ಶೌಚಾಲಯ ಅವ್ಯವಸ್ಥೆಗೆ ಶಾಸಕರ ಕಿಡಿ


Team Udayavani, Jan 25, 2019, 9:35 AM IST

cta-1.jpg

ಚಿತ್ರದುರ್ಗ: ಬಸ್‌ ನಿಲ್ದಾಣ ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ಗುತ್ತಿಗೆ ನಿಬಂಧನೆಗಳನ್ನು ಉಲ್ಲಂಘಿಸಿ ಮನ ಬಂದಂತೆ ಹಣ ಸುಲಿಗೆ ಮಾಡಿ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಖಾಸಗಿ ಬಸ್‌ ನಿಲ್ದಾಣದಲ್ಲಿನ ಸಾರ್ವಜನಿಕ ಶೌಚಾಲಯಕ್ಕೆ ಗುರುವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ ಅವರು, ಶೌಚಾಲಯಗಳು ಗಬ್ಬು ನಾರುತ್ತಿವೆ. ಮನುಷ್ಯರ್ಯಾರೂ ಶೌಚಾಲಯದೊಳಗೆ ಬರುವಂತಿಲ್ಲ. ಮೂರು ರೂ. ವಸೂಲಿ ಮಾಡುವ ಕಡೆ 6 ರೂ.ಗಳನ್ನು ವಸೂಲಿ ಮಾಡುತ್ತಿರುವುದು ಹಗಲು ದರೋಡೆಯಲ್ಲವೇ ಎಂದು ಕಿಡಿ ಕಾರಿದರು.

ಖಾಸಗಿ ಬಸ್‌ ನಿಲ್ದಾಣಕ್ಕೆ ಪ್ರತಿ ನಿತ್ಯ ಹತ್ತಾರು ಸಾವಿರ ಪ್ರಯಾಣಿಕರು ಬಂದು ಹೋಗುತ್ತಾರೆ. ಇಂತಹ ಸಂದರ್ಭದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಲು ಶೌಚಾಲಯ ಬಳಕೆ ಮಾಡುವುದು ಅನಿವಾರ್ಯ. ಈ ಪರಿಸ್ಥಿತಿಯನ್ನೇ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ 5-6 ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡಲಾಗುತ್ತಿದೆ. ದುಡ್ಡು ಕೊಡದವರ ಮೇಲೆ ಹಿಂಸೆ, ದೌರ್ಜನ್ಯ ಎಸಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಸ್ಥಳಕ್ಕೆ ಗುತ್ತಿಗೆದಾರರನ್ನು ಕರೆಸಿ ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಗ ನಗರಸಭೆ ಅಧಿಕಾರಿಗಳು, ಶೌಚಾಲಯ ಪರಿಶೀಲಿಸಲು ಶಾಸಕರು ಬರುವ ಮಾಹಿತಿ ಪಡೆದು

ಗುತ್ತಿಗೆದಾರ ಕಾಲು ಕಿತ್ತಿದ್ದಾನೆಂದು ಶಾಸಕರಿಗೆ ತಿಳಿಸಿದರು. ಇದರಿಂದ ಮತ್ತಷ್ಟು ಸಿಟ್ಟಿಗೆದ್ದ ಶಾಸಕ ತಿಪ್ಪಾರೆಡ್ಡಿ, ಆ ಗುತ್ತಿಗೆದಾರ ಪ್ರತಿ ತಿಂಗಳು ಎಷ್ಟು ಹಣ ನೀಡುತ್ತಿದ್ದಾನೆ, ಅದಕ್ಕೆ ನಾನು ಮೂರು ಪಟ್ಟು ಅಂದರೆ 50 ಸಾವಿರ ರೂ. ಕೊಡಿಸುತ್ತೇವೆ. ಇಂದೇ ಆತನನ್ನು ಖಾಲಿ ಮಾಡಿಸಿ ಎಂದು ತಾಕೀತು ಮಾಡಿದರು.

ಖಾಸಗಿ ಬಸ್‌ ನಿಲ್ದಾಣದಲ್ಲಿ ವಿದ್ಯುತ್‌ ದೀಪಗಳಿಲ್ಲ. ಇದರ ಪ್ರಯೋಜನ ಪಡೆಯುವ ಸಮಾಜ ಘಾತುಕರು ಸಂಜೆಯಾಗುತ್ತಿದ್ದಂತೆ ಅಮಾಯಕರ ಮೇಲೆ ದೌರ್ಜನ್ಯ ಎಸಗುವುದು, ಕಳ್ಳತನ ಮಾಡುವುದು ಮತ್ತಿತರ ಕೃತ್ಯಗಳನ್ನು ಎಸಗುತ್ತಿದ್ದಾರೆ. ಹಾಗಾಗಿ ಇಂದೇ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದರು.

ಬಸ್‌ ನಿಲ್ದಾಣದ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ದುರಸ್ತಿ ಮಾಡಿಸುವುದರ ಜೊತೆಗೆ ನಿಲ್ದಾಣದಲ್ಲಿ ಶುಚಿತ್ವ ಕಾಪಾಡುವಂತೆ ಪರಿಸರ ಇಂಜಿನಿಯರ್‌ ಹಾಗೂ ಆರೋಗ್ಯ ನಿರೀಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಖಾಸಗಿ ಬಸ್‌ ನಿಲ್ದಾಣದ ಸುತ್ತಮುತ್ತ ಇರುವಂತಹ ಗೂಡಂಗಡಿಗಳಿಗೆ ಯಾವುದೇ ತೊಂದರೆ ನೀಡಬೇಡಿ. ಗೂಡಂಗಡಿಗಳಿಗೆ ಹೊಂದಿಕೊಂಡಂತೆ ಮುಂದಕ್ಕೆ ಒತ್ತುವರಿ ಮಾಡಿದ್ದರೆ ಅಂತಹ ಜಾಗದಲ್ಲಿ ನಿರ್ಮಾಣ ಮಾಡಲಾಗಿರುವ ಜಾಗ ತೆರವುಗೊಳಿಸಬೇಕೆಂದರು.

ಬಸ್‌ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ಕಡೆ ಬೈಕ್‌ ನಿಲುಗಡೆ ಮಾಡಲಾಗುತ್ತಿದೆ. ಇದರ ಜೊತೆಗೆ ಬಿಡಾಡಿ ದನಗಳು ನಿಲ್ದಾಣದ ತುಂಬೆಲ್ಲ ಸಂಚರಿಸಿ ಸಗಣಿ, ಗಂಜಲ ಹಾಕಿ ಹೊಲಸು ಮಾಡುತ್ತಿವೆ. ಇದನ್ನು ನಗರಸಭೆ ಅಧಿಕಾರಿಗಳು ತಡೆಯಬೇಕು. ಇದಕ್ಕಾಗಿ ಒಬ್ಬ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಸೂಚಿಸಿದರು.

ನಗರಸಭೆ ಪೌರಾಯುಕ್ತ ಸಿ. ಚಂದ್ರಪ್ಪ ಮಾತನಾಡಿ, ಇಲ್ಲಿನ ಅವ್ಯವಸ್ಥೆ ಸರಿಪಡಿಸಲು ಒಬ್ಬ ಪೊಲೀಸ್‌ ನೇಮಕ ಮಾಡಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಇದೇ ವೇಳೆ ಶಾಸಕರು ಸಾರ್ವಜನಿಕರ ಅಹವಾಲು ಆಲಿಸಿದರು.

28ಕ್ಕೆ ಸಭೆ ಕರೀರಿ…
ಶೌಚಾಲಯಗಳನ್ನು ಗುತ್ತಿಗೆ ಪಡೆದಿರುವವರ ಸಭೆಯನ್ನು ಜ. 28 ರಂದು ಕರೆಯಬೇಕು. ಅಂದು ನಗರದ ಯಾವ ಯಾವ ಭಾಗದಲ್ಲಿ ಸಾರ್ವಜನಿಕ ಶೌಚಾಲಯಗಳಿವೆ, ಪ್ರತಿ ಶೌಚಾಲಯದ ಗುತ್ತಿಗೆ ಯಾರಿಗೆ ಆಗಿದೆ, ಗುತ್ತಿಗೆದಾರರು ಗುತ್ತಿಗೆ ಸಂದರ್ಭದಲ್ಲಿ ಮಾಡಿಕೊಂಡ ಗುತ್ತಿಗೆ ನಿಬಂಧನೆಗಳನ್ನು ಪಾಲಿಸಲಾಗುತ್ತಿದೆಯಾ, ಸಾರ್ವಜನಿಕ ಶೌಚಾಲಯಗಳಿಗೆ ಬಂದು ಹೋಗುವ ಸಾರ್ವಜನಿಕರಿಗೆ ಅಗತ್ಯ ಸೇವಾ ಸೌಲಭ್ಯಗಳನ್ನು ನೀಡಲಾಗಿದೆಯಾ ಎನ್ನುವುದನ್ನು ಪರಿಶೀಲಿಸಲಾಗುತ್ತದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.