ಕಲ್ಲುಗಣಿಗಾರಿಕೆ ಸ್ಥಗಿತಗೊಳಿಸಲು ಆಗ್ರಹ
Team Udayavani, Jul 14, 2020, 3:54 PM IST
ಮೊಳಕಾಲ್ಮೂರು: ಪಟ್ಟಣ ವ್ಯಾಪ್ತಿಯ ಗೋಮಾಳ ಜಮೀನಿನಲ್ಲಿನ ಸಾಕಿ ಬಂಡೆ ಮತ್ತು ಕೋಲುತಿಪ್ಪೆ ಗುಡ್ಡದಲ್ಲಿ ಕಲ್ಲು ಬ್ಲಾಸ್ಟಿಂಗ್ ಮತ್ತು ಜಲ್ಲಿ ಕ್ರಷರ್ ಅನುಮತಿ ರದ್ದುಪಡಿಸಿ ಕಲ್ಲುಗಣಿಗಾರಿಕೆ ಸ್ಥಗಿತಗೊಳಿಸ ಬೇಕು ಎಂದು ಒತ್ತಾಯಿಸಿ ಸೋಮವಾರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ರೈತರು, ನಾಗರಿಕರು ಪ್ರತಿಭಟಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಬಿಜೆಪಿ ಯುವ ಮುಖಂಡ ಕೆ.ರಾಘವೇಂದ್ರ ಮಾತನಾಡಿ, ಪಟ್ಟಣ ವ್ಯಾಪ್ತಿಯ ಸ.ನಂ.78 ಮತ್ತು ಸ.ನಂ.25/1 ರಲ್ಲಿ ಬಹುತೇಕ ಹಿಂದುಳಿದ ವರ್ಗದ ಬಡ ರೈತರ ಜಮೀನುಗಳಿದ್ದು, ಈ ಯಾವ ರೈತರ ಜಮೀನುಗಳು ಮತ್ತು ಬೋರ್ವೆಲ್ಗಳ ಅಂತರ್ಜಲ ಹಾಳಾಗುವುದನ್ನು ಪರಿಗಣಿಸದೆ ಈ ಭಾಗದಲ್ಲಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿರುವುದು ಅನ್ಯಾಯವಾದಂತಾಗಿದೆ. ಕಲ್ಲುಗಣಿಗಾರಿಕೆಯಿಂದ ಜನತೆಯ ಕುಡಿಯುವ ನೀರಿನ ಬೋರ್ವೆಲ್ ಗಳು ಮತ್ತು ಹತ್ತಿರದ ರೈತರ ಜಮೀನುಗಳ ಬೋರ್ ವೆಲ್ ಅಂತರ್ಜಲ ಕುಸಿತವುಂಟಾಗಿ ಕುಡಿಯುವ ನೀರಿಗೆ ಸಂಕಷ್ಟ ಪಡುವಂತಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ನಿಯಮ ಗಾಳಿಗೆ ತೂರಿ ಸಂಬಂಧಪಟ್ಟ ಅಧಿಕಾರಿಗಳು ಕಲ್ಲುಗಣಿಗಾರಿಕೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿ ಕಲ್ಲುಗಣಿಗಾರಿಕೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು. ರಾಮಾಂಜಿನೇಯ, ಬಿ.ವಿಜಯ್, ಶಾಂತರಾಂ ಬಸಾಪತಿ, ಬೋರನಾಯಕ, ಸಿದ್ದಣ್ಣ, ಡಿ.ತಿಪ್ಪಯ್ಯ, ಮಲ್ಲಿಕಾರ್ಜುನ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ