ಬೆಳೆ ನಷ್ಟ ಸರಿದೂಗಿಸಲು ಕುರಿ ಸಾಕಾಣಿಕೆ!


Team Udayavani, Feb 25, 2019, 7:28 AM IST

cta-1.jpg

ಚಿತ್ರದುರ್ಗ: ಹೊಸ ಸಂಶೋಧನೆ, ಹಣ್ಣಿನ ತೋಟಗಳ ವಿಸ್ತರಣೆಯಂತಹ ಕಾರ್ಯಕ್ರಮಗಳಿಗೆ ಹೆಸರಾಗಿದ್ದ ಜಿಲ್ಲೆಯ ತೋಟಗಾರಿಕೆ ಇಲಾಖೆ, ಬದಲಾದ ಕಾಲಘಟ್ಟದಲ್ಲಿ ತನ್ನ ಪಥ ಬದಲಾಯಿಸಿಕೊಂಡಿದ್ದು ಕುರಿ ಸಾಕಾಣಿಕೆಗೆ ಉತ್ತೇಜನ ನೀಡಲು ಮುಂದಾಗಿದೆ! ಹೌದು, ಅತ್ಯಂತ ಕಡಿಮೆ ಮಳೆ ಬೀಳುವ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಕೃಷಿ ಮತ್ತು ತೋಟಗಾರಿಕೆ ಬೇಸಾಯದ ಜೊತೆಗೆ ಕೃಷಿಯಲ್ಲಿನ ನಷ್ಟ ಸರಿದೂಗಿಸಲು ಕುರಿ ಸಾಕಾಣಿಕೆಗೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ವಲಯದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಜಿಲ್ಲೆಯ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 13 ತೋಟಗಾರಿಕೆ (ನರ್ಸರಿ) ಫಾರಂಗಳಿವೆ. 13ರಲ್ಲಿ 11 ತೋಟಗಾರಿಕೆ ಫಾರಂಗಳಲ್ಲಿ ತಲಾ ಐವತ್ತರಂತೆ ಕುರಿ ಸಾಕಾಣಿಕೆ ಮಾಡಲು ಉದ್ದೇಶಿಸಲಾಗಿದೆ. ಈಗಾಗಲೇ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಎನ್‌. ಮಹದೇವಪುರ ಸಸ್ಯ ಕ್ಷೇತ್ರದ ತೋಟಗಾರಿಕೆ ಫಾರಂನಲ್ಲಿ ಈಗಾಗಲೇ 50 ಕುರಿಗಳನ್ನು ಸಾಕಾಣಿಕೆ ಮಾಡಲಾಗುತ್ತಿದೆ.

ಮೊಳಕಾಲ್ಮೂರು ತಾಲೂಕಿನ ರಾಯಾಪುರದ ತೋಟಗಾರಿಕೆ ಫಾರಂನಲ್ಲೂ 50 ಕುರಿಗಳ ಸಾಕಾಣಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಉಳಿದ 9 ತೋಟಗಾರಿಕೆ ಫಾರಂಗಳಲ್ಲಿ ಶೀಘ್ರದಲ್ಲಿಯೇ ಕುರಿ ಸಾಕಾಣಿಕೆ ಆರಂಭಿಸಲಾಗುತ್ತದೆ. 

ಜಿಲ್ಲೆಯಲ್ಲಿ ಕಡಿಮೆ ನೀರು ಬಳಕೆ ಮಾಡಿ ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ರೈತರು ಪರ್ಯಾಯವಾಗಿ ಕುರಿ ಸಾಕಾಣಿಕೆಯನ್ನು ಮಾಡಲಿ ಎಂಬುದು ತೋಟಗಾರಿಕೆ ಇಲಾಖೆ ಕುರಿ ಸಾಕಾಣಿಕೆ ಮಾಡುವ ನಿರ್ಧಾರಕ್ಕೆ ಬರಲು ಪ್ರಮುಖ ಕಾರಣ. ಬರಗಾಲದ ದಿನಗಳಲ್ಲಿ ಗುಳೆ ಹೋಗುವುದನ್ನು ತಪ್ಪಿಸಲು ಲಭ್ಯ ಇರುವ ನೀರಿನಲ್ಲಿ ಕುರಿ ಸಾಕಾಣಿಕೆ ಮಾಡಿ ಹೆಚ್ಚಿನ ಲಾಭ ಪಡೆಯಲಿ ಎನ್ನುವ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಅಧಿಕಾರಿಗಳು
ಕುರಿ ಸಾಕಾಣಿಕೆಗೆ ಒತ್ತು ನೀಡಿದ್ದಾರೆ.

ಪ್ರಾತ್ಯಕ್ಷಿಕೆ ಮೂಲಕ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜತೆಗೆ ಇಲ್ಲಿನ ಪ್ರದೇಶಗಳ ಹವಾಮಾನ, ವಾತಾವರಣ ಕೂಡ ಕುರಿ ಸಾಕಾಣಿಕೆಗೆ ಯೋಗ್ಯವಾಗಿದೆ. ನರ್ಸರಿಗಳಲ್ಲಿ ಸಾಕಾಣಿಕೆ ಮಾಡುತ್ತಿರುವ ಕುರಿಗಳನ್ನು ರೈತರಿಗೆ ತೋರಿಸಿ ರೈತರನ್ನು ಕುರಿ ಸಾಕಾಣಿಕೆಯತ್ತ ಆಕರ್ಷಿಸುವ ಆಶಯ
ಹೊಂದಲಾಗಿದೆ.

ಎಷ್ಟು ಸಿಗುತ್ತೆ ಅನುದಾನ?: ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜೆನ್ಸಿಯಿಂದ ನರ್ಸರಿ ಫಾರಂಗಳಲ್ಲಿ ಕುರಿ ಸಾಕಾಣಿಕೆಗೆ (ಕೆಎಸ್‌ಎಚ್‌ಡಿಎ) 2 ಲಕ್ಷ ರೂ. ಅನುದಾನ ನೀಡಲಾಗಿದೆ. ಆ ಅನುದಾನದಲ್ಲಿ ಎನ್‌. ಮಹದೇವಪುರ ನರ್ಸರಿ ಫಾರಂನಲ್ಲಿ 50 ಗಂಡು ಕುರಿ ಮರಿಗಳನ್ನು ತಂದು ನಾಲ್ಕೈದು ತಿಂಗಳು ಸಾಕಾಣಿಕೆ ಮಾಡಲಾಗುತ್ತಿದೆ. ಕುರಿ ಮರಿಗಳಿಗೆ ಹುಲ್ಲು, ನೀರು ಇತರೆ ಆಹಾರ ನೀಡಿ ಬೆಳೆಸಲಾಗಿದೆ. ಟೆಂಡರ್‌ ಕರೆದು ಕುರಿಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ. ಇದರಿಂದ ಬಂದ ಆದಾಯವನ್ನು ಕೆಎಸ್‌ಎಚ್‌ಡಿಎಗೆ ಜಮಾ ಮಾಡಲಾಗುತ್ತದೆ.
 
ಸ್ಥಳೀಯ ಪಶು ವೈದ್ಯಾಧಿಕಾರಿಗಳು ನಿಯಮಿತವಾಗಿ ನರ್ಸರಿ ಫಾರಂಗೆ ಭೇಟಿ ನೀಡಿ ಕುರಿ ಮರಿಗಳ ಆರೋಗ್ಯ ತಪಾಸಣೆ ನಡೆಸುತ್ತಾರೆ. ಕುರಿ ಸಾಕಾಣಿಕೆ ಮತ್ತು ಇತರೆ ನಿರ್ವಹಣೆಯನ್ನು ಫಾರಂನಲ್ಲಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆ ಸಿಬ್ಬಂದಿಗಳೇ ಮಾಡುತ್ತಿದ್ದಾರೆ.
ಇದಕ್ಕಾಗಿ ಇಲಾಖೆ ಯಾವುದೇ ಅನುದಾನ ಖರ್ಚು ಮಾಡುತ್ತಿಲ್ಲ.

ರೈತರು ಸಾಂಪ್ರದಾಯಿಕ ಕೃಷಿಯನ್ನು ನಂಬಿ ಕೂರದೆ ಕುರಿ ಸಾಕಾಣಿಕೆಯತ್ತ ಗಮನ ಹರಿಸಿದರೆ ಅಲ್ಪಾವಧಿಯಲ್ಲಿ ಅಧಿಕ ಆದಾಯ ಗಳಿಸಬಹುದಾಗಿದೆ. ರೈತರು ಬರಗಾಲಕ್ಕೆ ತುತ್ತಾಗಿ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಬೆಳೆಯ ಜತೆಗೆ ಉಪಕಸುಬಿನ ರೀತಿಯಲ್ಲಿ ಕುರಿ ಸಾಕಾಣಿಕೆ ಮಾಡುವುದರಿಂದ ಆರ್ಥಿಕವಾಗಿ ಸಬಲರಾಗಬಹುದು. ಅದಕ್ಕೆ ರೈತರು ಮನಸ್ಸು ಮಾಡಬೇಕಷ್ಟೇ.

ರೈತರಿಗೆ ಪ್ರಾತ್ಯಕ್ಷಿಕೆ ನೀಡಲು ಮತ್ತು ಕಡಿಮೆ ನೀರಿನಲ್ಲಿ ಕುರಿ ಸಾಕಾಣಿಕೆ ಮಾಡಲು ಸಾಧ್ಯ ಎನ್ನುವುದನ್ನು ತೋರಿಸಲು ಕುರಿ ಸಾಕಾಣಿಕೆಗೆ ಮುಂದಾಗಿದ್ದೇವೆ. ಜಿಲ್ಲೆಯ ಆರು ತಾಲೂಕುಗಳಲ್ಲೂ ಸರ್ಕಾರಿ ಫಾರಂಗಳಿವೆ. ಅದರಲ್ಲಿ ಲಭ್ಯವಾಗುವ ಮೇವು ಬಳಸಿ ಸಾಕಾಣಿಕೆ ಮಾಡಲಾಗುತ್ತದೆ.
 ಬಿ. ದೇವರಾಜ್‌, ಹಿರಿಯ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ.

ಮೊಳಕಾಲ್ಮೂರು ಹಾಗೂ ಹೊಸದುರ್ಗ ನರ್ಸರಿ ಹೊರತುಪಡಿಸಿ ಜಿಲ್ಲೆಯ ಉಳಿದ 11 ತೋಟಗಾರಿಕೆ ಫಾರಂಗಳಲ್ಲಿ ಕುರಿ ಸಾಕಾಣಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಚಿತ್ರದುರ್ಗದ ನರ್ಸರಿ, ಟಿ.ಎನ್‌. ಕೆರೆ, ನೆಲ್ಲಿಕಟ್ಟೆ, ಐನಳ್ಳಿ, ಚಿತ್ರಹಳ್ಳಿ, ಹಾಲುರಾಮೇಶ್ವರ, ವೇದಾವತಿ ಫಾರಂ ಹಾಗೂ ನಗರಂಗೆರೆ ಗ್ರಾಮದ ನರ್ಸರಿಗಳಲ್ಲಿ ಕುರಿ ಸಾಕಾಣಿಕೆ ಮಾಡಲಾಗುತ್ತದೆ. 
ಜಿ. ಸವಿತಾ, ಉಪನಿರ್ದೇಶಕಿ,  ತೋಟಗಾರಿಕೆ ಇಲಾಖೆ.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.