳು ಜಲಾವೃತವಾಗಿವೆ. ಜಾನಕಲ್ ಕೆರೆ ಕೋಡಿ ಬಿದ್ದ ಪರಿಣಾಮ ಕಂಠಾಪುರ ಸಂಕಷ್ಟಕ್ಕೆ ಸಿಲುಕಿದೆ.
ಜಾನಕಲ್ ಹೊಸದುರ್ಗ ಸಂಪರ್ಕಿಸುವ ರಸ್ತೆಯಲ್ಲಿ ಕೂಡಾ ಭಾರೀ ನೀರು ಹರಿಯುತ್ತಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
ಮತ್ತೊಂದೆಡೆ ವಾಣಿ ವಿಲಾಸ ಸಾಗರಕ್ಕೆ ಒಂದೇ ದಿನ ಹತ್ತು ಅಡಿ ನೀರು ಹೆಚ್ಚಾಗಿದೆ. ನಿನ್ನೆ ಬೆಳಗ್ಗೆ 70 ಅಡಿಯಿದ್ದ ವಿವಿ ಸಾಗರದ ನೀರಿನ ಮಟ್ಟ, ಇಂದು 79 ಅಡಿಗೆ ತಲುಪಿದೆ. ವೇದಾವತಿ ನದಿ ಮೈದುಂಬಿ ಹರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ