ರಸ್ತೆ ಒತ್ತುವರಿ ತೆರವಿಗೆ ಒತ್ತಾಯಿಸಿ ಮನವಿ ಸಲ್ಲಿಕೆ
Team Udayavani, Mar 17, 2022, 11:36 AM IST
ಚಳ್ಳಕೆರೆ: ತಾಲೂಕಿನ ಪರಶುರಾಂಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯನ್ನೇ ಕೆಲವು ರೈತರು ಒತ್ತುವರಿ ಮಾಡಿಕೊಂಡು ಆ ಭಾಗದ ಜಮೀನುಗಳಿಗೆ ಹೋಗುವ ರೈತರಿಗೆ ತೊಂದರೆ ಉಂಟು ಮಾಡಿದ್ದಾರೆ. ಕೂಡಲೇ ರಸ್ತೆ ಒತ್ತುವರಿಯನ್ನು ತೆರವುಗೊಳಿಸಿಕೊಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಖಾಸಗಿ ಪ್ರೌಢಶಾಲೆ ಮತ್ತು ಕರೀಕೆರೆ ಗ್ರಾಮದ ಸಂಪರ್ಕ ರಸ್ತೆಯನ್ನು ಕೆಲವು ತಿಂಗಳಿನಿಂದ ಒತ್ತುವರಿ ಮಾಡಲಾಗಿದೆ. ಸುತ್ತಮುತ್ತ ಜಮೀನು ಹೊಂದಿರುವ ಎಲ್ಲಾ ರೈತರಿಗೆ ಇದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ರೈತರು ತಮ್ಮ ಜಮೀನಿಗೆ ಓಡಾಡಲು ರಸ್ತೆ ಸಂಪರ್ಕ ಒದಗಿಸಬೇಕೆಂದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ, ಎರಡು ಮೂರು ದಿನದಲ್ಲಿ ಈ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಕಂದಾಯಾಧಿಗೆ ಸೂಚಿಸಿದ್ದೇನೆ. ನಾನು ಸಹ ಶೀಘ್ರದಲ್ಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಚನ್ನಮ್ಮನಾಗತಿಹಳ್ಳಿ ಗ್ರಾಮದ ಗ್ರಾಮಸ್ಥರಾದ ಈ. ಬಾಲರಾಜು, ಶಿವಮೂರ್ತಿ, ವೀರಣ್ಣ, ತಿಪ್ಪೇಸ್ವಾಮಿ, ಶಶಿಕುಮಾರ್, ಶಿವಲಿಂಗಪ್ಪ, ಸುರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್