ಸಿದ್ದೇಶ್ವರನದುರ್ಗ ದೇವಾಲಯಕ್ಕೆ ಕಾಯಕಲ್ಪ


Team Udayavani, May 18, 2018, 3:56 PM IST

shiv.jpg

ಪರಶುರಾಂಪುರ: ಎಂಟನೇ ಶತಮಾನದ ನೊಳಂಬರ ಕಾಲದ್ದು ಎಂದು ಹೇಳಲಾಗಿರುವ ಗಡಿ ಗ್ರಾಮ ಸಿದ್ದೇಶ್ವರನದುರ್ಗದ ಸಿದ್ದೇಶ್ವರ ದೇವಾಲಯಕ್ಕೆ ಕಾಯಕಲ್ಪ ನೀಡಲಾಗಿದೆ. ಗ್ರಾಮದ ಸಿದ್ದೇಶ್ವರಸ್ವಾಮಿ ಭಕ್ತರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸಹಯೋಗದಲ್ಲಿ ದೇವಾಲಯದ ಜೀರ್ಣೋದ್ಧಾರ ಮಾಡಲಾಗಿದೆ.

ತುಂಬಾ ಹಳೆಯದಾದ ದೇಗುಲದ ಗೋಡೆ, ಕಲ್ಲುಗಳು ಶಿಥಿಲಗೊಂಡು ಬಿದ್ದು ಹೋಗುತ್ತಿದ್ದವು. ಗ್ರಾಮಸ್ಥರು ತಾತ್ಕಾಲಿಕವಾಗಿ ದುರಸ್ತಿ ಮಾಡಿಸಿದ್ದರು. ಗೋಪುರವೂ ಬಿರುಕು ಬಿಡಲಾರಂಭಿಸಿದಾಗ ದೇವಾಲಯದ ಜೀರ್ಣೋದ್ಧಾರಕ್ಕೆ ದೃಢಸಂಕಲ್ಪ ಮಾಡಿದರು. ಈ ಕಾರ್ಯಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವು ನೀಡಿದರು. ಧಾರ್ಮಿಕ ಮತ್ತು ದತ್ತಿ ಇಲಾಖೆಯೂ ಸಹಕಾರ ನೀಡಿತು.

ನೊಳಂಬರ ಕಾಲದ ದೇವಾಲಯ: ಸಿದ್ದೇಶ್ವರಸ್ವಾಮಿ ದೇವಾಲಯ 1200 ವರ್ಷಗಳಿಗಿಂತಲೂ ಹಳೆಯದು. ಇತಿಹಾಸದ ಪ್ರಕಾರ ಈ ದೇವಸ್ಥಾನವನ್ನು ನೊಳಂಬ ವಂಶದ ರಾಜರು ನಿರ್ಮಿಸಿರಬಹುದು ಎಂದು ಹೇಳಲಾಗುತ್ತಿದೆ. ಈ ದೇವಾಲಯದ ಕಲೆ ಮತ್ತು ವಾಸ್ತುಶಿಲ್ಪ ನೊಳಂಬರ ಇತಿಹಾಸಕ್ಕೆ ಪ್ರಮುಖ ಆಧಾರ. ಇದೊಂದು ಗುಹಾಂತರ ದೇವಾಲಯ ಮಾದರಿಯ ವಾಸ್ತುಶಿಲ್ಪ ಹೊಂದಿದೆ ಎನ್ನುತ್ತಾರೆ ದೇವಸ್ಥಾನ ಸಮಿತಿಯ ನಿರ್ದೇಶಕ ಹಾಗೂ ಭೂ
ವಿಜ್ಞಾನಿ ಡಾ| ಗಂಗಾಧರಮೂರ್ತಿ.

ಸಿದ್ದೇಶ್ವರನದುರ್ಗದ ಬೆಟ್ಟ ಕೃಷ್ಣ ಶಿಲಾ ಸ್ತೋಮದ ಬೃಹತ್‌ ಗುಂಡು-ಬಂಡೆಗಳಿಂದ ಕೂಡಿದೆ. ಸಂಶೋಧಕರ ಪ್ರಕಾರ, ಭೂಮಿ ಉದ್ಬವಿಸಿದಾಗ ಪ್ರಥಮವಾಗಿ ನಿರ್ಮಾಣವಾಗುವ ಅತ್ಯಂತ ಗಡುಸು/ಕಠಿಣವಾದ ಬೆಸಾಲ್ಟ್ ಶಿಲಾ ಕುಟುಂಬಕ್ಕೆ ಸೇರಿದ ಡಾಲರೈಟ್‌ ಶಿಲೆ ಇಲ್ಲಿದೆ ಎಂದು ತಿಳಿಸಿದರು.

ದೇವಾಲಯಗಳ ಬೀಡು: ಸಿದ್ದೇಶ್ವರನದುರ್ಗದ ಸುತ್ತ ಹಲವು ದೇಗುಲಗಳಿವೆ. ಗ್ರಾಮದ ಈಶಾನ್ಯ ದಿಕ್ಕಿಗೆ ಎಸ್‌. ಮರಡಿಹಟ್ಟಿಯಲ್ಲಿರುವ ಆಂಜನೇಯಸ್ವಾಮಿ ದೇವಾಲಯವಿದೆ. ಇಲ್ಲಿ ಹನುಮನ ವಿಗ್ರಹ ಉತ್ತರಾಭಿಮುಖವಾಗಿ ನೆಲೆಸಿರುವುದು ವಿಶೇಷ. ಪೂರ್ವಕ್ಕೆ ಒಂದು ಎಕರೆ ವಿಸ್ತೀರ್ಣದ ಪೌಳಿಯಲ್ಲಿ ಹೊಂಗೆ, ಹುಣಸೆ, ಬೇವು. ಮಾವಿನ ತೋಪಿನ ನಡುವೆ ಕಂಗೊಳಿಸುತ್ತಿರುವ ಕಂಚಿವರದಸ್ವಾಮಿ ದೇವಾಲಯವಿದೆ.

ಆಗ್ನೇಯ ದಿಕ್ಕಿಗೆ ಯಾದವ ಕುಲದೇವರುಗಳ ಪಂಚ ದೇಗುಲಗಳಿವೆ. ದಕ್ಷಿಣದ ಬೆಟ್ಟದ ಮೇಲೆ ಮಾರಿಕಾಂಬಾ, ನೈರುತ್ಯಕ್ಕೆ ದುರುಗಮ್ಮದೇವಿ, ಪಶ್ಚಿಮಕ್ಕೆ ವೀರಭದ್ರಸ್ವಾಮಿ ದೇಗುಲಗಳಿವೆ. ವಾಯುವ್ಯಕ್ಕೆ ಆಳೆತ್ತರದ ತೋಟದ
ಆಂಜನೇಯಸ್ವಾಮಿ ದೇವಾಲಯವಿದೆ. 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.