ಕೆಲ ಜನಪ್ರತಿನಿಧಿಗಳಿಂದ ಮೀಸಲು ಹೋರಾಟ ತಪ್ಪಾಗಿ ಅರ್ಥೈಕೆ


Team Udayavani, Mar 27, 2021, 8:18 PM IST

ಕಜಹಗಹಜಲಕಜಹಗ್

ಚಿತ್ರದುರ್ಗ: ಪಂಚಮಸಾಲಿ ಸಮುದಾಯದ ಮೀಸಲು ಹೋರಾಟವನ್ನು ಕೆಲ ಜನಪ್ರತಿನಿಧಿಗಳು ತಪ್ಪಾಗಿ ಅರ್ಥೈಸಿಕೊಂಡು ವಿರೋಧಿಸಿದ್ದಾರೆ. ಸಣ್ಣ ಸಣ್ಣ ಸಮುದಾಯಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾರೆ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಃರಂಗದಲ್ಲಿ ನೋಡಿದರೆ ಸಣ್ಣಪುಟ್ಟ ಸಮಾಜಗಳು ನಮ್ಮ ಹೋರಾಟ ಬೆಂಬಲಿಸಿದ್ದಾರೆ. ನಾವು ಯಾರಿಗೂ ಅನ್ಯಾಯ ಮಾಡಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಾಗುತ್ತಿದ್ದೇವೆ. ಚುನಾವಣಾ ರಾಜಕಾರಣಕ್ಕೂ ಮೀಸಲಾತಿ ಹೋರಾಟಕ್ಕೂ ಸಂಬಂಧವಿಲ್ಲ. ಮೀಸಲಾತಿಯನ್ನು ಚುನಾವಣಾ ರಾಜಕಾರಣಕ್ಕೆ ಒಳಪಡಿಸುವ ಕೆಲಸವನ್ನು ಸಮಾಜ ಎಂದಿಗೂ ಮಾಡುವುದಿಲ್ಲ. ಈಗ ಉಪಚುನಾವಣೆ ಇರುವುದರಿಂದ ಬಹಳಷ್ಟು ಜನ ಈ ಬಗ್ಗೆ ಕೇಳುತ್ತಿದ್ದಾರೆ. ಆದರೆ ಯಾವ ಕಾರಣಕ್ಕೂ ಚುನಾವಣಾ ರಾಜಕಾರಣ ಮತ್ತು ಮೀಸಲಾತಿ ಹೋರಾಟಕ್ಕೆ ಸಂಬಂಧ ಕಲ್ಪಿಸುವ ಪ್ರಯತ್ನ ಮಾಡುವುದಿಲ್ಲ.

ಚುನಾವಣೆ ಅವರವರ ಆಲೋಚನೆಗೆ ಬಿಟ್ಟದ್ದು ಎಂದರು. ಕೆಲವರು ಬಹಿರಂಗವಾಗಿ ಪಂಚಮಸಾಲಿ ಪ್ರಬಲ ಸಮುದಾಯ ಆಗಿದ್ದು 2ಎಗೆ ಸೇರಿಸಬೇಡಿ ಎಂದು ಹೇಳುತ್ತಿದ್ದಾರೆ. ನಾವು ಜನಸಂಖ್ಯೆಯಲ್ಲಿ ಪ್ರಬಲರಿದ್ದೇವೆ, ಆದರೆ ಸಾಮಾಜಿಕ ಸ್ಥಿತಿಗತಿ ಹಾಗೂ ಅನ್ಯಾಯಕ್ಕೆ ಒಳಪಟ್ಟು ನಾವು ಬಹಳ ಹಿಂದುಳಿದಿದ್ದೇವೆ. ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿಯೂ ಹಿಂದುಳಿದಿದ್ದೇವೆ.

ಈ ಎರಡು ವಿಚಾರಗಳ ಆಧಾರದ ಮೇಲೆ ನಾವು ಮೀಸಲಾತಿ ಕೇಳುತ್ತಿದ್ದೇವೆ. ಹೋರಾಟದ ಮೂಲಕ ನಾವು ಸರ್ಕಾರವನ್ನು ಮುಟ್ಟಿದ್ದೇವೆ. ಕಾಲಮಿತಿಯೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದೆ. ಸೆ.15ರವರೆಗೆ ಗಡುವು ನೀಡಲಾಗಿದೆ. ಬೇಡಿಕೆ ಈಡೇರದಿದ್ದಲ್ಲಿ ಅ.15ರಿಂದ ಮತ್ತೆ ಹೋರಾಟ ಮುಂದುವರಿಸಲಾಗುತ್ತದೆ. ಸರ್ಕಾರ ಮೀಸಲಾತಿ ಕೊಡುವ ಭರವಸೆ ನೀಡಿರುವುದು ನಮ್ಮ ಹೋರಾಟದ ಪ್ರಥಮ ಜಯ. ಸಮಾಜದ ಒಗ್ಗಟ್ಟಿನ ಪರಿಣಾಮ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಹೋರಾಟದ ಮುಂದುವರಿದ ಭಾಗ ಎಂದರು. ಎಸ್‌.ಎಂ. ತಿಪ್ಪೇಸ್ವಾಮಿ, ಮಹಡಿ ಶಿವಮೂರ್ತಿ, ಮುಖಂಡರಾದ ಜಿತೇಂದ್ರ ಎನ್‌. ಹುಲಿಕುಂಟೆ, ಮಂಜುನಾಥ್‌, ಪರಮೇಶ್‌, ಯೋಗೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.