ನಾಳೆಯಿಂದ ಶಾಲಾ ಲಸಿಕಾ ಅಭಿಯಾನ: ವಿನೋತ್ ಪ್ರಿಯಾ
Team Udayavani, Dec 10, 2019, 2:29 PM IST
ಚಿತ್ರದುರ್ಗ: ಡಿಪಿಟಿ ಬೂಸ್ಟರ್ ಹಾಗೂ ಟಿ.ಡಿ. ಲಸಿಕೆ ಹಾಕುವ ಶಾಲಾ ಲಸಿಕಾ ಅಭಿಯಾನವನ್ನು ಡಿ. 11 ರಿಂದ 31 ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. 2.67 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಶಾಲಾ ಲಸಿಕಾ ಅಭಿಯಾನದ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಗಂಟಲುಮಾರಿ ಹಾಗೂ ಧನುರ್ವಾಯು ರೋಗಗಳನ್ನು ತಡೆಗಟ್ಟಬಹುದಾದ ಲಸಿಕೆಯನ್ನು ಮಕ್ಕಳಿಗೆ ಹಾಕುವ ಸಲುವಾಗಿ ಜಿಲ್ಲೆಯಲ್ಲಿ ಡಿ. 11 ರಿಂದ 31 ರವರೆಗೆ ವಿಶೇಷ ಲಸಿಕಾ ಅಭಿಯಾನ ಆರೋಗ್ಯ ಇಲಾಖೆಯಿಂದ ನಡೆಯಲಿದೆ. ಒಟ್ಟು 2,67,989 ಮಕ್ಕಳಿಗೆ ಲಸಿಕೆ ಹಾಕಲಿದ್ದು, ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳು, ಅಂಗನವಾಡಿಗಳಲ್ಲಿ ಮಕ್ಕಳಿಗೆ ಲಸಿಕೆ ದೊರೆಯಲಿದೆ.
ಅಂಗನವಾಡಿಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲಾಗಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ, ಶಾಲೆಗಳಲ್ಲಿ ತರಬೇತಿ ಹೊಂದಿದ ವ್ಯಾಕ್ಸಿನೇಟರ್ ಲಸಿಕೆ ನೀಡುತ್ತಾರೆ. ಖಾಸಗಿ ಶಾಲೆಗಳು ಸೇರಿದಂತೆ ಲಸಿಕಾ ಕಾರ್ಯಕ್ರಮದ ಅನುಷ್ಠಾನದಲ್ಲಿ ಯಾರೂ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಜಿಲ್ಲಾಧಿ ಕಾರಿಗಳು ತಾಕೀತು ಮಾಡಿದರು. ಜಿಪಂ ಸಿಇಒ ಸಿ. ಸತ್ಯಭಾಮ ಮಾತನಾಡಿ, ಮಕ್ಕಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಗಳನ್ನು ಹಾಕಿಸಿದವರು ಲಸಿಕೆ ಹಾಕಿಸಿದ ಬಗ್ಗೆ ದಾಖಲೆ ತೋರಿಸಿದರೆ ಆ ಮಕ್ಕಳಿಗೆ ಪುನಃ ಲಸಿಕೆ ನೀಡುವುದಿಲ್ಲ. ಖಾಸಗಿ ವೈದ್ಯರು ಮಕ್ಕಳಿಗೆ ಲಸಿಕೆ ಹಾಕುವ ಮೊದಲು ಮಕ್ಕಳಿಗೆ ಈಗಾಗಲೇ ಲಸಿಕೆ ಹಾಕಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ತಾಯಿ ಕಾರ್ಡ್ನಲ್ಲಿ ಲಸಿಕೆ ಹಾಕಿಸಿದ ಬಗ್ಗೆ ವಿವರ ನಮೂದಿಸಿರಬೇಕು ಎಂದರು.
ಜಿಲ್ಲಾ ಆರ್ಸಿಎಚ್ ಅಧಿ ಕಾರಿ ಡಾ| ಕುಮಾರಸ್ವಾಮಿ ಮಾತನಾಡಿ, 5 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಡಿಪಿಟಿ ಬೂಸ್ಟರ್ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ ಇದಕ್ಕಾಗಿ 38,785 ಮಕ್ಕಳನ್ನು ಗುರುತಿಸಲಾಗಿದೆ. 7 ರಿಂದ 16 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಟಿ.ಡಿ ಲಸಿಕೆಯನ್ನು ಹಾಕಲಾಗುತ್ತಿದ್ದು, ಜಿಲ್ಲೆಯಲ್ಲಿ 2,29,204 ಮಕ್ಕಳಿಗೆ ಈ ಲಸಿಕೆ ಹಾಕಲು ಗುರಿ ನಿಗದಿಪಡಿಸಲಾಗಿದೆ. ಲಸಿಕಾ ಕಾರ್ಯಕ್ರಮಕ್ಕೆ ಡಿ. 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ