ಕಚೇರಿಯಲ್ಲಿ ಕುಳಿತರೆ ಸಮಸ್ಯೆ ಬಗೆಹರಿಯಲ್ಲ; ಶಾಸಕ ಟಿ. ರಘುಮೂರ್ತಿ

ಮಳೆಯಿಂದ ಬಾಗಿರುವ, ಮುರಿದು ಬಿದ್ದಿರುವ ವಿದ್ಯುತ್‌ ಕಂಬಗಳನ್ನು ಸರಿಪಡಿಸಬೇಕೆಂದರು.

Team Udayavani, Sep 12, 2022, 4:42 PM IST

ಕಚೇರಿಯಲ್ಲಿ ಕುಳಿತರೆ ಸಮಸ್ಯೆ ಬಗೆಹರಿಯಲ್ಲ; ಶಾಸಕ ಟಿ. ರಘುಮೂರ್ತಿ

ಚಿತ್ರದುರ್ಗ: ಅಧಿಕಾರಿಗಳು ಸಮಸ್ಯೆ ಇರುವ ಕಡೆ ತೆರಳಿ ಪರಿಹಾರ ಹುಡುಕಬೇಕು. ಕಚೇರಿಯಲ್ಲಿ ಕುಳಿತು ಪತ್ರ ವ್ಯವಹಾರ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತುರುವನೂರು ಹೋಬಳಿಯ 6 ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಹೆಚ್ಚು ಮಳೆಯಾಗಿದ್ದು, ಏನೇನು ಸಮಸ್ಯೆ ಇದೆ ಎಂಬುದನ್ನು ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜನರಿಗೆ ಪರಿಹಾರ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಬೇಕು ಎಂದರು.

ಗ್ರಾಮ ಪಂಚಾಯತಿ ಪಿಡಿಒಗಳು ರಾಜಕಾರಣ ಮಾಡಬಾರದು. ಕಾನೂನು ಪ್ರಕಾರ ಸರ್ಕಾರಿ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ನಿಮ್ಮ ಹಂತ ಮೀರಿದ ಸಮಸ್ಯೆಗಳನ್ನು ತಾಲೂಕು ಪಂಚಾಯಿತಿ ಇಒ, ತಹಶೀಲ್ದಾರ್‌ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಸಮಸ್ಯೆ ನಿಮ್ಮಲ್ಲೇ ಇದ್ದರೆ ಯಾರಿಗೂ ಪರಿಹಾರ ಸಿಗುವುದಿಲ್ಲ ಎಂದು ಕಿಡಿ ಕಾರಿದರು.

ತುರುವನೂರು ಹೋಬಳಿಯ ಮಾಡನಾಯಕನಹಳ್ಳಿ, ಸುಲ್ತಾನಿಪುರ, ಬೋಗಳರಹಟಗಟ್ಟಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಕೂಡಲೇ ಕೊಳವೆಬಾವಿ ಕೊರೆಸಬೇಕು ಎಂದು ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗೆ ಸೂಚಿಸಿದರು. ಪಿಡಿಒಗಳು ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಪಟ್ಟಿ ತಯಾರಿಸಿ. ಕೆಲವು ಕಡೆಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳಿಗೆ ಬೇಡಿಕೆ ಇದೆ. ಬೆಸ್ಕಾಂ ತುರ್ತಾಗಿ ಟ್ರಾನ್ಸ್‌ಫಾರ್ಮರ್‌ ಪೂರೈಸಬೇಕು. ಪ್ರತಿ ಹಳ್ಳಿಗೆ ಭೇಟಿ ನೀಡಿ ಮಳೆಯಿಂದ ಬಾಗಿರುವ, ಮುರಿದು ಬಿದ್ದಿರುವ ವಿದ್ಯುತ್‌ ಕಂಬಗಳನ್ನು ಸರಿಪಡಿಸಬೇಕೆಂದರು.

ಮಾಡನಾಯಕನಹಳ್ಳಿ ಗ್ರಾಪಂ ಪಿಡಿಒ, ರೈತರ ಕೊಳವೆಬಾವಿಗಳನ್ನು ತಿಂಗಳಿಗೆ 4200 ರೂ. ನೀರಿನ ಬಾಡಿಗೆಗೆ ಪಡೆಯಲಾಗಿದೆ ಎಂದು ತಿಳಿಸಿದಾಗ ಸಿಡಿಮಿಡಿಗೊಂಡ ಶಾಸಕರು, ಯಾರನ್ನು ಕೇಳಿ ಬಾಡಿಗೆಗೆ ನೀರನ್ನು ಸರಬರಾಜು ಮಾಡಿದ್ದೀರಿ, ತಾಪಂ ಇಒ ಗಮನಕ್ಕೆ ತಂದಿಲ್ಲ. ಯಾವ ಪರಿಸ್ಥಿತಿಯಲ್ಲಿ ಕುಡಿಯುವ ನೀರಿಗೆ ಬಾಡಿಗೆ ಕೊಡಬೇಕು ಎನ್ನುವುದೂ ತಿಳಿದಿಲ್ಲವೇ, ಸರ್ಕಾರದ ಹಣವನ್ನು ಏನೆಂದು ತಿಳಿದುಕೊಂಡಿದ್ದೀರಿ, ಮಳೆಗಾಲದಲ್ಲಿ ನೀರಿನ ಸಮಸ್ಯೆ ಇದೆ ಎಂದು ಬಾಡಿಗೆ ಕೊಡುತ್ತೀರಾ ಎಂದು ತರಾಟೆಗೆ ತೆಗೆದುಕೊಂಡರು.

ಚಳ್ಳಕೆರೆ-ಚಿತ್ರದುರ್ಗ ರಸ್ತೆ ಸಂಪೂರ್ಣ ಹಾಳಗಿದ್ದು ಅದಷ್ಟು ಬೇಗ ಕಾಮಗಾರಿ ಮಾಡಬೇಕು. ಹುಣಸೆಕಟ್ಟೆ, ಮಾಡನಾಯಕನಹಳ್ಳಿ, ಚಿಕ್ಕಪ್ಪನಹಳ್ಳಿ ರಸ್ತೆಗಳನ್ನು ಮಾಡಬೇಕು. ತುರುವನೂರು, ಚಿಕ್ಕಗೊಂಡನಹಳ್ಳಿ, ಯಳಗೋಡು, ಮುದ್ದಾಪುರ ರಸ್ತೆ ತುರ್ತಾಗಿ ಮಾಡಬೇಕು ಎಂದು ಸೂಚಿಸಿದರು. ಮುದ್ದಾಪುರದಲ್ಲಿ ನಬಾರ್ಡ್‌ ವತಿಯಿಂದ 6 ಶಾಲಾ ಕೊಠಡಿಗಳನ್ನು ನೀಡಿದ್ದು ಕೆಲವರು ತಕರಾರು ಮಾಡಿದ್ದಾರೆ. ಕೂಡಲೇ ಸಮಸ್ಯೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಾರಂಭಿಸಲು ತಹಶೀಲ್ದಾರ್‌ಗೆ ತಿಳಿಸಿದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಇಒ ಹನುಮಂತಪ್ಪ, ತಹಶೀಲ್ದಾರ್‌ ಜಿ.ಎಚ್‌. ಸತ್ಯನಾರಾಯಣ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.