ಮತಗಟ್ಟೆಯತ್ತ ಸಿಬ್ಬಂದಿ ಹೆಜ್ಜೆ


Team Udayavani, May 12, 2018, 4:27 PM IST

cta-.jpg

ಚಿತ್ರದುರ್ಗ: ವಿಧಾನಸಭಾ ಚುನಾವಣೆಯಲ್ಲಿ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಗರದ ಮಸ್ಟರಿಂಗ್‌ ಕೇಂದ್ರದಲ್ಲಿ ಮಸ್ಟರಿಂಗ್‌ ಕಾರ್ಯ ಶುಕ್ರವಾರ ನಡೆಯಿತು.

ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬೇಕಾದ
ಪರಿಕರಗಳನ್ನು ಮಸ್ಟರಿಂಗ್‌ ಸ್ಥಳದಲ್ಲಿ ಹಂಚಿಕೆ ಮಾಡಲಾಯಿತು. ಮತಯಂತ್ರ, ವಿವಿ ಪ್ಯಾಟ್‌, ಬ್ಯಾಲೆಟ್‌ ನಮೂನೆ, ಕಂಟ್ರೋಲ್‌ ಯೂನಿಟ್‌, ಪೆನ್‌, ಪ್ಯಾಡ್‌, ಮತ ಹಾಕುವ ಅಂಕಣಗಳು, ಕಾರ್ಡ್‌ಬೋರ್ಡ್‌, ವಿಳಾಸ ಪಟ್ಟಿಗಳು,
ಮತದಾರರ ರಿಜಿಸ್ಟರ್‌, ಅಳಿಸಲಾಗದ ಶಾಯಿ, ಮತದಾರರ ಚೀಟಿಗಳು, ಮತಗಟ್ಟೆ ಗುರುತಿರುವ ರಬ್ಬರ್‌ ಮೊಹರು, ಟ್ಯಾಗ್‌, ರಬ್ಬರ್‌ ಸ್ಟಾಂಪ್‌, ಲೋಹದ ಮೊಹರು, ಸ್ಟಾಂಪ್‌ ಪ್ಯಾಡ್‌ ಸೇರಿದಂತೆ ಸುಮಾರು 93 ಉಪಕರಣ ಸೇರಿದಂತೆ ಮತದಾನಕ್ಕೆ ಅಗತ್ಯವಾಗಿ ಬೇಕಾಗಿರುವ ಅಗತ್ಯ ಪರಿಕರಗಳನ್ನು ಪಡೆದುಕೊಂಡ ಚುನಾವಣಾ ಸಿಬ್ಬಂದಿ ತಮಗೆ ನಿಗಪಡಿಸಿರುವ ಕ್ಷೇತ್ರಗಳಿಗೆ ಪ್ರಯಾಣ ಬೆಳೆಸಿದರು. 

ಮತಗಟ್ಟೆ ಕೇಂದ್ರಕ್ಕೆ ತೆರಳುವ ಮುನ್ನ ತಮಗೆ ನೀಡಲಾದ ಬ್ಯಾಲೆಟ್‌ ಯೂನಿಟ್‌ ಸೇರಿದಂತೆ ಮತ್ತಿತರ ಪರಿಕರಗಳನ್ನು ಪರಿಶೀಲಿಸಿಕೊಂಡರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಮಸ್ಟರಿಂಗ್‌ ಸ್ಥಳಕ್ಕೆ ಚುನಾವಣಾ ಸಿಬ್ಬಂದಿ, ಮತಗಟ್ಟೆ ಅಧಿಕಾರಿಗಳು ಬೆಳಿಗ್ಗೆ 6 ಗಂಟೆಗೆ ಆಗಮಿಸಿದ್ದರು. ಇಡೀ ಜಿಲ್ಲೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಗಾಗಿ ಪ್ರತಿ ಮತ ಕ್ಷೇತ್ರ ತಂಡಕ್ಕೆ ತಲಾ ಎರಡು ಬ್ಯಾಲೆಟ್‌ ಯೂನಿಟ್‌ಗಳನ್ನು ವಿತರಿಸಲಾಯಿತು. 

ಚಿತ್ರದುರ್ಗ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಆವರಣದಿಂದ 70 ವಾಹನಗಳು, ಮೊಳಕಾಲ್ಮೂರು ಸರ್ಕಾರಿ
ಪದವಿಪೂರ್ವ ಕಾಲೇಜು ಆವರಣದಿಂದ 54 ವಾಹನಗಳು, ಚಳ್ಳಕೆರೆ ಎಚ್‌ಪಿಪಿಸಿ ಪ್ರಥಮದರ್ಜೆ ಕಾಲೇಜು ಆವರಣದಿಂದ 53 ವಾಹನಗಳು, ಹಿರಿಯೂರು ಸೆಂಟ್‌ ಆನ್ಸ್‌ ಪ್ರೌಢಶಾಲೆ ಆವರಣದಿಂದ 49 ವಾಹನಗಳು, ಹೊಸದುರ್ಗದ ಶ್ರೀಮತಿ ತಾಯಮ್ಮ ಎಡೆತೊರೆ ಸದ್ದಿವಾಲ್‌ ಲಿಂಗಯ್ಯ ಪದವಿಪೂರ್ವ ಕಾಲೇಜು ಆವರಣದಿಂದ 45 ವಾಹನಗಳು ಹಾಗೂ ಹೊಳಲ್ಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಿಂದ 53 ವಾಹನಗಳನ್ನು ಚುನಾವಣಾ ಕಾರ್ಯಕ್ಕಾಗಿ ವ್ಯವಸ್ಥೆ ಮಾಡಲಾಗಿದೆ  ವಿಧಾನಸಭೆ, ಲೋಕಸಭೆ ಸೇರಿದಂತೆ ನಾಲ್ಕು ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಮೊದಲ ಚುನಾವಣೆಯಲ್ಲಿ ನನಗೂ ಭಯ, ಆತಂಕ ಇತ್ತು. ಆದರೆ ಈಗ ಅಂತಹ ಯಾವುದೇ ಆತಂಕವಿಲ್ಲ.
  ಬಿ.ಎಸ್‌. ನಿರ್ಮಲಾ, ಮತಗಟ್ಟೆ ಅಧಿಕಾರಿ. 

ವೃತ್ತಿ ಜೀವನದಲ್ಲಿ ಇದೇ ಮೊದಲ ಸಲ ಚುನಾವಣಾ ಕಾರ್ಯವನ್ನು ನಿರ್ವಹಿಸುತ್ತಿದ್ದೇವೆ. ಒಂದು ರೀತಿ
ಭಯ ಇದ್ದರೂ ಖುಷಿಯಾಗುತ್ತಿದೆ. ಚುನಾವಣಾ ಆಯೋಗ ಎಲ್ಲ ರೀತಿಯ ತರಬೇತಿ ನೀಡಿದೆ. ಸಂತೋಷದಿಂದಲೇ ಚುನಾವಣಾ ಕಾರ್ಯಕ್ಕೆ ತೆರಳುತ್ತಿದ್ದೇವೆ. 
 ಮಂಗಳಮ್ಮ ಹಾಗೂ ಸುಕನ್ಯಾ, ಮತಗಟ್ಟೆ ಸಿಬ್ಬಂದಿ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.