ಜಾನುವಾರುಗಳೊಂದಿಗೆ ನಾಡಕಚೇರಿಗೆ ಮುತ್ತಿಗೆ


Team Udayavani, Aug 4, 2017, 2:32 PM IST

04-CHIT-2.jpg

ನಾಯಕನಹಟ್ಟಿ: ಗೋಶಾಲೆಗೆ ಮೇವು ಪೂರೈಸುವಂತೆ ಒತ್ತಾಯಿಸಿ ರೈತರು ತಮ್ಮ ರಾಸುಗಳ ಸಮೇತ ತುರುವನೂರು ನಾಡಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ರೈತ ಕೂನಬೇವು ಶಿವಣ್ಣ ಮಾತನಾಡಿ, ತುರುವನೂರು ಗೋಶಾಲೆಯಲ್ಲಿ ಕಳೆದ ಐದು ದಿನಗಳಿಂದ ಮೇವು ಪೂರೈಕೆಯಾಗಿಲ್ಲ. ಎಂಟು ತಿಂಗಳಿನಿಂದ ಗೋಶಾಲೆಯನ್ನು ಉತ್ತಮವಾಗಿ ನಿರ್ವಹಿಸಲಾಗಿದೆ. ಆದರೆ ಮಳೆ ವಿಫಲವಾಗಿರುವ ಈ ಸಮಯದಲ್ಲಿ ಗೋಶಾಲೆಯನ್ನು ಮುಂದುವರಿಸಬೇಕು. ಕಂದಾಯ ಇಲಾಖೆ ಸಿಬ್ಬಂದಿ ಜು.25ರಂದು ಮೇವು ಪೂರೈಕೆ ಮಾಡಿದ್ದರು. ಮೂರು ದಿನಗಳ ನಂತರ ಜು. 29ರಂದು ಪೂರೈಕೆಯಾಗಿದೆ. ಇಲ್ಲಿಯವರೆಗೆ ಮೇವು ಪೂರೈಕೆಯಾಗಿಲ್ಲ. 12 ಸಾವಿರಕ್ಕೇರಿದ್ದ ಇಲ್ಲಿನ ರಾಸುಗಳು ಸಂಖ್ಯೆ ಇದೀಗ ಮೇವು ಪೂರೈಕೆ ಸಮಸ್ಯೆಯಿಂದ 4 ಸಾವಿರಕ್ಕೆ ಇಳಿದಿದೆ. ಆದರೆ ಇದೀಗ ಮೇವಿನ ಸಮಸ್ಯೆ ಉಂಟಾಗಿದೆ. ಒಂದೆಡೆ ರೈತರಲ್ಲಿ ಮೇವಿನ ದಾಸ್ತಾನು ಇಲ್ಲ. ಮತ್ತೂಂದೆಡೆ ಗೋಶಾಲೆಯಲ್ಲಿ ಮೇವಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ರೈತರು ರಾಸುಗಳನ್ನು ಕಟುಕರಿಗೆ ಮಾರಾಟ ಮಾಡಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತ ಮಹಿಳೆ ಸರೋಜಮ್ಮ ಮಾತನಾಡಿ, ಗೋಶಾಲೆ ಆರಂಭವಾದಾಗಿನಿಂದ ರಾಸುಗಳನ್ನು ಸಾಕಿಕೊಂಡು ಇಲ್ಲಿಯೇ ವಾಸವಾಗಿದ್ದೇವೆ. ಆದರೆ ಈಗ ಹೊಲ ಹಾಗೂ ಮನೆಗಳಲ್ಲಿ ಮೇವಿನ ದಾಸ್ತಾನು ಇಲ್ಲ. ಗೋಶಾಲೆ ಮುಚ್ಚಿದರೆ ರಾಸುಗಳನ್ನು ಸಾಕುವುದು ಕಷ್ಟವಾಗುತ್ತದೆ. ಆದ್ದರಿಂದ ತಕ್ಷಣ ಮೇವು ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.

ಕಚೇರಿ ಪ್ರವೇಶಕ್ಕೆ ಅವಕಾಶ ನೀಡದ ಪ್ರತಿಭಟನಾಕಾರರು ಮೇವು ಪೂರೈಕೆ ಬಗ್ಗೆ ಸ್ಪಷ್ಟವಾಗಿ ತಿಳಿಸುವವರೆಗೆ ಸಿಬ್ಬಂದಿಗೆ ಕಚೇರಿ ಒಳಹೋಗುವುದಕ್ಕೆ ಪ್ರತಿಭಟನಾಕಾರರು ಅವಕಾಶ ನೀಡಲಿಲ್ಲ. ಇದರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಿಬ್ಬಂದಿ ರೈತರೊಂದಿಗೆ ಹೊರಗೆ ನಿಲ್ಲಬೇಕಾಯಿತು. ರೈತರು
ಗೋಶಾಲೆಯಲ್ಲಿದ್ದ ಎಮ್ಮೆ, ದನ ಕರುಗಳನ್ನು ನಾಡಕಚೇರಿ ಮುಂಭಾಗದಲ್ಲಿ ಜಮಾವಣೆ ಮಾಡಿದರು. ಚಿತ್ರದುರ್ಗ ತಹಶೀಲ್ದಾರ್‌ ಮಲ್ಲಿಕಾರ್ಜುನಪ್ಪ ಶೀಘ್ರದಲ್ಲಿ ಮೇವು ಸರಬರಾಜು ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಟಾಪ್ ನ್ಯೂಸ್

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.