ಸ್ವಉದ್ಯೋಗದಿಂದ ಸ್ವಾವಲಂಬಿಗಳಾಗಿ: ಆಂಜನೇಯ


Team Udayavani, Jul 31, 2017, 12:29 PM IST

31-CHIT-1.jpg

ಚಿತ್ರದುರ್ಗ: ಶಿಕ್ಷಣ ಪಡೆದವರು ಸರ್ಕಾರಿ ಉದ್ಯೋಗಕ್ಕಾಗಿ ಕಾಯದೆ ಯಾವುದಾದರೂ ತರಬೇತಿ, ಸರ್ಕಾರದ ಸಾಲ ಸೌಲಭ್ಯ ಪಡೆದು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಬೇಕು ಎಂದು ಸಮಾಜಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಆಂಜನೇಯ ಕರೆ ನೀಡಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದ ಕ್ರೀಡಾ ಸಂಕೀರ್ಣದಲ್ಲಿ ಡಾ| ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಭಾನುವಾರ ಆಯೋಜಿಸಿದ್ದ ಜಿಲ್ಲೆಯ ಪರಿಶಿಷ್ಟ ಜಾತಿಯ 180 ಜನ ಚರ್ಮ  ಶಲಕಮಿಗಳಿಗೆ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಶಿಬಿರವನ್ನು  ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯೆ ಕಲಿತ ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದಿಲ್ಲ. ನೌಕರಿಯನ್ನು ಅಂಕ, ಮೆರಿಟ್‌ ಆಧಾರದ ಮೇಲೆ ನೀಡಲಾಗುತ್ತಿದೆ. ಸ್ಪರ್ಧೆಯೊಡ್ಡಲು ಸಾಧ್ಯವಿಲ್ಲದವರು ಸ್ವಯಂ ಉದ್ಯೋಗದತ್ತ ಮನಸ್ಸು ಮಾಡಬೇಕು ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡ ನಿರುದ್ಯೋಗಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ವಿದ್ಯಾವಂತರು, ಕುಲಕಸುಬುದಾರರು ಯಾರೂ ನಿರುದ್ಯೋಗಿಗಳಾಗಬಾರದೆಂದು ವಿವಿಧ ಸಂಸ್ಥೆಗಳಿಂದ ಉದ್ಯೋಗಾಧಾರಿತ ತರಬೇತಿ ನೀಡುವುದರ ಜೊತೆಗೆ ಸವಲತ್ತು ಒದಗಿಸಲು ಪರಿಶಿಷ್ಟ ಜಾತಿ/ಪಂಗಡಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ. ಇಂತಹ ತರಬೇತಿಗಳನ್ನು ಪಡೆದು ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದರು. ಲಿಡ್ಕರ್‌ ಅಧ್ಯಕ್ಷರಾಗಿ ಒ. ಶಂಕರ್‌ ಅಧಿಕಾರ ವಹಿಸಿಕೊಂಡ ಮೇಲೆ ರಾಜ್ಯಾದ್ಯಂತ ಸಂಚರಿಸಿ ನಿಗಮದಿಂದ ಸಾಕಷ್ಟು ಜನರಿಗೆ ತರಬೇತಿ ಕೊಡಿಸಿ ಸವಲತ್ತು ವಿತರಿಸುತ್ತಿರುವುದು ಶ್ಲಾಘನೀಯ. ತರಬೇತಿ ಪಡೆದವರು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಲು ಶೆಡ್‌ (ಕಾರ್ಯಾಗಾರ) ನಿರ್ಮಿಸಿಕೊಡಲಾಗುವುದು. ಕುಶಲಕರ್ಮಿಗಳಿಗೆ ವಸತಿ ಸಮುತ್ಛಯ ನಿರ್ಮಿಸಿ ವಾಸಕ್ಕೆ ಅನುವು ಮಾಡಿಕೊಡಲಾಗುವುದು. ಎಸ್‌ಸಿಎಸ್‌ಟಿ ವರ್ಗದ ನಿರುದ್ಯೋಗಿಗಳು ಕೈಗಾರಿಕೆ ಪ್ರಾರಂಭಿಸಲು 10 ಕೋಟಿ ರೂ. ಸಾಲ ನೀಡಲಾಗುತ್ತಿದೆ. 5 ಸಾವಿರ ರೂ. ತರಬೇತಿ ಭತ್ಯೆ ನೀಡಲಾಗುವುದು. ಇದರ ಪ್ರಯೋಜನ ಪಡೆದುಕೊಂಡು ಪುರುಷರು, ಮಹಿಳೆಯರು ಸ್ವಯಂ ಉದ್ಯೋಗ ಮಾಡಬೇಕು ಎಂದರು. ಭರಮಸಾಗರದ ಬಳಿ ಸಿಡಿಲು ಬಡಿದು ಮೃತಪಟ್ಟ ರೈತನ ಪತ್ನಿ ಜಯಮ್ಮ ಅವರಿಗೆ ಸಚಿವರು 4 ಲಕ್ಷ ರೂ.ಗಳ ಚೆಕ್‌ ವಿತರಿಸಿದರು. 

ಕಾರ್ಯಕ್ರಮದಲ್ಲಿ ಸಂಸದ ಬಿ.ಎನ್‌. ಚಂದ್ರಪ್ಪ, ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ಮಾಜಿ ಸದಸ್ಯ ಆರ್‌.ವಿ. ವೆಂಕಟೇಶ್‌, ನಗರಸಭೆ ಪ್ರಭಾರಿ ಅಧ್ಯಕ್ಷ ಕೆ. ಮಲ್ಲೇಶಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸರ್ದಾರ್‌, ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯ ಜೋತ್ಸಾ°, ಉಪವಿಭಾಗಾಧಿ  ಕಾರಿ ಟಿ. ರಾಘವೇಂದ್ರ, ತಹಶೀಲ್ದಾರ್‌ ಮಲ್ಲಿಕಾರ್ಜುನ ಭಾಗವಹಿಸಿದ್ದರು. ಡಾ| ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಒ. ಶಂಕರ್‌ ಸ್ವಾಗತಿಸಿದರು. 

ಉದ್ಯೋಗಿಗಳು ತಯಾರಿಸುವ ಉತ್ಪನ್ನಗಳು ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರಿಗೆ ಕೈಗೆಟಕುವ  ದರದಲ್ಲಿ ಸಿಗುವಂತಿರಬೇಕು. ಆಗ ಲಿಡ್ಕರ್‌ ನಿಗಮ ಉತ್ಪನ್ನಗಳನ್ನು ಖರೀದಿಸುತ್ತದೆ. ಅಲ್ಲದೆ ಸಾರ್ವಜನಿಕರು ತಮ್ಮನ್ನು ಹುಡುಕಿಕೊಂಡು ಬರುತ್ತಾರೆ. 
ಎಚ್‌. ಆಂಜನೇಯ, ಸಮಾಜಕಲ್ಯಾಣ ಇಲಾಖೆ ಸಚಿವರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.