ಬೆಳೆ ವಿಮೆ ಬಿಡುಗಡೆಗೆ ಒತ್ತಾಯಿಸಿ ಕೃಷಿ ಸಚಿವರಿಗೆ ಶ್ರೀರಾಮುಲು ಪತ್ರ
Team Udayavani, Jun 22, 2021, 10:28 AM IST
ಚಿತ್ರದುರ್ಗ: ಸತತ ಬರಕ್ಕೆ ಸಿಲುಕುತ್ತಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ವರ್ಷ ಅತಿವೃಷ್ಟಿಯಾಗಿದ್ದು, ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಆದರೆ ಈವರೆಗೆ ರೈತರಿಗೆ ಬೆಳೆ ವಿಮೆ ಪಾವತಿಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಚಿತ್ರದುರ್ಗ ಜಿಲ್ಲೆ ಎಂಟು ವರ್ಷ ಸತತ ಬರಗಾಲಕ್ಕೆ ಸಿಲುಕಿದೆ. 2020-21ನೇ ಸಾಲಿನಲ್ಲಿ ಅತಿವೃಷ್ಟಿ ಎಂದು ಘೋಷಣೆಯಾಗಿದೆ. ಈ ವೇಳೆ ಜಿಲ್ಲೆಯ 85,112 ರೈತರು ವಿಮೆ ಪಾವತಿಸಿದ್ದಾರೆ. ಆದರೆ ಈವರೆಗೆ ವಿಮಾ ಮೊತ್ತ ಪಾವತಿಯಾಗಿಲ್ಲ. 2020ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 188 ಗ್ರಾಮ ಪಂಚಾಯಿತಿಗಳಲ್ಲಿ 36 ಗ್ರಾಮ ಪಂಚಾಯಿತಿಗಳು ಮಾತ್ರ ವಿಮಾ ಪಾವತಿಗೆ ಆಯ್ಕೆಯಾಗಿವೆ. ಅದೂ ಸಹ ಶೇ. 0.5 ಮಾತ್ರ ವಿಮಾ ಮೊತ್ತ ನೀಡಲು ಅನುಮೋದನೆಯಾಗಿದೆ.
ಆದ್ದರಿಂದ ಫಸಲ್ ಬಿಮಾ ಯೋಜನೆಯಲ್ಲಿನ ಕೆಲ ಮಾನದಂಡಗಳನ್ನು ಬದಲಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಬೆಳೆಯಿಂದ ಆಗಿರುವ ನಷ್ಟದ ವಿಮೆಯನ್ನು ಕಂಪನಿಯವರಿಂದ ಪಾವತಿ ಮಾಡಬೇಕು. ಬೆಳೆ ವಿಮೆ ಪಾವತಿ ಸಂದರ್ಭದಲ್ಲಿ ಏಳು ವರ್ಷಗಳ ಸರಾಸರಿ ಇಳುವರಿ ಬದಲಿಗೆ ಆಯಾ ವರ್ಷದ ಇಳುವರಿಯನ್ನು ಮಾತ್ರ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ಹಂತದಲ್ಲಿ ವಿಮಾ ಘಟಕ ನಿರ್ಧರಿಸಲು 50 ಹೆಕ್ಟೇರ್ ಬದಲಿಗೆ ಹೋಬಳಿ ವ್ಯಾಪ್ತಿಯಾಗಿ ಪರಿಗಣಿಸಬೇಕು. ಪ್ರತಿ ಹೋಬಳಿ ಮಟ್ಟದಲ್ಲಿ ವಿಮಾ ಕಂಪನಿಯವರು ಕಡ್ಡಾಯವಾಗಿ ಕಚೇರಿ ಸ್ಥಾಪಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ