ಏಳು ಸುತ್ತಿನ ಕೋಟೆಯಲ್ಲಿ ಶ್ರದ್ಧಾ ಭಕ್ತಿಯ ಉಯ್ಯಾಲೆ ಉತ್ಸವ

ಸಂಜೆವರೆಗೆ ನಡೆದ ದೇವಿಯ ಉಯ್ಯಾಲೆ ಉತ್ಸವವನ್ನು ಕಣ್ತುಂಬಿಕೊಂಡರು.

Team Udayavani, Dec 8, 2022, 5:59 PM IST

ಏಳು ಸುತ್ತಿನ ಕೋಟೆಯಲ್ಲಿ ಶ್ರದ್ಧಾ ಭಕ್ತಿಯ ಉಯ್ಯಾಲೆ ಉತ್ಸವ

ಚಿತ್ರದುರ್ಗ: ನಗರದ ಐತಿಹಾಸಿಕ ಏಳು ಸುತ್ತಿನ ಕೋಟೆಯಲ್ಲಿ ನೆಲೆಗೊಂಡಿರುವ ಶ್ರೀ ಏಕನಾಥೇಶ್ವರಿ ದೇವಿಗೆ ಬಂಗಾರದ ಮುಖ ಪದ್ಮ ಲೋಕಾರ್ಪಣೆ ಹಿನ್ನೆಲೆಯಲ್ಲಿ ಬುಧವಾರ ಗಣಹೋಮ ಹಾಗೂ ಉಯ್ಯಾಲೆ ಉತ್ಸವ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.

ಕೋಟೆಯೊಳಗಿನ ಮೇಲುದುರ್ಗದ ಶ್ರೀ ಏಕನಾಥೇಶ್ವರಿ ದೇವಸ್ಥಾನದ ಆವರಣದಲ್ಲಿ ರಾಜ ವಂಶಸ್ಥರ ಸಂಪ್ರದಾಯದಂತೆ ದಶಕಗಳ ನಂತರ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ಏಕನಾಥೇಶ್ವರಿ ಅಮ್ಮನವರಿಗೆ ಉಯ್ಯಾಲೆ ಉತ್ಸವ ವೈಭವೋಪೇತವಾಗಿ ಜರುಗಿತು.

ವಿವಿಧ ಸೌಗಂಧಭರಿತ ಪುಷ್ಪಗಳಿಂದ ಮನಮೋಹಕವಾಗಿ ಅಲಂಕಾರ ಮಾಡಲಾಗಿದ್ದ ದೇವಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯ ಹಾಗೂ ಉಧೋ ಉಧೋ ಎಂಬ ಭಕ್ತ ಉದ್ಘಾರಗಳೊಂದಿಗೆ ಉಯ್ನಾಲೆ ಕಂಬದ ಬಳಿ ಕರೆತರಲಾಯಿತು. ಅಲಂಕೃತ ಉಯ್ನಾಲೆಯಲ್ಲಿ ಪ್ರತಿಷ್ಠಾಪಿಸಲಾಯಿತು. ಈ ವೇಳೆ ನಾದಸ್ವರದ ನಿನಾದ, ಕಹಳೆಯ ನಾದದೊಂದಿಗೆ ಕರಡಿ ಚಮ್ಮಾಳ, ಉರುಮೆ ಸೇರಿದಂತೆ ನಾನಾ ಜಾನಪದ ಕಲಾ ಪ್ರಕಾರಗಳು ಮೇಲೈಸಿದವು.

ತ್ರಿಪುರ ಸುಂದರಿ ಶ್ರೀ ತಿಪ್ಪಿನಘಟ್ಟಮ್ಮ ದೇವಿಯ ಉತ್ಸವ ಮೂರ್ತಿಯನ್ನು ಮೇಲುದುರ್ಗಕ್ಕೆ ಕರೆತಂದು ಸುಂದರವಾಗಿ ಅಲಂಕರಿಸಲಾಗಿತ್ತು. ಇದಕ್ಕೂ ಮುನ್ನ ದೇವಸ್ಥಾನದ ಆವರಣದಲ್ಲಿ ದೇವಿಗೆ ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ಅರುಣ ಭಟ್ಟರು ಮತ್ತು ಸಂಗಡಿಗರಿಂದ ಗಣಹೋಮ, ಚಂಡಿಕಾ ಹೋಮ ಮತ್ತು ಅಭಿಷೇಕ ನೆರವೇರಿತು.

ಬಂಗಾರದ ಹೊಸ ಮುಖ ಪದ್ಮಕ್ಕೆ ಬಂಗಾರ ನೀಡಿದ ದಾನಿಗಳಿಗೆ ಗೌರವ ಸಮರ್ಪಿಸಲಾಯಿತು. ಹೋಮ ಹಾಗೂ ಉಯ್ನಾಲೆ ಉತ್ಸವದ ಅಂಗವಾಗಿ ಗರ್ಭಗುಡಿಯ ಮೂರ್ತಿಗೂ ಮನಮೋಹಕವಾಗಿ ಸಿಂಗರಿಸಲಾಗಿತ್ತು. ಕೋಟೆಯೊಳಗಿನ ಗಣಪತಿ ಮೂರ್ತಿಗೂ ಸಕಲಾಭರಣ ಹಾಗೂ ಪುಷ್ಪಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು.

ಬುರುಜನಹಟ್ಟಿ, ಜೋಗಿಮಟ್ಟಿ ರಸ್ತೆ, ಕಾಮನಬಾವಿ ಬಡಾವಣೆ ಸೇರಿದಂತೆ ನಗರದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಮೇಲುದುರ್ಗಕ್ಕೆ ಭೇಟಿ ನೀಡಿ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ದೇವಿಯ ಉಯ್ಯಾಲೆ ಉತ್ಸವವನ್ನು ಕಣ್ತುಂಬಿಕೊಂಡರು. ಭಕ್ತರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಮಂಗಳವಾರ ಬ್ರಾಹ್ಮಿ ಮುಹೂರ್ತದಲ್ಲಿ ಚಿತ್ರದುರ್ಗದ ಆಡುಮಲ್ಲೇಶ್ವರದ ಹಿಮವತ್‌ ಕೇದಾರದಲ್ಲಿ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇವಿಯ ಹಾಗೂ ಶ್ರೀ ಏಕನಾಥೇಶ್ವರಿ ಅಮ್ಮನವರ ಹೊಸ ಮುಖ ಪದ್ಮದ ಮೆರವಣಿಗೆಯೊಂದಿಗೆ ಗಂಗಾಪೂಜೆ ನೆರವೇರಿಸಲಾಯಿತು. ಡಿ. 8ರಂದು ಬೆಳಗ್ಗೆ 9ರಿಂದ ಶ್ರೀ ಏಕನಾಥೇಶ್ವರಿ ಪಾದಗುಡಿಯಿಂದ ಐತಿಹಾಸಿಕ ಚಿತ್ರದುರ್ಗ ನಗರದ ರಾಜಬೀದಿ ಹಾಗೂ ಪ್ರಮುಖ ಬೀದಿಗಳಲ್ಲಿ ಶ್ರೀ ಏಕನಾಥೇಶ್ವರಿ ಅಮ್ಮನವರ ಜತೆಯಲ್ಲಿ ನವದುರ್ಗೆಯರು ಸೇರಿದಂತೆ ನಗರದ ಮತ್ತಿತರ ಪ್ರಮುಖ ದೇವತೆಯರ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.