ಶಿಕ್ಷಣದಿಂದಷ್ಟೇ ಸಮಾಜ ಪರಿವರ್ತನೆ


Team Udayavani, Oct 30, 2017, 4:17 PM IST

30-30.jpg

ಚಿತ್ರದುರ್ಗ: “ದುಡ್ಡೇ ದೊಡ್ಡಪ್ಪ, ವಿದ್ಯೆ ಅವರಪ್ಪ’ ಎಂಬಂತೆ ವಿದ್ಯಾವಂತರಾದರೆ ಸಮಾಜದ ಬದಲಾವಣೆ ಸೇರಿದಂತೆ ಏನನ್ನಾದರೂ ಸಾಧಿಸಬಹುದು. ಆದ್ದರಿಂದ ಪೋಷಕರು ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಆಂಜನೇಯ ಕರೆ ನೀಡಿದರು.

ನಗರದ ಹೊರ ವಲಯದಲ್ಲಿನ ಚಳ್ಳಕೆರೆ ರಸ್ತೆಯ ವೆಂಕಟೇಶ್ವರ ಬಡಾವಣೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ “ದುರ್ಗದ ಚಿತ್ರ ಶಾಲೆಯತ್ತ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದೆಂದು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರಲು ವಿನೂತನವಾದ ಯೋಜನೆಯನ್ನು ಜಿಲ್ಲಾಧಿಕಾರಿಯವರ ನೇತೃತ್ವದ ಅಧಿಕಾರಿಗಳ ತಂಡ ರೂಪಿಸಿದೆ. ರಾಜ್ಯದಲ್ಲೇ ವಿನೂತನ ಕಾರ್ಯಕ್ರಮ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದೆ ಸಮಾಜದಲ್ಲಿ ಬಡತನ ಹೆಚ್ಚಿತ್ತು. ಶೈಕ್ಷಣಿಕ ಅಭಿವೃದ್ಧಿಗೆ ಹಳಿಕೊಳ್ಳುವಂತಹ ಕಾರ್ಯಕ್ರಮವೂ ಇರಲಿಲ್ಲ. ಆದರೆ ಈಗ ಸರ್ಕಾರ ಜನರಿಗೆ ಅನ್ನಭಾಗ್ಯ, ಮಕ್ಕಳಿಗಾಗಿ ಬಿಸಿಯೂಟ, ಕ್ಷೀರಭಾಗ್ಯ, ಸಮವಸ್ತ್ರ, ಪಠ್ಯಪುಸ್ತಕ, ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ಒದಗಿಸುತ್ತಿದೆ. ಸರ್ಕಾರದ ಸವಲತ್ತು ಸದುಪಯೋಗಪಡಿಸಿಕೊಂಡು ಉನ್ನತಿ ಸಾಧಿಸಬೇಕು ಎಂದರು. ಮಕ್ಕಳು ಅಕ್ಷರ ವಂಚಿತರಾಗಿ ಸಮಾಜಕ್ಕೆ ಶಾಪವಾಗಬಾರದು. ಈ ನಿಟ್ಟಿನಲ್ಲಿ ಶಾಲಾಭಿವೃದ್ಧಿ ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳ ಸದಸ್ಯರ ಜವಾಬ್ದಾರಿ ಹೆಚ್ಚಿದೆ. ಜನರೇ ಸರ್ಕಾರಿ ಶಾಲೆಗಳ ಮಾಲೀಕರಾಗಿದ್ದು, ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗಳಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಲೆ ಬಿಟ್ಟಿದ್ದರು. ಇದನ್ನು ಗಮನಿಸಿದ ಶಿಕ್ಷಕರು ನೇರವಾಗಿ ಐದನೇ ತರಗತಿಗೆ ಸೇರಿಸಿದ್ದರಿಂದ ಇಂದು ಅತ್ಯುತ್ತಮ ಮುಖ್ಯಮಂತ್ರಿಯಾಗಿ ದೇಶಕ್ಕೆ ಮಾದರಿ ಆಡಳಿತ ನೀಡುತ್ತಿದ್ದಾರೆ ಎಂದರು. ಅ. 29 ರಿಂದ ಒಂದು ವಾರದವರೆಗೆ ಜಿಲ್ಲೆಯ 180 ಗ್ರಾಮಗಳಲ್ಲಿ ಅ ಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತರಲು ಬೀದಿನಾಟಕ, ಜಾಥಾ ಏರ್ಪಡಿಸಲಾಗಿದ್ದು, ಈ ವಾಹನಗಳಿಗೆ ಸಚಿವರು ಹಸಿರು ನಿಶಾನೆ ತೋರಿದರು.

ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌, ತಾಪಂ ಅಧ್ಯಕ್ಷ ವೇಣುಗೋಪಾಲ್‌, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಂದ್ರ ನಾಯ್ಕ, ಸದಸ್ಯ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ°, ಜಿಪಂ ಸಿಇಒ ರವೀಂದ್ರ, ಅಪರ ಜಿಲ್ಲಾಧಿಕಾರಿ ಟಿ. ರಾಘವೇಂದ್ರ, ಗ್ರಾಪಂ ಸದಸ್ಯೆ ರಜನಿ, ತಹಶೀಲ್ದಾರ್‌ ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ, ದೈಹಿಕ ಶಿಕ್ಷಣ ನಿರ್ದೇಶಕ ಜಯಣ್ಣ ಹಾಗೂ ವಿವಿಧ ಅಧಿಕಾರಿಗಳು ಇದ್ದರು.  

ಡಿಡಿಪಿಐ ರೇವಣಸಿದ್ದಪ್ಪ ಸ್ವಾಗತಿಸಿದರು. ವೆಂಕಟೇಶ್ವರ ಬಡಾವಣೆಯಿಂದ ಆರಂಭಗೊಂಡ ಜಾಥಾ, ಚಳ್ಳಕೆರೆ ಟೋಲ್‌ಗೇಟ್‌ ಮೂಲಕ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ ತಲುಪಿತು.

ಮರಾಠಿ ಶಿಕ್ಷಕರ ನೇಮಕಕ್ಕೆ ಸೂಚನೆ 
ಜಾಥಾ ಅಂಗವಾಗಿ ರಸ್ತೆಯಲ್ಲಿ ಸಾಗುತ್ತಿದ್ದ ಸಚಿವ ಎಚ್‌. ಆಂಜನೇಯ ಅವರು ರಸ್ತೆ ಬದಿಯ ಬಿಡಾರದ ಕಡೆ ಕಣ್ಣಾಯಿಸಿದರು. ಕೂಡಲೇ ಸ್ಥಳಕ್ಕೆ ಹೋಗಿ ಬಿಡಾರದಲ್ಲಿದ್ದವರ ಅಹವಾಲು ಆಲಿಸಿದರು. ಬಿಡಾರದಲ್ಲಿದ್ದ ಮಕ್ಕಳು ಮರಾಠಿಗರು ಎಂಬುದು ಗೊತ್ತಾಯಿತು. ಆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಆದ್ದರಿಂದ ಮರಾಠಿ ಶಿಕ್ಷಕರನ್ನು ನೇಮಕ ಮಾಡಿ ಗುಡಾರದಲ್ಲಿನ ಮಕ್ಕಳಿಗೆ ಶಿಕ್ಷಣ ಕಲಿಸಬೇಕು. ಸರ್ಕಾರಿ ಶಾಲೆಯಲ್ಲಿ ಈ ಮಕ್ಕಳನ್ನು ದಾಖಲು ಮಾಡಿಕೊಳ್ಳುವಂತೆ ಎಂದು ಡಿಡಿಪಿಐಗೆ ಸೂಚಿಸಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.