ಏತ ನೀರಾವರಿ ಯೋಜನೆ ಯಶಸ್ಸಿಗೆ ಸಹಕಾರ ಕೊಡಿ

ಆ. 15ರೊಳಗೆ ಭರಮಸಾಗರ ಕೆರೆಗೆ ನೀರು ಹರಿಯುವುದು ನಿಶ್ಚಿತ: ಡಾ| ಶಿವಮೂರ್ತಿ ಶಿವಾಚಾರ್ಯ ಶ್ರೀ

Team Udayavani, Feb 16, 2020, 1:38 PM IST

16-February-13

ಸಿರಿಗೆರೆ: ಭರಮಸಾಗರ ಭಾಗದ ಕೆರೆಗಳನ್ನು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಕಾಮಗಾರಿ ಭರದಿಂದ ಸಾಗುತ್ತಿದೆ. ಆಗಸ್ಟ್‌ 15ರ ಒಳಗಾಗಿ ಭರಮಸಾಗರ ಕೆರೆಗೆ ನೀರು ಹರಿಯುವುದು ಬಹುತೇಕ ನಿಶ್ಚಿತ ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಲ್ಲಿನ ಗ್ರಾಮ ಪಂಚಾಯತ್‌ ನೂತನ ಕಟ್ಟಡ ಗ್ರಾಮಸೌಧವನ್ನು ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು. ಈ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಳ್ಳಲು ರೈತರ ಸಹಕಾರ ಮುಖ್ಯ. ಹಾಗಾಗಿ ಪೈಪ್‌ಗ್ಳನ್ನು ಅಳವಡಿಸುವ ಕೆಲಸಕ್ಕೆ ಅಡ್ಡಿಪಡಿಸಬಾರದು ಎಂದರು.

ಭರಮಸಾಗರ ಕೆರೆಯಿಂದ ಇನ್ನಿತರ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಸಲುವಾಗಿ ಕೊಳವೆಗಳನ್ನು ಅಳವಡಿಸಬೇಕಾಗಿದ್ದು, ಆ ಕೆಲಸ ಸ್ವಲ್ಪ ತಡವಾಗುತ್ತದೆ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಎರಡು ವರ್ಷಗಳ ಅವಧಿಯನ್ನು ನಿಗದಿಪಡಿಸಲಾಗಿದೆ. ಆ ಅವ ಧಿಯೊಳಗೆ ಭರಮಸಾಗರ ಮತ್ತು ಸಿರಿಗೆರೆ ಭಾಗದ ಎಲ್ಲಾ ಕೆರೆಗಳಿಗೂ ನೀರು ಬರಲಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವದಲ್ಲಿ ಅತ್ಯಂತ ಚಿಕ್ಕ ಘಟಕವಾಗಿರುವ ಗ್ರಾಮ ಪಂಚಾಯತ್‌ಗಳು ಅಭಿವೃದ್ಧಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಿದರೆ ದೇಶದ ಪ್ರಗತಿಗೆ ಅನುಕೂಲವಾಗುತ್ತದೆ. ಈಗೀಗ ಅಪ್ರಾಮಾಣಿಕತೆ ಮನೆ ಮಾಡಿದೆ. ಅದರ ನಡುವೆಯೂ ಸಿರಿಗೆರೆ ಗ್ರಾಪಂ ಸದಸ್ಯರು ತಮ್ಮ ಅವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಳೆಯುತ್ತಿರುವ ಗ್ರಾಮಗಳ ಅಗತ್ಯಗಳನ್ನು ಗಮನಿಸಿ ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ನೀಡುವ ವ್ಯವಸ್ಥೆ ಜಿಲ್ಲಾಡಳಿತದ ಮೂಲಕ ನಡೆಯಬೇಕು ಎಂದು ಆಶಿಸಿದರು.

ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವ ಸಲುವಾಗಿ ವಾಹನವನ್ನು ಕೊಡುಗೆಯಾಗಿ ಗ್ರಾಪಂಗೆ ನೀಡಲಾಗಿದೆ. ಇದನ್ನು ಬಳಸಿಕೊಂಡು ಸುತ್ತಲಿನ ಗ್ರಾಮಗಳ ನೈರ್ಮಲ್ಯವನ್ನೂ ಕಾಪಾಡಬೇಕು. ಅಗತ್ಯ ಬಿದ್ದರೆ ಮತ್ತೂಂದು ವಾಹನವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ತರಳಬಾಳು ಮಠದ ಚರ ಪಟ್ಟಾಧ್ಯಕ್ಷರಾಗಿದ್ದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳ
ಶ್ರದ್ಧಾಂಜಲಿ ದಿನವಾದ ಇಂದು ಗ್ರಾಮಸೌಧ ಉದ್ಘಾಟನೆಯಾಗುತ್ತಿರುವುದು ಸಂತೋಷ ತಂದಿದೆ. ಶ್ರೀಗಳು ಎಲೆಮರೆಯ ಕಾಯಿಯಂತೆ ಮಾಹೇಶ್ವರ ನಿಷ್ಠೆಯಿಂದ ಮಠದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಜಿ.ಎಂ. ವಿಶಾಲಾಕ್ಷಿ ನಟರಾಜ್‌ ಮಾತನಾಡಿ, ಜಿಲ್ಲೆಯ ವ್ಯಾಪ್ತಿಯ ಕೆರೆಗಳಲ್ಲಿ ಹೂಳು ತೆಗೆಸಲು ಜಲಾಮೃತ ಯೋಜನೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಈ ಯೋಜನೆಯಲ್ಲಿ ಭಾಗಿಯಾಗಿ ಅದನ್ನು ಯಶಸ್ವಿಗೊಳಿಸಬೇಕಾದ ಅಗತ್ಯ ಇದೆ. ಜಿಲ್ಲೆಯ ಹಲವು ಗ್ರಾಪಂಗಳು ಇಂದಿಗೂ ತುಂಬಾ ಹಿಂದುಳಿದಿದ್ದು, ಅವುಗಳ ಸುಧಾರಣೆಗೆ ಜಿಲ್ಲಾ ಪಂಚಾಯತ್‌ ಮುಂದಾಗಿದೆ. ಜಿಪಂನಿಂದ ದೊರೆಯುವ ಆರ್ಥಿಕ ನೆರವು ಬಳಸಿಕೊಂಡು ಗ್ರಾಮದ ಅಭಿವೃದ್ಧಿಗೆ ಕಾರ್ಯಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದರು.

ಜಿಪಂ ಉಪ ಕಾರ್ಯದರ್ಶಿ ರಂಗಸ್ವಾಮಿ ಮಾತನಾಡಿ, ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠ ವಿದ್ಯಾದಾನಕ್ಕೆ ಹೆಸರಾಗಿದೆ. ಸಂಸ್ಥೆಯ ಶಾಲಾ-ಕಾಲೇಜುಗಳಲ್ಲಿ ಓದಿದ ಲಕ್ಷಾಂತರ
ಯುವಕರು ಉತ್ತಮ ಸ್ಥಾನಮಾನಗಳನ್ನು ಗಳಿಸಿದ್ದಾರೆ. ಸಂಸ್ಥೆಯ ಚಿಕ್ಕಜಾಜೂರು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ನಾನು. ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸೇವೆಯನ್ನು ಎಂದಿಗೂ ಮರೆಯುವಂತಿಲ್ಲ ಎಂದು ಬಣ್ಣಿಸಿದರು. ಗ್ರಾಪಂ ಸದಸ್ಯ ಎಂ. ಬಸವರಾಜಯ್ಯ ಮಾತನಾಡಿ, ಈ ಭಾಗದಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಇತ್ತು. ಶಾಂತಿಸಾಗರದಿಂದ ಸುತ್ತಲಿನ 40 ಹಳ್ಳಿಗಳಿಗೆ ಕುಡಿಯುವ ನೀರು ತರುವ ಕೆಲಸವನ್ನು ತರಳಬಾಳು ಜಗದ್ಗುರುಗಳು ಮಾಡಿದ್ದರಿಂದ ಜನರು ನೆಮ್ಮದಿಯಿಂದ ಇರುವಂತಾಗಿದೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಶ್ರೀಮಠದಿಂದ ಸುಮಾರು 7.5 ಲಕ್ಷ ರೂ.ಗಳ ವೆಚ್ಚದಲ್ಲಿ ವಾಹನವೊಂದನ್ನು ಕೊಟ್ಟಿದ್ದಾರೆ ಎಂದರು.

ಮತ್ತೋರ್ವ ಸದಸ್ಯ ಎಂ.ಜಿ. ದೇವರಾಜ್‌ ಮಾತನಾಡಿ, ಪಿಡಿಒಗಳನ್ನು ಪದೇ ಪದೇ ವರ್ಗಾವಣೆ ಮಾಡುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಆದುದರಿಂದ ಪಿಡಿಒಗಳನ್ನು ಕೊನೆ ಪಕ್ಷ 5 ವರ್ಷಗಳ ಕಾಲ ಒಂದು ಸ್ಥಳದಿಂದ ವರ್ಗ ಮಾಡಬಾರದು ಎಂದು ಅಭಿಪ್ರಾಯಪಟ್ಟರು. ತಾಪಂ ಇಒ ಕೃಷ್ಣ ನಾಯ್ಕ, ನಾಸಿರ್‌ ಪಾಶ, ಪಾತಲಿಂಗಪ್ಪ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ರೂಪಾ ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷೆ ಸುಮಾ ನಾಗರಾಜ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ತನುಜಾ ತಿಮ್ಮರಾಜ್‌ ನಿರೂಪಿಸಿದರು. ಎಸ್‌.ಜೆ. ಮಧು ಸ್ವಾಗತಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.