ಕಂದಾಯ ಬಾಕಿ ಪಾವತಿಗೆ ಆಗ್ರಹ


Team Udayavani, Sep 24, 2019, 2:22 PM IST

cd-tdy-1

ನಾಯಕನಹಟ್ಟಿ: ಸೋಲಾರ್‌ ಕಂಪನಿಗಳು ಕಂದಾಯ ಬಾಕಿ ಪಾವತಿಸಬೇಕೆಂದು ಒತ್ತಾಯಿಸಿ ಸೋಮವಾರ ಎನ್‌. ದೇವರಹಳ್ಳಿಗ್ರಾಮ ಪಂಚಾಯತ್‌ ಅಧ್ಯಕ್ಷರು, ಸದಸ್ಯರು ಹಾಗೂ ಮುಖಂಡರು ಸೋಲಾರ್‌ ಕಂಪನಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ಕೆ.ಎಸ್‌. ದಿವಾಕರ ರೆಡ್ಡಿ, ಒಂದು ಸಾವಿರ ಎಕರೆ ಪ್ರದೇಶವನ್ನು ಸಾಜಿಟರ್‌ ವೆಂಚೂರ್‌ ಕಂಪನಿ ಸರ್ಕಾರದಿಂದ ಭೂಮಿಯನ್ನು ಗುತ್ತಿಗೆ ಪಡೆದಿದೆ. ಆದರೆ ಸಾಜಿಟರ್‌ ಕಂಪನಿ ನಾಮಕಾವಸ್ತೆಗೆ ಒಂದು ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುತ್ತಿದೆ. ಆ ಕಂಪನಿ ಇತರೆ ಕಂಪನಿಗಳಿಗೆ ಉಪ ಗುತ್ತಿಗೆ ನೀಡಿದೆ. ಈ ಕಂಪನಿಗಳು ಎನ್‌. ದೇವರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿವೆ. ಪ್ರತಿ ವರ್ಷ ಕಂಪನಿಗಳು

ಕಂದಾಯವನ್ನು ಪಾವತಿಸಬೇಕು.ಸರ್ಕಾರದ ನಿರ್ದೇಶನದಂತೆ ಕಂದಾಯ ಪಾವತಿಸುವಂತೆ ಹಲವಾರು ಬಾರಿ ಸೂಚನೆ ನೀಡಲಾಗಿದೆ. ಸರ್ಕಾರ ನೀಡಿರುವ ಆದೇಶಗಳಂತೆ ಇದುವರೆಗೆ ಇಲ್ಲಿನ ಕಂಪನಿಗಳು 6.8 ಕೋಟಿ ರೂ. ಕಂದಾಯ ಬಾಕಿ ಉಳಿಸಿಕೊಂಡಿವೆ ಎಂದರು.

ಆಗಸ್ಟ್‌ ತಿಂಗಳಲ್ಲಿ ಸರ್ಕಾರ ಪ್ರತಿ ಮೆಗಾ ವ್ಯಾಟ್‌ ಉತ್ಪಾದನೆಗೆ ಐದು ಸಾವಿರ ರೂ.ಗಳಂತೆ ಸೋಲಾರ್‌ ಕಂಪನಿಗಳು ಗ್ರಾಪಂಗೆ ತೆರಿಗೆ ಪಾವತಿಸುವಂತೆ ಆದೇಶ ನೀಡಿದೆ. ಇಲ್ಲಿನ ಕಂಪನಿಗಳು ಒಟ್ಟು 165 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸುತ್ತಿವೆ.ಸರ್ಕಾರ ಇಲ್ಲಿಯವರೆಗೆ ನೀಡಿರುವ ಆದೇಶಗಳಂತೆ ಒಟ್ಟು 6.97 ಕೋಟಿ ರೂ. ಕಂದಾಯ ಬಾಕಿಯನ್ನು ಕಂಪನಿಗಳು ಕಳೆದ ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿವೆ. ಇಲ್ಲಿ ನಾಲ್ಕು ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಂದು ಕಂಪನಿ ಹೊರತುಪಡಿಸಿ ಮೂರು ಕಂಪನಿಗಳಿಂದ ಬಾಕಿ ಬರಬೇಕಿದೆ. ಜೊತೆಗೆ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ. ತಾಲೂಕಿನ 30 ಜನರಿಗೆ ವಾಚ್‌ಮನ್‌ ಉದ್ಯೋಗ ನಿಡಲಾಗಿದೆ. ಆದರೆ ಅವರಿಗೆ ಯಾವುದೇ ಸೇವಾ ಭದ್ರತೆ ಒದಗಿಸಿಲ್ಲ ಎಂದು ಆರೋಪಿಸಿದರು.

ಗ್ರಾಪಂ ಸದಸ್ಯ ಪಿ. ನಾಗರಾಜ್‌ ಮಾತನಾಡಿ, ಸೋಲಾರ್‌ ಕಂಪನಿಗಳಿರುವ ಪ್ರದೇಶ ಗೋಮಾಳವಾಗಿದ್ದು ಪಶು ಸಂಗೋಪನಾ ಇಲಾಖೆಗೆ ಸೇರಿತ್ತು. ಇಲ್ಲಿನ ಪ್ರದೇಶದಲ್ಲಿ ದನ ಕರುಗಳು ಮೇಯುತ್ತಿದ್ದವು. ಆದರೆ ಸರ್ಕಾರದ ತಪ್ಪು ನಿರ್ಧಾರದಿಂದ ಇಲ್ಲಿನ ಜನರಿಗೆಮೇವಿಲ್ಲದೆ ಪರಿಸ್ಥಿತಿ ಉಂಟಾಗಿದೆ. ಬರಗಾಲದ ಸಮಯದಲ್ಲಿ ದನ ಕರುಗಳಿಗೆ ಮೇವಿಲ್ಲದೆ ಮಾರುವ ಪರಿಸ್ಥಿತಿಗೆ ರೈತರು ಬಂದಿದ್ದಾರೆ. ಕಂಪನಿಗಳು ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ಪಾವತಿಸದೆ ವಂಚಿಸುತ್ತಿವೆ. ಇನ್ನೆರಡು ದಿನಗಳಲ್ಲಿ ತೆರಿಗೆ ಪಾವತಿ ಮಾಡದೇ ಇದ್ದಲ್ಲಿ ಗ್ರಾಮಸ್ಥರೊಂದಿಗೆ ಕಂಪನಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಗ್ರಾಪಂ ಅಧ್ಯಕ್ಷೆ ಕೆಂಚಮ್ಮ, ಉಪಾಧ್ಯಕ್ಷ ದಾದಯ್ಯ, ಸದಸ್ಯರಾದ ಲಕ್ಷ್ಮ ನಾಯ್ಕ, ಧರ್ಮವೀರ, ಪುಷ್ಪಾ, ತಿಪ್ಪಮ್ಮ, ತಿಪ್ಪೇಸ್ವಾಮಿ, ಜಯಣ್ಣ ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.