ಸಿಜಿಕೆಯೆಂಬ ಮೂರಕ್ಷರದಲ್ಲಿದೆ ಮೋಡಿ: ಪಂಡಿತಾರಾಧ್ಯ ಶ್ರೀ


Team Udayavani, Jan 13, 2021, 5:58 PM IST

Shivacharya Swamiji speech

ಹೊಸದುರ್ಗ: ಸಿಜಿಕೆ ಎನ್ನುವ ಮೂರು ಅಕ್ಷರಗಳಲ್ಲಿ ಏನೋ ಮೋಡಿ ಇದೆ. ಈ ಕಾರಣಕ್ಕಾಗಿಯೇ ನಮ್ಮ ಅವರ ನಡುವೆ ಅವಿನಾಭಾವ ಸಂಬಂಧ ಇತ್ತು. ವ್ಯಕ್ತಿ ದೊಡ್ಡವನಾಗೋದು ಅವನಲ್ಲಿರೋ ಸಂಪತ್ತಿನಿಂದ ಅಲ್ಲ, ಒಳ್ಳೆ ಗುಣ, ನಡತೆಗಳಿಂದ ಎಂದು ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾಣೆಹಳ್ಳಿಯ ಎಸ್‌.ಎಸ್‌. ರಂಗಮಂದಿರದಲ್ಲಿ ನಡೆದ “ಸಿಜಿಕೆ ನೆನಪು’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು. ಸಿಜಿಕೆ ಯಾವುದೇ ಸ್ವಾಮಿಗಳನ್ನು ನಂಬುವವರಲ್ಲ. ಆದರೆ ನಮ್ಮನ್ನು ಅವರು ಸಂಪೂರ್ಣವಾಗಿ ನಂಬಿದ್ದರು. ಅಷ್ಟೇ ಅಲ್ಲ, ಅವರು ಇರುವವರೆಗೂ ಶಿವಸಂಚಾರದ ಹೊಣೆಗಾರಿಕೆಯನ್ನು ತಾವೇ ತೆಗೆದುಕೊಂಡು ನಿರ್ವಹಿಸುತ್ತಿದ್ದರು ಎಂದು ಸ್ಮರಿಸಿದರು.

ನಮ್ಮ ಮಠಕ್ಕೆ ಬಂದ ಹಲವರು ತಮ್ಮ ಬದುಕನ್ನು ಸನ್ಮಾರ್ಗದತ್ತ ತೆಗೆದುಕೊಂಡು ಹೋಗಿದ್ದಾರೆ. ಸಿಜಿಕೆ ತಾವು ಸನ್ಮಾರ್ಗದತ್ತ ನಡೆದಿದ್ದೇ ಅಲ್ಲದೆ ಸಾಣೇಹಳ್ಳಿಯ ರಂಗ ಪರಿಸರವನ್ನೇ ಎತ್ತರಕ್ಕೇರಿಸಿದರು. ಸಿಜಿಕೆ ಮತ್ತವರ ಅನೇಕ ಗೆಳೆಯರು ಸ್ವಾಮಿಗಳನ್ನು, ಮಠ ಪರಂಪರೆಯನ್ನು ವಿರೋ ಧಿಸುತ್ತಿದ್ದರು. ಆದರೆ ಅವರು ನಮ್ಮೊಟ್ಟಿಗೆ ಸಂಪರ್ಕ ಬೆಳೆಸಿದ ಮೇಲೆ ನಾವು ಇಷ್ಟು ದಿನ ಮಠಗಳಿಂದ ದೂರ ಇದ್ದು ತಪ್ಪು ಮಾಡಿದೆವು ಎನ್ನುತ್ತಿದ್ದರು ಎಂದರು.

ಇದನ್ನೂ ಓದಿ:ಬರೋಬ್ಬರಿ ಏಳು ಕೆಜಿ ತೂಕದ ಗೆಣಸು ಬೆಳೆದ ರೈತ

ಸಿಜಿಕೆ ಕುರಿತು “ನುಡಿ ನಮನ’ ಸಲ್ಲಿಸಿದ ಅಧ್ಯಾಪಕ ಎಚ್‌.ಎಸ್‌. ದಾಮೇಶ್‌ ಮಾತನಾಡಿ,ಅಂಗವೈಕಲ್ಯ ಸಿ.ಜಿ. ಕೃಷ್ಣಸ್ವಾಮಿಯವರ ದೇಹಕ್ಕಿತ್ತೇ ಹೊರತು ಮನಸ್ಸಿಗಲ್ಲ. ಅವರ ಕನಸಿಗೆ ಮಿತಿ ಇರಲಿಲ್ಲ. ಕಂಡ ಕನಸನ್ನು ನನಸು ಮಾಡುವ ತನಕ ವಿರಮಿಸುತ್ತಿರಲಿಲ್ಲ. ಇದಕ್ಕೆ ಉದಾಹರಣೆ ಸಾಣೇಹಳ್ಳಿಯಲ್ಲಿರುವ ಶ್ರೀ ಶಿವಕುಮಾರ ಬಯಲು ರಂಗಮಂದಿರ. ಇದರ ಶಂಕುಸ್ಥಾಪನೆಯ ಆಹ್ವಾನ ಪತ್ರಿಕೆಯಲ್ಲಿಯೇ ಅದರ ಉದ್ಘಾಟನಾ ದಿನವನ್ನೂ ನಮೂದಿಸಿದ್ದರು. ಅದರಂತೆ ಉದ್ಘಾಟನೆಯೂ ಆಯಿತು. ಪಂಡಿತಾರಾಧ್ಯ ಶ್ರೀಗಳಿಗೆ ರೆಪರ್ಟರಿಯೊಂದನ್ನು ಆರಂಭಿಸುವಂತೆ ಪ್ರೇರಣೆ ನೀಡಿ ಅದಕ್ಕೆ “ಶಿವಸಂಚಾರ’ ಎಂದು ಹೆಸರಿಟ್ಟವರೂ ಅವರೇ. ಇದುವರೆಗೂ ಅವರು ಇದ್ದಿದ್ದರೆ ಈಗಿರುವ ಸಾಣೇಹಳ್ಳಿಗಿಂತ ಹತ್ತು ಪಟ್ಟು ಹೆಚ್ಚು ಬೆಳೆಯುತ್ತಿತ್ತು ಎಂದು ಹೇಳಿದರು.

ಜಾನಪದ ಅಕಾಡೆಮಿಯ ಸದಸ್ಯೆ ಲಕ್ಷ್ಮೀದೇವಮ್ಮ ಉಪಸ್ಥಿತರಿದ್ದರು. ಸುಪ್ರಭೆ ಮತ್ತು ಮುಕ್ತ ವಚನಗೀತೆಗಳನ್ನು, ರಂಗಶಾಲೆಯ ಪ್ರಾಚಾರ್ಯ ಆರ್‌. ಜಗದೀಶ್‌ ಮತ್ತು ಸಂಗಡಿಗರು ರಂಗಗೀತೆಗಳನ್ನು ಹಾಡಿದರು. ಕಾರ್ಯಕ್ರಮದ ನಂತರ ವೈ.ಡಿ. ಬದಾಮಿ ನಿರ್ದೇಶನದ, ಶೃತಿ ಶರಣ್‌ಕುಮಾರ ಅಭಿನಯಿಸಿದ “ಬಣ್ಣ ಮಾಸಿದ ಮೇಲೆ’ ಏಕವ್ಯಕ್ತಿ ರಂಗಪ್ರದರ್ಶನ ನಡೆಯಿತು. ಅಧ್ಯಾಪಕ ಜಯಪ್ಪ ಕಾರ್ಯಕ್ರಮ ನಡೆಸಿಕೊಟ್ಟರು. ಸಿಜಿಕೆ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಾಯಿತು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.