ಮೀಸಲು ದುರ್ಬಳಕೆ ಸಂವಿಧಾನಬಾಹಿರ

ಕೆಲವರಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರ ದುರುಪಯೋಗ: ಶ್ರೀನಿವಾಸಮೂರ್ತಿ

Team Udayavani, Mar 27, 2022, 3:31 PM IST

chitra

ಮೊಳಕಾಲ್ಮೂರು: ತಾಲೂಕು ಸೇರಿದಂತೆ ರಾಜ್ಯದ ಬಹುತೇಕ ಕಡೆ ಲಿಂಗಾಯತ ಜಾತಿಯವರು ಪರಿಶಿಷ್ಟ ಜಾತಿಯವರೆಂದು ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಎಸ್‌ಸಿ ಮೀಸಲಾತಿ ಸೌಲಭ್ಯ ಕಬಳಿಸುತ್ತಿರುವುದು ಸಂವಿಧಾನ ವಿರೋಧಿ ಕೃತ್ಯ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಜಿ. ಶ್ರೀನಿವಾಸಮೂರ್ತಿ ಆರೋಪಿಸಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪರಿಶಿಷ್ಟ ಜಾತಿಯ ಬೇಡಜಂಗಮ/ಬುಡ್ಗ ಜಂಗಮ ಜಾತಿ ಪ್ರಮಾಣ ಪತ್ರವನ್ನು ಅರ್ಹರಲ್ಲದ ಜಂಗಮರು, ಐನರು, ಹಿರೇಮಠದವರು, ಹಾಗೂ ವೀರಶೈವ ಲಿಂಗಾಯತರು ಕಾನೂನು ಬಾಹಿರವಾಗಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ವಂಚಿಸುವುತ್ತಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 101 ಜಾತಿಗಳಲ್ಲಿ ಬೇಡಜಂಗಮ ಹಾಗೂ ಬುಡ್ಗ ಜಂಗಮ ಜನಾಂಗವೂ ಒಂದಾಗಿದೆ. ರಾಜ್ಯದಲ್ಲಿ ಸುಮಾರು 3500 ಕುಟುಂಬಗಳಿವೆ. ಬೇಡಜಂಗಮ ಹಾಗೂ ಬುಡ್ಗ ಜಂಗಮ ಜನಾಂಗದವರು ಮೂಲತಃ ಆಂಧ್ರಪ್ರದೇಶದವರಾಗಿದ್ದಾರೆ. ಬೇಡ ಜಂಗಮ ಹಾಗೂ ಬುಡ್ಗ ಜಂಗಮ ಜನಾಂಗದವರು ಮಾಂಸಾಹಾರಿಗಳಾಗಿದ್ದು ಕಾಡುಗಳಲ್ಲಿ ಬೇಟೆಯಾಡಿ ಹಾಗೂ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ಹಿಂದುಳಿದ ಬೇಡ ಜಂಗಮ ಹಾಗೂ ಬುಡ್ಗ ಜಂಗಮ ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದೆ. ಆದರೆ ಪ್ರಸ್ತುತ ಜಂಗಮರು, ಐನರು, ಹಿರೇಮಠದವರು ಹಾಗೂ ವೀರಶೈವ ಲಿಂಗಾಯತರು ಎಂಬ ಮೂಲ ಜಾತಿಯವರಿಂದ ಗುರುತಿಸಿಕೊಳ್ಳುವವರು ಪರಿಶಿಷ್ಟ ಜಾತಿಯ ಬೇಡಜಂಗಮರೆಂದು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿದ್ದಾರೆ.

ವಿದ್ಯಾಭ್ಯಾಸ, ಸರ್ಕಾರಿ ನೌಕರಿ, ಬಡ್ತಿ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಹಣದ ಆಮಿಷ ಒಡ್ಡುವ ಜೊತೆಗೆ ರಾಜಕೀಯ ಒತ್ತಡದಿಂದ ಬೇಡಜಂಗಮ ಹಾಗೂ ಬುಡ್ಗ ಜಂಗಮರೆಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಬೇಡ ಜಂಗಮ ಹಾಗೂ ಬುಡ್ಗ ಜಂಗಮ ಜನಾಂಗದವರು ನಕಲಿ ಜಾತಿ ಪ್ರಮಾಣಪತ್ರವನ್ನು ಪಡೆದುಕೊಂಡಿರುವುದು ಶಾಸನ ಸಭೆಯಲ್ಲಿ ಚರ್ಚೆಯಾಗಿರುವುದು ರಾಜ್ಯದ ಗಮನಕ್ಕೆ ಬಂದಿದೆ. ಪರಿಶಿಷ್ಟ ಜಾತಿಯವರಿಗೆ ವಂಚಿಸಿ ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಪಡೆದ ಜಂಗಮರು, ಐನರು, ಹಿರೇಮಠದವರು ಹಾಗೂ ವೀರಶೈವ ಲಿಂಗಾಯತರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪರಿಶಿಷ್ಟ ಜಾತಿಯವರಿಗೆ ಅನ್ಯಾಯವಾಗದಂತೆ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ದಸಂಸ ತಾಲೂಕು ಘಟಕದ ಮಂಜುನಾಥ ಮಾತನಾಡಿ, ರಾಜ್ಯದಲ್ಲಿ ಮೇಲ್ಜಾತಿಗೆ ಸೇರಿದ ಜಂಗಮ ಜಾತಿ ಹಾಗೂ ಅದರ ಉಪಜಾತಿಗಳು ಪರಿಶಿಷ್ಟ ಜಾತಿಯಡಿ ಬರುವ ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡು ಮೀಸಲಾತಿ ಸೌಲಭ್ಯವನ್ನು ಕಬಳಿಸುತ್ತಿವೆ. ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕ್ಕೆ ವಂಚಿಸಲಾಗುತ್ತಿದೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಪುತ್ರಿಗೆ ಬೇಡಜಂಗಮರ ಹೆಸರಿನಲ್ಲಿ ಪರಿಶಿಷ್ಟ ಜಾತಿಯವರ ಪ್ರಮಾಣಪತ್ರ ನೀಡಿರುವುದು ಕಲಾಪದಲ್ಲಿ ತೀವ್ರವಾದ ಚರ್ಚೆಗೆ ಗ್ರಾಸವಾಗಿದೆ.

ತಾಲೂಕಿನಲ್ಲಿ ಸಹ ಬಹುತೇಕ ಜಂಗಮರು, ಲಿಂಗಾಯತರು ಸೇರಿದಂತೆ ಇನ್ನಿತರ ಮೇಲ್ವರ್ಗದ ಜನಾಂಗದವರು ನಕಲಿ ಜಾತಿ ಪ್ರಮಾಣವನ್ನು ಪಡೆದು ಪರಿಶಿಷ್ಟರಿಗೆ ಅನ್ಯಾಯವೆಸಗಿದ್ದಾರೆ. ಪಟ್ಟಣ ವ್ಯಾಪ್ತಿಯಲ್ಲಿ ಒಬ್ಬರು ಪರಿಶಿಷ್ಟ ಜಾತಿಯ ನಕಲಿ ಪ್ರಮಾಣಪತ್ರ ಪಡೆದು ಪೆಟ್ರೋಲ್‌ ಬಂಕ್‌ ಸೌಲಭ್ಯದ ಮಂಜೂರಾತಿ ಪಡೆದು ಪರಿಶಿಷ್ಟ ಜಾತಿಗೆ ವಂಚಿಸಿದ್ದಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತಹಶೀಲ್ದಾರ್‌ ಟಿ. ಸುರೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ದಸಂಸ ತಾಲೂಕು ಸಂಚಾಲಕ ಒ. ಕರಿಬಸಪ್ಪ, ಪದಾಧಿಕಾರಿಗಳಾದ ನಾಗೇಂದ್ರಪ್ಪ, ಪ್ರಶಾಂತ, ವಿಜಯಕುಮಾರ್‌, ಅನಿಲ್‌ಕುಮಾರ್‌, ಸಿದ್ದಪ್ಪ, ಟಿ. ಚಂದ್ರಣ್ಣ, ತಿಪ್ಪೇಸ್ವಾಮಿ ಮುದ್ದಪ್ಪ, ಓಂಕಾರಪ್ಪ, ನಾಗರಾಜ್‌, ರಮೇಶ್‌, ನಾಗೇಂದ್ರ, ಚಂದ್ರಪ್ಪ, ಮಾರಣ್ಣ, ರುದ್ರಪ್ಪ, ಮಹೇಶ್‌, ಶಿವಣ್ಣ, ರುದ್ರಮುನಿ, ಪಾಲಯ್ಯ, ರಾಜಣ್ಣ ಹಾಗೂ ದಸಂಸ ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದುಳಿದ ಬೇಡ ಜಂಗಮ ಹಾಗೂ ಬುಡ್ಗ ಜಂಗಮ ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದೆ. ಆದರೆ ಜಂಗಮರು, ಐನರು, ಹಿರೇಮಠದವರು ಹಾಗೂ ವೀರಶೈವ ಲಿಂಗಾಯತರು ಎಂಬ ಮೂಲ ಜಾತಿಯವರಿಂದ ಗುರುತಿಸಿಕೊಳ್ಳುವವರು ಪರಿಶಿಷ್ಟ ಜಾತಿಯ ಬೇಡಜಂಗಮರೆಂದು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವುದು ವಿಪರ್ಯಾಸ.  ಜಿ. ಶ್ರೀನಿವಾಸಮೂರ್ತಿ, ದಸಂಸ ಮುಖಂಡ

ಟಾಪ್ ನ್ಯೂಸ್

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.