ತಮಿಳುನಾಡಿನಲ್ಲಿ ಪಕ್ಷ ವಿಸ್ತರಣೆಗೆ ಬಿಜೆಪಿ ಮೇಕೆದಾಟು ಯೋಜನೆ ಮಾಡುತ್ತಿಲ್ಲ: ಸಿದ್ದರಾಮಯ್ಯ
Team Udayavani, Jan 6, 2022, 2:16 PM IST
ಚಿತ್ರದುರ್ಗ: ತಮಿಳುನಾಡಿನ ಕ್ಯಾತೆಗಾಗಿ ಬಿಜೆಪಿಯವರು ಮೇಕೆದಾಟು ಯೋಜನೆ ಮಾಡುತ್ತಿಲ್ಲ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರಿಗೆ ಕುಮ್ಮಕ್ಕು ನೀಡುತ್ತಿದ್ದಿರಿ. ತಮಿಳುನಾಡಿನಲ್ಲಿ ನಿಮ್ಮ ಪಕ್ಷ ವಿಸ್ತರಣೆಗೆ ಮೇಕೆದಾಟು ಯೋಜನೆ ಮಾಡುತ್ತಿಲ್ಲ. ಹೀಗಾಗಿ ನಮ್ಮ ಪಾದಯಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಅಜೆಂಡಾ ಅಲ್ಲ, ನಮ್ಮದು ರಾಜಕೀಯ ಪಕ್ಷ. ರಾಜಕೀಯಕ್ಕಾಗಿ ನಾವ ಪಾದಯಾತ್ರೆ ಮಾಡುತ್ತಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಡಿಪಿಆರ್ ತಯಾರಿಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದು 2.5 ವರ್ಷ ಆಯ್ತು. ಮೇಕೆದಾಟು ಯೋಜನೆ ಕಾರ್ಯಗತ ಮಾಡಲು ಯಾವುದೇ ಕಾನೂನು ಅಡೆತಡೆ ಇಲ್ಲ ಎಂದರು.
ಸಿದ್ದರಾಮಯ್ಯ ನಾಡಿನ ಆಸ್ತಿ ಎಂಬ ಸಚಿವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಕೋವಿಡ್ ಮುಂಜಾಗ್ರತಾ ಕ್ರಮವಹಿಸುತ್ತೇವೆ. ನಮ್ಮಿಂದ ನಿಮಗೂ ನಿಮ್ಮಿಂದ ನಮಗೂ ಕೋವಿಡ್ ಬರದಿರಲಿ ಎಂದು ಮಾಸ್ಕ್ ಹಾಕಿದ್ದೇವೆ. 144 ಸೆಕ್ಷನ್ ಹಾಕಿ ಜನರನ್ನು ಬರದಂತೆ ಮಾಡಿದರೆ ನಾನು ಮತ್ತು ಡಿಕೆಶಿ ನಡೆಯುತ್ತೇವೆ ಎಂದಿದ್ದೇನೆ ಅಷ್ಟೇ ಎಂದರು.
ಇದನ್ನೂ ಓದಿ:ಕೋವಿಡ್ ನಿರ್ಬಂಧ ಎಲ್ಲರಿಗೂ ಅನ್ವಯ, ಉಲ್ಲಂಘಿಸಿದರೆ ಕಾನೂನು ಕ್ರಮ: ಸಚಿವ ಆರಗ ಜ್ಞಾನೇಂದ್ರ
ಹಿಂದೂ ದೇವಸ್ಥಾನಗಳ ಕುರಿತು ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ವಾಜಪೇಯಿ ಪ್ರಧಾನಿಯಾದ ಬಳಿಕ ಮತ್ತೆ ಅಧಿಕಾರಕ್ಕೆ ಬಂದವರು ನಾವು. ನಳಿನ್ ಕುಮಾರ್ ರಾಜಕೀಯವಾಗಿ ಬುದ್ದಿ ಬೆಳೆದಿಲ್ಲ. ದೇವಸ್ಥಾನಗಳು ಮುಜರಾಯಿ ಇಲಾಖೆಯಲ್ಲಿದೆ, ಇವುಗಳನ್ನ ಆರ್ ಎಸ್ಎಸ್ ಕೈಗೆ ಕೊಡಬೇಡಿ ಎಂದು ಹೇಳುತ್ತೇವೆ. ಆರ್ ಎಸ್ಎಸ್ ನವರಿಗೆ ಕೊಡಬೇಡಿ ಎಂದರೆ ಹಿಂದೂಗಳ ವಿರೋಧಿಯಾ? ಆರ್ ಎಸ್ಎಸ್ ಮುಂದೆ ಕೈ ಮುಗಿದು ನಿಲ್ಲಬೇಕಾ, ಇದಕ್ಕೆ ಬೇಡ ಎಂದಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ