ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ


Team Udayavani, May 7, 2022, 5:22 PM IST

begins

ಚಿತ್ರದುರ್ಗ: ಸೊಂಡೇಕೊಳ ಮತ್ತು ಗೊಡಬನಹಾಳ್‌ ವ್ಯಾಪ್ತಿಯಲ್ಲಿ 6.67 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.

ತಾಲೂಕಿನ ಸೊಂಡೇಕೊಳ, ನಂದಿಪುರ, ಗೊಡಬನಾಳ್‌ ಗ್ರಾಮಗಳಲ್ಲಿ ಪಿಎಂಜಿಎಸ್‌ವೈ ಮತ್ತು ಕೆಆರ್‌ಐಡಿಎಲ್‌ ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಡಾಂಬರೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಗೊಡಬನಾಳ್‌ ಗ್ರಾಮದಿಂದ ಸೊಂಡೇಕೊಳದ ಮೂಲಕ ನಂದಿಪುರ, ಅಲಗಪ್ಪನಹಟ್ಟಿ, ಓಬೇನಹಳ್ಳಿ ಉಪ್ಪಾನಾಯಕನಹಳ್ಳಿ ವರೆಗೂ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಲ್ಲಿ ಸುಮಾರು 3.17 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಮತ್ತು ಊರಿನ ಒಳಗಡೆ ಹಾದು ಹೋಗುವಾಗ ಸಿಸಿ ರಸ್ತೆಗಳು ಮಾಡಲು ಹಣ ನೀಡಿದ್ದೇನೆ. ನೀರು ಹೆಚ್ಚು ಹರಿಯುವ ಕಡೆಗಳಲ್ಲಿ ಚೆಕ್‌ ಡ್ಯಾಂ ನಿರ್ಮಾಣ ಮಾಡಿಸುವ ಮೂಲಕ ಅಂತರ್ಜಲ ವೃದ್ಧಿ ಮಾಡುವ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು.

ಉಪ್ಪಾನಾಯಕನಹಳ್ಳಿ ಕಡೆಯಿಂದ ಬುರುಜನರೊಪ್ಪ ಕಡೆ ತೆರಳುವ ರಸ್ತೆಗೂ ಪಿಎಂಜಿಎಸ್‌ವೈ ಯೋಜನೆಯಲ್ಲಿ 1.50 ಕೋಟಿ ಹಣ ನೀಡಿದ್ದು, ರಸ್ತೆ ಪೂರ್ಣವಾಗಿದೆ ಎಂದು ತಿಳಿಸಿದರು.

ಸೊಂಡೇಕೊಳ ಗ್ರಾಮದ ಎಲ್ಲ ರಸ್ತೆಗಳು ಪೂರ್ಣ

ಸೊಂಡೇಕೊಳ ಗ್ರಾಮದಲ್ಲಿ ಮಳೆ ಬಂದ ಸಂದರ್ಭದಲ್ಲಿ ನೂರಾರು ರೈತರು ತಮ್ಮ ಹೊಲಗಳಿಗೆ ಹೋಗಲು ಆಗುತ್ತಿರಲಿಲ್ಲ ಹಾಗಾಗಿ ಓಣಿ ರಸ್ತೆಗೆ ಕೆಆರ್ಡಿಎಲ್‌ ಯೋಜನೆಯಲ್ಲಿ 75 ಲಕ್ಷ ಅನುದಾನ ನೀಡಿದ್ದು ಹೊಲಗಳ ಬಾಗಿಲಲ್ಲಿ ಚಿಕ್ಕ ಡಕ್‌ ಮಾಡಲು ತಿಳಿಸಿದ್ದೇನೆ. ಸೊಂಡೇಕೊಳ ಗ್ರಾಮದ ಊರಿನ ಚಿಕ್ಕ ಪುಟ್ಟ ರಸ್ತೆಗಳಿಗೆ 45 ಲಕ್ಷ ಹಣ ನೀಡಿದ್ದು ಎಲ್ಲಾ ರಸ್ತೆಗಳು ಪೂರ್ಣವಾದಂತೆ ಆಗುತ್ತವೆ. ಮೊತ್ತೂಂದು ಭಾಗದ ರೈತರ ಹೊಲಗಳ ರಸ್ತೆಗೆ 80 ಲಕ್ಷ ನೀಡಿದ್ದು ಮಂಜೂರಾದ ತಕ್ಷಣ ಕೆಲಸ ಪ್ರಾರಂಭ ಮಾಡುತ್ತೇನೆ. 3 ಕೋಟಿ ವೆಚ್ಚದ ದೊಡ್ಡ ಚಕ್‌ ಡ್ಯಾಂ ಸಹ ಮಾಡಲಾಗಿದ್ದು ಎಲ್ಲಾವೂ ಸಹ ತುಂಬಿವೆ. ದೇವಸ್ಥಾನ ಅಭಿವೃದ್ಧಿಗೆ ಹಣ ಕೇಳಿದ್ದು ಶಾಸಕರ ಅನುದಾನದಲ್ಲಿ 5 ಲಕ್ಷ ನೀಡುತ್ತೇನೆ ಎಂದು ಭರವಸೆ ನೀಡಿದರು.

ಸೊಂಡೇಕೊಳ ಗ್ರಾಮದ ಮುಖಂಡ ರವೀಶ್‌ ಮಾತನಾಡಿದರು. ಸೊಂಡೆಕೊಳ ಗ್ರಾಪಂ ಅಧ್ಯಕ್ಷೆ ಭಾರತಮ್ಮ, ಗೊಡಬನಾಳ್‌ ಗ್ರಾಪಂ ಅಧ್ಯಕ್ಷೆ ಸವಿತಾ, ಗ್ರಾಪಂ ಸದಸ್ಯರಾದ ಸಂತೋಷ, ಓಬಮ್ಮ, ವಿಶಾಲಕ್ಷಮ್ಮ, ಕಲ್ಲಪ್ಪ, ಜಯ್ಯಪ್ಪ, ಉಮೇಶ್‌ ಮುಖಂಡರಾದ ಬಸವರಾಜ್‌, ನಾಗರಾಜ್‌, ಪ್ರಸನ್ನಕುಮಾರ್‌, ಕುಮಾರಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.