ಕೋವಿಡ್ ವೈರಸ್ ಹರಡದಂತೆ ಜಾಗ್ರತೆ ವಹಿಸಿ
Team Udayavani, May 8, 2020, 1:10 PM IST
ಸಾಂದರ್ಭಿಕ ಚಿತ್ರ
ಸಿರಿಗೆರೆ: ಕೋವಿಡ್ ವೈರಸ್ ಹರಡದಂತೆ ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಹೆಲ್ತ್ ಕೇರ್ ಸೆಂಟರ್ಗೆ ಭೇಟಿ ನೀಡಿ ಅವರು ಮಾತನಾಡಿದರು. ಆರೋಗ್ಯ ತಪಾಸಣೆಗೆ ಬಂದ ಜನರಲ್ಲಿ ಕೋವಿಡ್-19 ವೈರಸ್ ಬಗ್ಗೆ ಅರಿವು ಮೂಡಿಸಿ ಉಚಿತ ತಪಾಸಣೆ ಮಾಡಬೇಕು. ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ತಪಾಸಣೆಗೆ ಬಂದವರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಬೇಕೆಂದರು.
ಡಿಎಚ್ಒ ಡಾ| ಪಾಲಾಕ್ಷ ಮಾತನಾಡಿ, ಲಘು ಕೋವಿಡ್ ಪ್ರಕರಣಗಳಿದ್ದಲ್ಲಿ ಅಥವಾ ಪಾಸಿಟಿವ್ ಕಂಡು ಬಂದಲ್ಲಿ ಸಮುದಾಯ ಆರೋಗ್ಯ ಕೇಂದ್ರಲ್ಲಿ ತಪಾಸಣೆಗೆ ಅನುಕೂಲ ಮಾಡಿಕೊಡಲಾಗುವುದು. ಜಿಲ್ಲೆಯ 11 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೂರು ವಿಧವಾದ ಕೇಂದ್ರಗಳಾಗಿ ವಿಭಾಗಿಸಲಾಗಿದೆ. ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮತ್ತು ಕೋವಿಡ್ ಕೇರ್ ಸೆಂಟರ್ ಎಂದು ವಿಂಗಡಿಸಲಾಗಿದೆ. ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ಬರುವ ಮೊದಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿ. ಸೂಕ್ಷ್ಮ ಪ್ರಕರಣಗಳಿದ್ದಲ್ಲಿ ವೈದ್ಯಾಧಿಕಾರಿಗಳು ತಿಳಿಸಿದ ನಂತರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತೇವೆ ಎಂದರು. ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್, ಡಾ| ಕುಮಾರ್, ವೈದ್ಯಾಧಿಕಾರಿಗಳಾದ ರೂಪಾ, ಹೇಮಂತ್, ಶಿಲ್ಪಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ