ರಂಭಾಪುರಿ ಶ್ರೀ-ಸಿದ್ದು ಚರ್ಚೆ ಬಹಿರಂಗಪಡಿಸಲಾಗದು: ಎಚ್.ಆಂಜನೇಯ
Team Udayavani, Aug 21, 2022, 9:49 PM IST
ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಂಭಾಪುರಿ ಶ್ರೀಗಳ ನಡುವೆ ನಡೆದ ಚರ್ಚೆಯ ವಿವರಗಳನ್ನು ಬಹಿರಂಗಪಡಿಸಲಾಗದು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ನಮ್ಮ ಸರ್ಕಾರ ಅ ಧಿಕಾರದಲ್ಲಿದ್ದಾಗ ನಡೆದ ವಿದ್ಯಮಾನಗಳನ್ನು ಸಿದ್ದರಾಮಯ್ಯ ಅವರು ಶ್ರೀಗಳಿಗೆ ವಿವರಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಈಗ ಮುಗಿದ ಆಧ್ಯಾಯ. ಪ್ರತ್ಯೇಕ ಧರ್ಮದ ವಿಷಯಕ್ಕೆ ಸಂಬಂ ಧಿಸಿದಂತೆ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ರಂಭಾಪುರಿ ಶ್ರೀಗಳ ಭೇಟಿ ವೇಳೆ ಏನೆಲ್ಲ ಆಗಿತ್ತು ಎಂಬುದನ್ನು ಈಗಾಗಲೇ ಹೇಳಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಈಗ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೀರಶೈವ ಸಮ್ಮೇಳನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಂಕರಪ್ಪ ಪ್ರತ್ಯೇಕ ಧರ್ಮಕ್ಕಾಗಿ ಅರ್ಜಿ ಕೊಟ್ಟಿದ್ದರೇ ಹೊರತು ಸರ್ಕಾರ ಅರ್ಜಿ ಆಹ್ವಾನಿಸಿರಲಿಲ್ಲ.
ಆ ಸಂದರ್ಭದಲ್ಲಿ ಪಂಚಪೀಠಗಳ ಮಠಾಧೀಶರು ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮುರುಘಾ ಶರಣರು, ಲಿಂಗೈಕ್ಯರಾದ ಮಾತೆ ಮಹಾದೇವಿ, ಇಳಕಲ್ ಶ್ರೀಗಳು, ತೋಂಟದಾರ್ಯ ಶ್ರೀಗಳು ಹಾಗೂ ಪಂಚ ಪೀಠಗಳ ಮಠಾಧಿಧೀಶರನ್ನು ಹೊರತುಪಡಿಸಿ ಇನ್ನುಳಿದ ಹಲವು ಮಠಾಧಿಧೀಶರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ವರದಿ ಪಡೆದಿತ್ತು. ಧರ್ಮವನ್ನು ಪ್ರತ್ಯೇಕಗೊಳಿಸಿ ಲಿಂಗಾಯತರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸವಲತ್ತುಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೇನೂ ಬಾಧಕವಾಗಿಲ್ಲ. ಈ ವಿಚಾರದಲ್ಲಿ ತಪ್ಪಾಗಿದೆ ಎನ್ನುವುದು ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಅಭಿಪ್ರಾಯ. ಆಗ ಅವರು ಕೆಪಿಸಿಸಿ ಅಧ್ಯಕ್ಷರಾಗಿರಲಿಲ್ಲ. ಈ ಹೇಳಿಕೆ ನೀಡಿ ಎರಡು ವರ್ಷಗಳಾಗಿದೆ ಎಂದರು.
ಆ.26ಕ್ಕೆ ಪ್ರತಿ ಜಿಲ್ಲೆಯಿಂದ ಕೊಡಗಿಗೆ:
ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಕೊಡಗು ನಮ್ಮದು ಎಂದು ತೋರಿಸಲು ಪ್ರತಿ ಜಿಲ್ಲೆಯಿಂದಲೂ 1-2 ಸಾವಿರ ಜನ ಕೊಡಗಿಗೆ ತೆರಳುತ್ತೇವೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಬಿಜೆಪಿ ಹಸಿ ಸುಳ್ಳು ಹೇಳುತ್ತಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ಸಿನವನೆಂದು ಹೇಳಿದರೆ ಶೇ.40 ಲಂಚದಲ್ಲಿ ನಿನಗೂ ಪಾಲು ಕೊಡುತ್ತೇವೆ ಎಂದು ಆಮಿಷವೊಡ್ಡಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?