ಪರಿಹಾರ ಹಣ ಬಿಡುಗಡೆಗೆ ಆಗ್ರಹ
Team Udayavani, Mar 21, 2018, 7:51 PM IST
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ಅಗಲಿಕರಣ ಸಂಬಂಧ ಗೂಡಂಗಡಿಗಳನ್ನು ಕಳೆದುಕೊಂಡವರಿಗೆ ಪರಿಹಾರದ ಹಣ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಗ್ಯಾರೇಜ್ ಹಾಗೂ ಡಬ್ಟಾ ಅಂಗಡಿಗಳ ಮಾಲೀಕರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಧರಣಿ ನಡೆಸಿದರು.
ತಾಲೂಕಿನ ಪಿಳ್ಳೆಕೆರನಹಳ್ಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-13ರ ಅಗಲೀಕರಣ ಸಂದರ್ಭದಲ್ಲಿ ಹೆದ್ದಾರಿಯ ಎರಡು
ಬದಿಗಳಲ್ಲಿದ್ದ ಗ್ಯಾರೇಜ್, ಡಬ್ಬದ ಹೋಟೆಲ್ ಗಳನ್ನು ತೆರವುಗೊಳಿಸಲಾಗಿದೆ. ಇದಾಗಿ ಎರಡು ವರ್ಷಗಳಾಗಿದ್ದರೂ ಯಾವುದೇ ಪರಿಹಾರ ನೀಡಿಲ್ಲ. ಗ್ಯಾರೇಜ್ ಮತ್ತು ಡಬ್ಟಾ ಅಂಡಿಗಳನ್ನು ತೆರವುಗೊಳಿಸಿದರೆ ಪ್ರತ್ಯೇಕ ಜಾಗ ನೀಡುವಂತೆ ಗ್ಯಾರೇಜ್ ಹಾಗೂ ಡಬ್ಟಾ ಹೋಟೆಲ್ಗಳ ಬಡ ಕೂಲಿ ಕೆಲಸಗಾರರು ಅನೇಕ ಬಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ
ಮನವಿ ಮಾಡಿದ್ದರು. ಹೆದ್ದಾರಿ ತೆರವಿನಿಂದ ಗ್ಯಾರೇಜ್, ಗೂಡಂಗಡಿ ಹಾಗೂ ಡಬ್ಬದಂಗಡಿಗಳನ್ನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೇಂದ್ರದಿಂದ ಹಣ ಮಂಜೂರಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ಭೇಟಿಯಾದಾಗ ಹಣ ಬಂದಿದ್ದು ಜಿಲ್ಲಾಧಿಕಾರಿ ಖಾತೆಗೆ ಜಮಾ ಮಾಡಲಾಗಿದೆ. ಹಾಗಾಗಿ ನಿಮ್ಮ ಪರಿಹಾರವನ್ನು ಜಿಲ್ಲಾಧಿಕಾರಿ ಬಳಿ ಪಡೆದುಕೊಳ್ಳಿ ಎಂದು ತಿಳಿಸಿ
ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎನ್.ಎಚ್-13 ಗ್ಯಾರೇಜ್-ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷಎಚ್.ಆರ್. ಮಹಮ್ಮದ್ ಮಾತನಾಡಿ, 2017, ಆಗಸ್ಟ್ನಲ್ಲೇ ಪರಿಹಾರದ ಮೊತ್ತ ಬಿಡುಗಡೆಯಾಗಿದೆ. ಜಿಲ್ಲಾ ಧಿಕಾರಿ ಬಳಿ ಹಣ ಇರುವುದರಿಂದ ಕೂಡಲೆ
ಪರಿಹಾರ ನೀಡುವಂತೆ ನಾಲ್ಕೈದು ಬಾರಿ ಒತ್ತಾಯಿಸಿದರೂ ಜಿಲ್ಲಾ ಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪ್ರತಿ ಮಂಗಳವಾರ ನಡೆಯುವ ಜನಸ್ಪಂದನ ಸಭೆಯಲ್ಲಿಯೂ ಮನವಿ ಮಾಡಿದ್ದೇವೆ. ಜಿಲ್ಲಾ ಧಿಕಾರಿಗಳು ಬಡ, ಕೂಲಿ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕೂಡಲೇ ಪರಿಹಾರದ ಮೊತ್ತ ನೀಡಬೇಕು ಎಂದು ಒತ್ತಾಯಿಸಿದರು. ಅಖೀಲ ಕರ್ನಾಟಕ ಜನಸೇವಾ ಸಂಘದ ಅಧ್ಯಕ್ಷ ಅಮ್ಜದ್ ಖಾನ್, ಉಪಾಧ್ಯಕ್ಷ ಉಮ್ಮರ್, ಅನ್ವರ್ ಭಾಷಾ, ಜಾಕೀರ್, ತನ್ವೀರ್ ಬಾಬು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ