17 ತಿಂಗಳಿನಿಂದ ನಡೆದಿತ್ತು ಹಾವು ಏಣಿ ಆಟ


Team Udayavani, Feb 8, 2019, 11:39 AM IST

cta-1.jpg

ಚಿತ್ರದುರ್ಗ: ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ನಡೆಯುತ್ತಿದ್ದ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಪದಚ್ಯುತಿ ಪ್ರಯತ್ನದಲ್ಲಿ ಅವರ ವಿರೋಧಿ ಬಣಕ್ಕೆ ಕೊನೆಗೂ ನಗು ಬೀರಿದೆ. ಈ ಮೂಲಕ ಹಾವು ಏಣಿ ಆಟಕ್ಕೆ ತೆರೆ ಬಿದ್ದಿದೆ.

ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸೌಭಾಗ್ಯ ಬಸವರಾಜನ್‌ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಪರವಾಗಿ 25 ಸದಸ್ಯರು ಕೈ ಎತ್ತುವ ಮೂಲಕ ಬೆಂಬಲಿಸಿದ್ದರಿಂದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ದೊರೆಯಿತು.

ಬಿಜೆಪಿಯ ಎಂಟು, ಇಬ್ಬರು ಪಕ್ಷೇತರರು ಮತ್ತು ಕಾಂಗ್ರೆಸ್‌ ಪಕ್ಷದ ಏಳು ಸದಸ್ಯರು ಹಾಗೂ ಸೌಭಾಗ್ಯ ಬಸವರಾಜನ್‌ ಸೇರಿದಂತೆ ಒಟ್ಟು 18 ಜನ ಸದಸ್ಯರು ಅವಿಶ್ವಾಸ ನಿರ್ಣಯದ ವಿರುದ್ಧ ಇದ್ದರು. ಆದರೆ ಬುಧವಾರ ರಾತ್ರಿ ಕೆಲವರು ರಾಮನಗರ ರೆಸಾರ್ಟ್‌ಗೆ ನುಗ್ಗಿ ಅಲ್ಲಿದ್ದ ಪಕ್ಷೇತರ ಸದಸ್ಯೆಯನ್ನು ಅಪಹರಣ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದರಿಂದ ಸೌಭಾಗ್ಯ ಪರ ಇದ್ದವರು ವಿಶೇಷ ಸಾಮಾನ್ಯ ಸಭೆಯಿಂದ ದೂರ ಉಳಿದರು. ಸೌಭಾಗ್ಯ ಹಾಗೂ ಬಿಜೆಪಿ ಸದಸ್ಯ ಅಜ್ಜಪ್ಪ ಅವರಿಬ್ಬರೇ ಆಗಮಿಸಿ ಸೋಲು ಸ್ವೀಕರಿಸಿದರು.

17 ತಿಂಗಳ ಹಿಂದಿನಿಂದಲೇ ಪದಚ್ಯುತಿಗೆ ಯತ್ನ: ವಿಧಾನಸಭಾ ಚುನಾವಣೆಗೂ ಮುನ್ನ ಜಿಪಂ ಅಧ್ಯಕ್ಷೆ ಪದಚ್ಯುತಿ ಪ್ರಕ್ರಿಯೆ ಆರಂಭಗೊಂಡಿತ್ತು. 17 ತಿಂಗಳ ನಂತರ ಅವಿಶ್ವಾಸ ತಂದು ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ. ಆದರೆ ಅವಿಶ್ವಾಸ ನಿರ್ಣಯ ಮಂಡಿಸಿ ಗೆಲ್ಲಲು ಸಾಕಷ್ಟು ಪ್ರಯಾಸ ಪಡಬೇಕಾಯಿತು.

ಕಳೆದ ಜ.25 ರಂದು ಅವಿಶ್ವಾಸ ನಿರ್ಣಯದ ಪರ ಇದ್ದ ಸದಸ್ಯರು ಗೋವಾಕ್ಕೆ ಪ್ರವಾಸ ತೆರಳಿದ್ದರು. ಬಿಜೆಪಿಯ ಒಟ್ಟು ಹತ್ತು ಸದಸ್ಯರಲ್ಲಿ ಜಿ.ಆರ್‌. ಹಳ್ಳಿ ಕ್ಷೇತ್ರದ ಕೆ.ಟಿ. ಗುರುಮೂರ್ತಿ ಹಾಗೂ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಕ್ಷೇತ್ರದ ಎಚ್.ಆರ್‌. ಗೌರಮ್ಮ ಅವರು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರಿಗೆ ಆಪ್ತರು. ಆದರೆ ಅವಿಶ್ವಾಸದ ಪರವಾಗಿ ಕೈ ಎತ್ತಿದ್ದಾರೆ. ಜೆಡಿಎಸ್‌ನ ಇಬ್ಬರು ಸದಸ್ಯರು ಕೂಡ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಿದರು.

ಕೈ ಕೊಟ್ಟ ಜೆಡಿಎಸ್‌ ಸದಸ್ಯರು: ಜೆಡಿಎಸ್‌ನ ಇಬ್ಬರು ಸದಸ್ಯರು, ಸೌಭಾಗ್ಯ ಬಸವರಾಜನ್‌ ನಮ್ಮ ಮುಂದೆ 11 ಸದಸ್ಯರನ್ನು ಪರೇಡ್‌ ಮಾಡಿಸಿದರೆ ನಾವು ಅವರ ಪರವಾಗಿ ನಿಲ್ಲುವುದಾಗಿ ಹೇಳಿದ್ದರು. ಈ ಮಾತನ್ನು ನಂಬಿದ ಸೌಭಾಗ್ಯ 11 ಸದಸ್ಯರನ್ನು ಪರೇಡ್‌ ಮಾಡಿಸಿದರೂ ಕೊನೆ ಕ್ಷಣದಲ್ಲಿ ಜೆಡಿಎಸ್‌ ಸದಸ್ಯರು ಕೈ ಕೊಟ್ಟಿದ್ದಾರೆ. ಈ ಮೂಲಕ ಜೆಡಿಎಸ್‌ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರ ಸೂಚನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಸೌಭಾಗ್ಯ ಬಸವರಾಜನ್‌, ಜೆಡಿಎಸ್‌ ಸದಸ್ಯರಾದ ಮುತ್ತುರಾಜ್‌, ತ್ರಿವೇಣಿ ಒಂದೇ ಸಮುದಾಯಕ್ಕೆ ಸೇರಿದ್ದರಿಂದ ಸೌಭಾಗ್ಯ ಪರ ನಿಲ್ಲಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.