ನೀರುಗಳ್ಳರ ವಿರುದ್ಧ ದೂರು ದಾಖಲಿಸಿ


Team Udayavani, Feb 3, 2019, 9:18 AM IST

cta-2.jpg

ಚಿತ್ರದುರ್ಗ: ಶಾಂತಿಸಾಗರದ ನೀರನ್ನು ಜಮೀನುಗಳಿಗೆ ಅಕ್ರಮವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ದೂರು ದಾಖಲಿಸಬೇಕು. ಇಲ್ಲದಿದ್ದರೆ ಪಿಡಿಒಗಳ ವಿರುದ್ಧವೇ ದೂರು ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಎಚ್ಚರಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಶಾಂತಿಸಾಗರ ಕುಡಿಯುವ ನೀರು ಯೋಜನೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರಸಭೆ, ಪಟ್ಟಣ ಪಂಚಾಯತ್‌, ಗ್ರಾಮ ಪಂಚಾಯತ್‌ ಪಿಡಿಒಗಳು ಕುಡಿಯುವ ನೀರು ಪೂರೈಕೆಯಲ್ಲಿ ಲೋಪ ಆಗದಂತೆ ಎಚ್ಚರ ವಹಿಸಬೇಕು. ಕಚೇರಿಯಲ್ಲಿ ಕುಳಿತು ಕಾಲ ಕಳೆಯುವ ಬದಲು ಶಾಂತಿಸಾಗರದ ನೀರಿನ ಮಾರ್ಗ ಮಧ್ಯೆ ಯಾರು ನೀರನ್ನು ಕಳವು ಮಾಡಿ ಜಮೀನುಗಳಿಗೆ ಹರಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ನಾನು ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಮೀನುಗಳಿಗೆ ಅಕ್ರಮವಾಗಿ ನೀರು ಹರಿಯುತ್ತಿರುವುದು ಕಂಡು ಬಂದಲ್ಲಿ ಎಫ್‌ಐಆರ್‌ ದಾಖಲಿಸುತ್ತೇನೆ. ಹಾಗಾಗಿ ಮೈಚಳಿ ಬಿಟ್ಟು ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಆಯಾ ಗ್ರಾಮಗಳಲ್ಲಿ ಪೈಪ್‌ಲೈನ್‌ ಅಳವಡಿಸಬೇಕು. ನೀರು ಬೇಕಾದವರು ಗ್ರಾಪಂಗಳಿಗೆ ಅರ್ಜಿ ಸಲ್ಲಿಸಿದಾಗ ನಲ್ಲಿಗಳಿಂದ ನೀರು ಕೊಡಿ. ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಕುಡಿಯುವ ನೀರಿನ ಲೈನ್‌ಗೆ ಮೀಟರ್‌ ಅಳವಡಿಸಲು ಟೆಂಡರ್‌ ಕರೆಯಬೇಕು. ದಿನದ 24 ಗಂಟೆ ನೀರು ಕೊಡುವುದು ಬೇಡ, ಓವರ್‌ಹೆಡ್‌ ಟ್ಯಾಂಕ್‌ ತುಂಬಿದ ಮೇಲೆ ವಾಲ್ವ್ ಬಂದ್‌ ಮಾಡಬೇಕು ಎಂದು ಸೂಚಿಸಿದರು.

ಓವರ್‌ಹೆಡ್‌ ಟ್ಯಾಂಕ್‌ಗಳನ್ನು ಎಲ್ಲಿ ತುಂಬಿಸಲು ಆಗುವುದಿಲ್ಲವೋ ಅಂತಹ ಗ್ರಾಮಗಳಲ್ಲಿ ಸಂಪ್‌ಗ್ಳಲ್ಲಿ ನೀರು ತುಂಬಿಸಿಕೊಂಡು ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಿ. ಪ್ರತಿ ದಿನ ನಾಲ್ಕು ಗಂಟೆ ಮಾತ್ರ ನೀರು ಕೊಡಿ. ಉಳಿದಂತೆ ಚಿತ್ರದುರ್ಗ, ಜಗಳೂರಿಗೆ ನೀರು ಸರಬರಾಜು ಮಾಡಬೇಕು ಎಂದು ಆದೇಶಿಸಿದರು.

ನೀರು ಯಾವಾಗ ಬರುವುದಿಲ್ಲವೋ ಆಗ ಸಂಬಂಧಪಟ್ಟವರ ಗಮನಕ್ಕೆ ತನ್ನಿ. ಶಾಂತಿಸಾಗರದ ನೀರು ಬಂದಾಗ ಕೊಳವೆಬಾವಿ ನೀರನ್ನು ಬಳಸಬೇಡಿ. ಅನಗತ್ಯ ಖರ್ಚಿಗೆ ಕಡಿವಾಣ ಹಾಕಿಕೊಂಡು ಬಾಕಿ ಇರುವ ನೀರಿನ ಕಂದಾಯ ಪಾವತಿಸಿ ಎಂದು ಎಲ್ಲಾ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಸಿಇಒ ಪಿ.ಎನ್‌. ರವೀಂದ್ರ ಮಾತನಾಡಿ, ಸಮರ್ಪಕವಾಗಿ ನೀರು ನೀಡಿಯೂ ಜನತೆಯಿಂದ ನೀರಿನ ಕಂದಾಯ ವಸೂಲಿ ಮಾಡದಿದ್ದರೆ ಹೇಗೆ, ಸುಲಭವಾಗಿ ಕುಡಿಯುವ ನೀರು ಸಿಕ್ಕರೆ ನಿಮಗೆ ಕಷ್ಟ ಗೊತ್ತಾಗುವುದಿಲ್ಲ. 14ನೇ ಹಣಕಾಸು ಯೋಜನೆಯಡಿ ಬೇರೆ ಬೇರೆ ಉದ್ದೇಶಗಳಿಗೆ ಹಣ ಖರ್ಚು ಮಾಡುವ ಬದಲು ಬಾಕಿ ಇರುವ ಕುಡಿಯುವ ನೀರಿನ ಕಂದಾಯ ಮೊದಲು ಪಾವತಿಸಿ. ನೀರಿನ ಕರವನ್ನು ವಸೂಲು ಮಾಡಲು ಆರಂಭಿಸಿದಾಗ ನಿಜವಾಗಿಯೂ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಮೇಲೆ ಜವಾಬ್ದಾರಿ ಇರುತ್ತದೆ ಎಂದು ತಿಳಿಸಿದರು.

ನೀರನ್ನು ಜನರಿಗೆ ತಲುಪಿಸಿದ ಮೇಲೆ ವರ್ಷಕ್ಕೆ 120 ರೂ. ಸಂಗ್ರಹಿಸಿ ಕೊಡುವ ಜವಾಬ್ದಾರಿ ನಿಮ್ಮದು. ಪಿಡಿಒಗಳ್ಯಾರು ದೂರವಾಣಿ ಕರೆ ಸ್ವೀಕರಿಸುವುದಿಲ್ಲ. ಗ್ರಾಪಂ ಕಚೇರಿಗೆ ಹೋದರೆ ಕರ್ತವ್ಯದ ಸಮಯದಲ್ಲಿ ಇರುವುದಿಲ್ಲ. ಎಲ್ಲ ಪ್ರಯತ್ನ ಮಾಡಿ ಸುಮ್ಮನಾಗಿದ್ದೇವೆ ಎಂದು ನಗರಸಭೆ ಪೌರಾಯುಕ್ತ ಚಂದ್ರಪ್ಪ ದೂರಿದರು.

ಚಿತ್ರದುರ್ಗ ತಾಪಂ ಅಧ್ಯಕ್ಷ ಲಿಂಗರಾಜು, ಇಒ ಕೃಷ್ಣ ನಾಯ್ಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಂಜಿನಿಯರ್‌ ಹನುಮಂತಪ್ಪ, ನಗರಸಭೆ ಇಂಜಿನಿಯರ್‌ಗಳು ಇದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.