ಪ್ರೋತ್ಸಾಹಧನ ಪಾವತಿಗೆ ರಾಜ್ಯ ಸರ್ಕಾರದ ಮೀನಮೇಷ

ಒಂಭತ್ತು ತಿಂಗಳುಗಳಿಂದ ಪ್ರೋತ್ಸಾಹಧನ ನೀಡದೇ ಇರುವುದರಿಂದ ಸಂಕಷ್ಟ: ಆಶಾ ಕಾರ್ಯಕರ್ತೆಯರ ಆರೋಪ

Team Udayavani, Jul 9, 2019, 10:40 AM IST

cd-tdy-2..

ಚಿತ್ರದುರ್ಗ: ಆಶಾ ಕಾರ್ಯಕರ್ತೆಯರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗ: ಪ್ರೋತ್ಸಾಹಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.

ಒನಕೆ ಓಬವ್ವ ವೃತ್ತದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಹನ್ನೆರಡು ಸಾವಿರ ರೂ. ವೇತನ ನಿಗದಿ ಮಾಡುವುದು ಸೇರಿದಂತೆ ಇತರೆ ಹದಿಮೂರು ಬೇಡಿಕೆಗಳನ್ನು ಈಡೇರಿಸಬೇಕು. ಕಳೆದ ಒಂಭತ್ತು ತಿಂಗಳುಗಳಿಂದ ಸರ್ಕಾರ ಎಂಸಿಟಿಎಸ್‌ ಪ್ರೋತ್ಸಾಹಧನ ನೀಡದೆ ಸತಾಯಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಪ್ರೋತ್ಸಾಹಧನವನ್ನು ಒಟ್ಟಿಗೆ ಸೇರಿಸಿ ಮಾಸಿಕ ಕನಿಷ್ಠ ಗೌರವಧನವನ್ನು 12 ಸಾವಿರ ರೂ. ನಿಗದಿಪಡಿಸಬೇಕು. ಆಶಾ ಸಾಫ್ಟ್‌ ಅಥವಾ ಆರ್‌ಸಿಎಚ್ ಪೋರ್ಟಲ್ಗೆ ಆಶಾ ಪ್ರೋತ್ಸಾಹಧನ ಜೋಡಣೆಯನ್ನು ರದ್ದುಪಡಿಸಬೇಕು. ಕಳೆದ ಒಂಭತ್ತು ತಿಂಗಳುಗಳಿಂದ ಬಾಕಿ ಇರುವ ಎಂಸಿಟಿಎಸ್‌ ಸೇವೆಗಳ ಆಶಾ ಪ್ರೋತ್ಸಾಹಧನವನ್ನು ಒಂದು ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿ ಆಶಾ ಕಾರ್ಯಕರ್ತೆಗೆ ಮಾಸಿಕ ಮೂರು ಸಾವಿರ ರೂ. ನೀಡಬೇಕು. ಇದನ್ನು ಜನಸಂಖ್ಯೆಗನುಗುಣವಾಗಿ ಹೆಚ್ಚಿಸಬೇಕು. ಇಲ್ಲವೇ ಒಂಭತ್ತು ತಿಂಗಳುಗಳಲ್ಲಿ ಆಶಾ ಕಾರ್ಯಕರ್ತೆಯರು ಮಾಡಿರುವ ಸಾಧನೆಯ ಮ್ಯಾನುವಲ್ ವರದಿ ಸಂಗ್ರಹಿಸಿ ಪ್ರೋತ್ಸಾಹಧನವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಗಿರಿಜಮ್ಮ ಮಾತನಾಡಿ, ಆಶಾ ಕಾರ್ಯಕರ್ತೆಯರು ಜೀವನ ಭದ್ರತೆಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸಕ್ಕೆ ತಕ್ಕಂತೆ ಸರ್ಕಾರ ಗೌರವಧನ ನೀಡದೆ ಪುಕ್ಕಟೆಯಾಗಿ ದುಡಿಸಿಕೊಳ್ಳುತ್ತಿದೆ. ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಜು. 18 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ನಗರ ಮತ್ತು ಹಳ್ಳಿಗಳಲ್ಲಿ ಗರ್ಭಿಣಿಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆ ಅರಿವು ಮೂಡಿಸುತ್ತಿದ್ದೇವೆ. ಕ್ಷಯ, ಕುಷ್ಠರೋಗ, ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.

ಎಐಯುಟಿಯುಸಿ ಜಿಲ್ಲಾ ಸಂಚಾಲಕ ಎಚ್. ರವಿಕುಮಾರ್‌, ಜಿಲ್ಲಾ ಕಾರ್ಯದರ್ಶಿ ಮಮತಾ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಿಂದಿನ ಆರೋಗ್ಯ ಸಚಿವರು ನೀಡಿದ ಭರವಸೆಯಂತೆ ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಆಶಾ ಕಾರ್ಯಕರ್ತೆಯರ ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಅಥವಾ ಮರಣ ಹೊಂದಿದಲ್ಲಿ ಕುಟುಂಬಕ್ಕೆ ಪರಿಹಾರ ಒದಗಿಸಲು ಕಾರ್ಪಸ್‌ ಫಂಡ್‌ ಮೀಸಲಿಡಬೇಕು. ನಿವೃತ್ತಿಯಾದ ಮೇಲೆ ಪಿಂಚಣಿಗಾಗಿ ನಿವೃತ್ತಿ ಇಡಿಗಂಟು ಇಡಬೇಕು. ಸಾಮಾಜಿಕ ಸುರಕ್ಷಾ ಯೋಜನೆಯ ವ್ಯಾಪ್ತಿಗೊಳಪಡುವ ಪ್ರಧಾನಮಂತ್ರಿ ಜೀವನ್‌ ಜ್ಯೋತಿ ಯೋಜನೆ ಮತ್ತು ಸುರಕ್ಷಾ ಭೀಮಾ ಯೋಜನೆಯನ್ನು ಕೂಡಲೆ ಜಾರಿಗೊಳಿಸಿ ಸಂಪೂರ್ಣ ವಿಮೆ ಕಂತನ್ನು ಸರ್ಕಾರವೇ ಭರಿಸಬೇಕು. ಹೆರಿಗೆ ರಜೆ ನೀಡಿ ರಜೆಯಲ್ಲಿ ಮಾಸಿಕ ಗೌರವಧನ ನೀಡಬೇಕು. ತಿಂಗಳಿಗೆ ಎರಡು ಬಾರಿ ಲಾರ್ವಾ ಸರ್ವೆ ಮತ್ತು ವಿವಿಧ ಸರ್ವೆಗಳಿಗೆ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಹಲವು ವರ್ಷಗಳಿಂದ ಪ್ರೋತ್ಸಾಹಧನವನ್ನೇ ನೀಡಿಲ್ಲ. ಪ್ರತಿ ದಿನದ ಆರೋಗ್ಯ ಜಾಗೃತಿ ಸೇರಿದಂತೆ ಸರ್ವೆ, ಜಾಥಾ, ಜಿಲ್ಲಾ ಮತ್ತು ತಾಲೂಕು ಕೇಂದ್ರದ ಸಭೆಗಳಿಗೆ ಹೋದಾಗ ಕನಿಷ್ಠ 300 ರೂ. ದಿನಭತ್ಯೆಯನ್ನು ಅಂದೇ ನೀಡಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಪ್ರತಿ ತಿಂಗಳು ವೇತನವನ್ನು ನಿಗದಿತ ದಿನಾಂಕದೊಳಗೆ ಬಿಡುಗಡೆಗೊಳಿಸಿ ಯಾವ ತಿಂಗಳ ವೇತನ ಬಿಡುಗಡೆಯಾಗುತ್ತದೋ ಆ ತಿಂಗಳ ವೇತನವೆಂದು ಆಶಾ ಪಾಸ್‌ಬುಕ್‌ನಲ್ಲಿ ನಮೂದಿಸಲು ಕ್ರಮ ಕೈಗೊಳ್ಳಬೇಕು. ಕೆಲವೆಡೆ ಆಶಾಗಳಿಗೆ ನಿಗದಿಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಇತರೆ ಕೆಲಸಗಳಲ್ಲಿ ತೊಡಗಿಸುತ್ತಿರುವುದು ನಿಲ್ಲಬೇಕು. ಕೇಂದ್ರದ ಮಾರ್ಗಸೂಚಿಯಂತೆ ನಗರ ಆಶಾಗಳಿಗೆ 2000-2500 ಜನಸಂಖ್ಯೆಗನುಗುಣವಾಗಿ ಕೆಲಸ ಮಾಡಲು ಕ್ರಮ ಕೈಗೊಳ್ಳಬೇಕು. ಆಯುಕ್ತರು, ಎಂಡಿ, ಎನ್‌ಎಚ್ಎಂ ಸಮ್ಮುಖದಲ್ಲಿ ಸಂಘದೊಂದಿಗೆ ನಡೆದಿರುವ ಹಿಂದಿನ ಸಭೆಗಳ ನಿರ್ಣಯಗಳನ್ನು ಜಾರಿ ಮಾಡಬೇಕು. ರಾಜ್ಯ ಸರ್ಕಾರದ ಆದೇಶದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಕುಂದುಕೊರತೆ ನಿವಾರಣಾ ಸಭೆಯನ್ನು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಬೇಕೆಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.