ಶಿಶುನಾಳ ಶರೀಫರು ಭಾವೈಕ್ಯತೆ ಹರಿಕಾರ: ಬೆಳಗಟ್ಟ


Team Udayavani, Mar 17, 2019, 7:52 AM IST

cta-2.jpg

ಚಿತ್ರದುರ್ಗ: ಮಾದರಿ ಜೀವನ ಮಾಡಲುದಾರಿ ತೋರಿಸುವಂತಹ ತತ್ವಪದ ಮತ್ತು ಜಾನಪದ ಗೀತೆಗಳ ಮೂಲಕ ಸಂತ ಶಿಶುನಾಳ ಷರೀಫರು ಹಿಂದೂ-ಮುಸ್ಲಿಂ ಸಮುದಾಯದಲ್ಲಿ ಸಾಮರಸ್ಯ ಬಿತ್ತುವ ಕೆಲಸ ಮಾಡಿದರು ಎಂದು ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಟಿ. ಬಸವರಾಜ ಬೆಳಗಟ್ಟ ಹೇಳಿದರು.

ಇಲ್ಲಿನ ಮಠದಕುರುಬರಹಟ್ಟಿಯ ಬಸವೇಶ್ವರ ವಿದ್ಯಾಸಂಸ್ಥೆ, ಗಾಂಧಿ  ಮತ್ತು ಅಂಬೇಡ್ಕರ್‌ ಅನಾಥ ಮಕ್ಕಳ ಕುಟೀರದಲ್ಲಿ ಗಾನಯಾನ ಜಾನಪದ ಮತ್ತು ಸಾಂಸ್ಕೃತಿಕ ಕಲಾ ಸಂಸ್ಥೆ ಅಮಕುಂದಿ ಹಾಗೂ ಹಂಸಗಾನ ಕಲಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಸಂತ ಶಿಶುನಾಳ ಷರೀಫ್‌ ಮತ್ತು ಗಾನಯೋಗಿ ಡಾ| ಪಂಡಿತ್‌ ಪುಟ್ಟರಾಜ ಗವಾಯಿಗಳ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಗಾನ ನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
1819, ಮಾ.7 ರಂದು ಜನಿಸಿದ ಶಿಶುನಾಳ ಷರೀಫರು ಶಿಕ್ಷಕ ವೃತ್ತಿಯನ್ನು ತ್ಯಜಿಸಿ ಆಧ್ಯಾತ್ಮಿಕ ಜೀವನದ ಜೊತೆ ತತ್ವ ಪದ ಹಾಗೂ ಜಾನಪದ ಗೀತೆಗಳ ಮೂಲಕ ಮನುಕುಲಕ್ಕೆ ಉಪಯುಕ್ತವಾಗುವ ಸಂದೇಶಗಳನ್ನು ನೀಡಿದ್ದಾರೆ. 

ಗುರುವಿಗಿರುವ ಸ್ಥಾನ ಬೇರೆ ಯಾವುದಕ್ಕೂ ಇಲ್ಲ. ಸಂತ ಶಿಶುನಾಳ ಷರೀಫರ ಹಾಗೂ ಅವರ ಗುರುಗಳ ಸಂಬಂಧ ಅನ್ಯೋನ್ಯವಾಗಿತ್ತು. ಜ್ಞಾನ ವಿವೇಕವನ್ನು ಪ್ರತಿಯೊಬ್ಬರು ಕಲಿಯಬೇಕಾದರೆ ಗುರುಗಳ ಅನುಗ್ರಹವಿರಬೇಕು. ಕನ್ನಡ ಉರ್ದು ಭಾಷೆಯಲ್ಲಿ ಸೊಗಸಾಗಿ ಹಾಡುತ್ತಿದ್ದರು. ಪುಟ್ಟರಾಜ ಗವಾಯಿಗಳು ಹಿಂದುಸ್ಥಾನಿ ಮತ್ತು ಕರ್ನಾಟಕ ಶಾಸ್ತೀಯ ಸಂಗೀತವನ್ನು ಸುಲಲಿತವಾಗಿ ಹಾಡುತ್ತಿದ್ದರು ಈ ಇಬ್ಬರು ಪುಣ್ಯಪುರುಷರನ್ನು ಸ್ಮರಣೆ ಮಾಡಿಕೊಳ್ಳುವುದೇ ಒಂದು ಪುಣ್ಯದ ಕೆಲಸ ಎಂದು ಸ್ಮರಿಸಿದರು. ಪಿಎನ್‌ಸಿ ವ್ಯವಸ್ಥಾಪಕ ನಿರ್ದೇಶಕ ಜೈಪಾಲ್‌ಸಿಂಗ್‌, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ. ಶಂಕರಪ್ಪ, ಸಾಹಿತಿ ಆನಂದಕುಮಾರ್‌, ಸಂಗೀತ ಶಿಕ್ಷಕ ಕೆ.ಒ. ಶಿವಣ್ಣ, ಕಲಾವಿದ ಶ್ರೀನಿವಾಸ್‌ ಮಳಲಿ, ಜಾನಪದ ಮತ್ತು ಸುಗಮ ಸಂಗೀತ ಗಾಯಕ ಕೆ. ಗಂಗಾಧರ, ಪ್ರಭಾವತಿ ಶಂಕರಪ್ಪ, ಹಾಸ್ಯ ಕವಿ ಜಗದೀಶ್‌ ಇದ್ದರು. 

ಸಿದ್ದಯ್ಯನಕೋಟೆಯ ಎಂ.ನುಂಕೇಶ್‌, ಓಬಣ್ಣನಹಳ್ಳಿಯ ಹಿಮಂತರಾಜ್‌, ಕುಮಾರ್‌ ಮತ್ತು ಸಂಗಡಿಗರು ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.