ಗೋಶಾಲೆ ಕಾರ್ಮಿಕರಿಗೆ ಕೂಲಿ ನೀಡಲು ಮನವಿ
Team Udayavani, Jun 2, 2020, 11:59 AM IST
ಮೊಳಕಾಲ್ಮೂರು: ಗೋಶಾಲೆಗಳಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಕೂಲಿ ಹಣ ನೀಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಮೊಳಕಾಲ್ಮೂರು: ತಾಲೂಕಿನ ಮುತ್ತಿಗಾರಹಳ್ಳಿ ಮತ್ತು ಮಾರಮ್ಮನಹಳ್ಳಿ ಗೋಶಾಲೆಗಳಲ್ಲಿ ಕಳೆದ ಬಾರಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಕೂಲಿ ಹಣ
ನೀಡಬೇಕೆಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷವು ತಾಲೂಕು ಕಚೇರಿ ಆವರಣದಲ್ಲಿ ತಹಶೀಲ್ದಾರ್ ಎಂ.ಬಸವರಾಜ್ ಅವರಿಗೆ ಮನವಿ ಸಲ್ಲಿಸಿತು.
ಸಿಪಿಐನ ತಾಲೂಕು ಪ್ರಧಾನ ಕಾರ್ಯದರ್ಶಿ ಜಾಫರ್ ಷರೀಫ್ ಮಾತನಾಡಿ, ಬಡ ಕೂಲಿ ಕಾರ್ಮಿಕರು ಗೋಶಾಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯ ಮೇರೆಗೆ ಸಗಣಿ ಎತ್ತುವ ಕೆಲಸ ಮಾಡಿರುತ್ತಾರೆ. ಮುತ್ತಿಗಾರಹಳ್ಳಿ ಮತ್ತು ಮಾರಮ್ಮನಹಳ್ಳಿ ಗೋಶಾಲೆಗಳಲ್ಲಿ ಒಟ್ಟು 36 ದಿನಗೂಲಿಗಳು 3 ತಿಂಗಳು 16 ದಿನಗಳವರೆಗೂ ಗೋಶಾಲೆಗಳಲ್ಲಿನ ಸಗಣಿ ಗೊಬ್ಬರ ಎತ್ತುವುದು ಮತ್ತು ಗೋವುಗಳು ಕುಡಿಯುವ ನೀರಿನ ತೊಟ್ಟಿಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡಿಸಿಕೊಂಡು ಎರಡು ವರ್ಷಗಳು ಕಳೆದರೂ ಈವರೆಗೂ ಈ ಕೂಲಿ ಕಾರ್ಮಿಕರಿಗೆ ಕೂಲಿ ಹಣ ನೀಡದೆ ವಂಚಿಸಲಾಗಿದೆ ಎಂದು ದೂರಿದರು.
ಕೂಲಿ ಹಣಕ್ಕಾಗಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಪ್ರಸ್ತುತ
ಈ ಕೆಲಸಗಾರರು ಕೊರೊನಾದಿಂದ ಯಾವುದೇ ಕೆಲಸವಿಲ್ಲದೆ ಸಂಕಷ್ಟದಲ್ಲಿ ಜೀವನ ಸಾಗಿಸಲಾಗುತ್ತಿದೆ. ಈ ಕೂಲಿಕಾರ್ಮಿಕರ ಜೀವನೋಪಾಯಕ್ಕಾಗಿ ಕೂಡಲೇ ನಿಲುಗಡೆಯಾದ ಕೂಲಿ ಹಣವನ್ನು ನೀಡಬೇಕಾಗಿದೆ. ಮುಂದಿನ ದಿನಗಳಲ್ಲಿ ಕೂಲಿ ಹಣವನ್ನು ನೀಡದಿದ್ದಲ್ಲಿ ತಾಲೂಕು ಕಚೇರಿಯ ಆವರಣದಲ್ಲಿ ಧರಣಿ ಸತ್ಯಾಗ್ರಹ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪದಾ ಕಾರಿಗಳಾದ ಮಲ್ಲಯ್ಯ, ಪೂಜಾರಿತಿಪ್ಪೇಸ್ವಾಮಿ, ರಾಜಣ್ಣ ಮೊದಲಾದವರು
ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು