ಆಸ್ಪತ್ರೆಯಲ್ಲಿ ವಾಸ್ತವ್ಯದಿಂದ ಇಲಾಖೆ ಸುಧಾರಣೆ ಆಗಲಿ ಎನ್ನುವುದು ನಮ್ಮ ಉದ್ದೇಶ: ರಾಮುಲು
ಬಯಲಲ್ಲಿ ಹೆರಿಗೆ ಪ್ರಕರಣ:, ತನಿಖೆಗೆ ಆದೇಶಿಸಿದ ರಾಮುಲು
Team Udayavani, Oct 18, 2019, 1:20 PM IST
ಚಿತ್ರದುರ್ಗ: ವಿಜಯಪುರ ಜಿಲ್ಲೆ ಬಳಗನೂರು ಆರೋಗ್ಯ ಕೇಂದ್ರದ ಬಳಿ ಬಯಲಲ್ಲೇ ಹೆರಿಗೆಯಾದ ಪ್ರಕರಣ ಕುರಿತು ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಸ್ಪತ್ರೆ ಸಿಬ್ಬಂದಿಯ ಶಿಫ್ಟ್ ಬದಲಾವಣೆ ವೇಳೆ ಘಟನೆ ನಡೆದಿದೆ ಎಂದರು.
ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಆಸ್ಪತ್ರೆ ವಾಸ್ತವ್ಯ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ವಾಸ್ತವ್ಯದ ಮೂಲಕ ಇಲಾಖೆಯ ಸುಧಾರಣೆಗೆ ಯತ್ನಿಸಲಾಗುತ್ತಿದೆ. ಒಂದೇ ದಿನಕ್ಕೆ ಎಲ್ಲವೂ ಸರಿಯಾಗುತ್ತದೆ ಎಂದು ಹೇಳಲು ಆಗುವುದಿಲ್ಲ. ಆರೋಗ್ಯ ಸಚಿವರ ವಾಸ್ತವ್ಯದಿಂದ ಆರೋಗ್ಯ ಇಲಾಖೆ ಸುಧಾರಣೆ ಆಗಲಿ ಎನ್ನುವುದು ನಮ್ಮ ಉದ್ದೇಶ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಂಡಾಂತರ ಇದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ಹೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿಗೆ ಕೆಲವರ ಕೆಂಗಣ್ಣು ಇದ್ದೇ ಇದೆ. ಸೂಕ್ತ ರಕ್ಷಣಾ ವ್ಯವಸ್ಥೆ ಇದೆ ಹಾಗಾಗಿ ಅವರಿಗೆ ಏನೂ ಆಗುವುದಿಲ್ಲ ಎಂದರು. ಮಾಜಿ ಸಚಿವ ಡಿಕೆಶಿ ಹತ್ತು ವರ್ಷದಲ್ಲಿ ಸಿಎಂ ಆಗುವ ಭವಿಷ್ಯದ ಬಗ್ಗೆ ಮಾತನಾಡಿ, ದೇವರ ಇಚ್ಛೆ ಒಳ್ಳೆಯದಾಗಲಿ ಎಂದರು.
ನೆರೆ ಪರಿಹಾರ ನೀಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವ್ಯತ್ಯಾಸಗಳಾಗಿದ್ದರೆ ನನ್ನೊಂದಿಗೆ ಬಂದು ಚರ್ಚಿಸಲಿ. ಕಾಂಗ್ರೆಸ್ ಕಾರ್ಯಕರ್ತರು ಚರ್ಚೆ ಬದಲು ಮುತ್ತಿಗೆ ಹಾಕಿ ಕೂಗಿದ್ದಾರೆ ಎಂದು ಶ್ರೀರಾಮುಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?