ಸಮಾಜ ಕಲ್ಯಾಣ ಇಲಾಖೆ ಎಫ್ಡಿಎ ಲೋಕಾಯುಕ್ತ ಬಲೆಗೆ
11 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ
Team Udayavani, Sep 22, 2022, 9:50 PM IST
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್ಗಳಿಗೆ ಪಾತ್ರೆ ಮತ್ತಿತರೆಪರಿಕರಗಳನ್ನು ಸರಬರಾಜು ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕ ನರಸಿಂಹಮೂರ್ತಿ ಬಂಧಿತ ಆರೋಪಿ.ಸಜ್ಜನಕೆರೆ ಗ್ರಾಮದ ಕಲ್ಲೇಶ್ವರ ಏಜೆನ್ಸಿ ಮಾಲಿಕ ಎಸ್.ಬಿ.ಲೋಕೇಶ್, ಆಗಸ್ಟ್ 2 ರಂದು ಸಮಾಜ ಕಲ್ಯಾಣ ಇಲಾಖೆ ಕರೆದಿದ್ದ ಟೆಂಡರ್ನಲ್ಲಿ ಭಾಗವಹಿಸಿ ಕಾರ್ಯಾದೇಶ ಪಡೆದು ಹಿಂಡಾಲಿಯಂ ಪಾತ್ರೆ, ಮುಚ್ಚಳ, ಮಿಕ್ಸಿ, ಸ್ಟೀಲ್ ಬಕೇಟ್ಗಳನ್ನು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಸರಬರಾಜು ಮಾಡಿದ್ದರು.
ಇದನ್ನೂ ಓದಿ:ಕಲ್ಲು, ಮರಳು ಗಣಿಗಾರಿಕೆ ಬಾಬ್ತಿನ ರಾಜಧನ ಸೋರಿಕೆ ತಡೆಗಟ್ಟಲು ಕ್ರಮ: ಸಿಎಂ ಬೊಮ್ಮಾಯಿ
ಈ ಬಾಬ್ತು ಬಿಲ್ ಪಾವತಿ ಮಾಡಲು ಕೋರಿದಾಗ, 11 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸ್.ಬಿ.ಲೋಕೇಶ್ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ್ದರು.
ಸೆ.22 ಗುರುವಾರ 11 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನರಸಿಂಹಮೂರ್ತಿ ಹಣದ ಸಮೇತ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಿ.ಮಂಜುನಾಥ್ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಟ್ರಾö್ಯಪ್ ನಡೆದಿದ್ದು, ಲೋಕಾಯುಕ್ತ ಕಚೇರಿಯ ಪೊಲೀಸ್ ನಿರೀಕ್ಷಕರಾದ ಬಿ.ಕೆ.ಲತಾ, ವೈ.ಎನ್.ಶಿಲ್ಪಾ, ಸಿಬ್ಬಂದಿಗಳಾದ ಜಿ.ಎಂ.ತಿಪ್ಪೇಸ್ವಾಮಿ, ಎಚ್.ಶ್ರೀನಿವಾಸ್, ಎಸ್.ಆರ್.ಪುಷ್ಪಾ, ಕೆ.ಟಿ.ಮಾರುತಿ, ಎಲ್.ಜಿ.ಸತೀಶ್, ಜಿ.ಎನ್.ಸಂತೋಷ್ಕುಮಾರ್, ಆರ್.ಟಿ.ಚಂದ್ರಶೇಖರ್, ಎಂ.ವೀರೇಶ್, ಡಿ.ಮಾರುತಿ, ಆರ್.ವೆಂಕಟೇಶ್, ಟಿ.ವಿ.ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ