ಸಚಿವ ಆಂಜನೇಯಗೆ ಬಹಿರಂಗ ಸವಾಲು ಹಾಕಿದ ವಿದ್ಯಾರ್ಥಿನಿ!
Team Udayavani, Sep 22, 2017, 3:33 PM IST
ಚಿತ್ರದುರ್ಗ:ಜನಪ್ರತಿನಿಧಿಗಳ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ. ಮೊದಲು ಸೌಲಭ್ಯ ಕೊಡಿ, ಆಮೇಲೆ ಮಾತನಾಡಿ. ಸೌಲಭ್ಯ ಕೊಟ್ಟರೆ ಸರ್ಕಾರಿ ಶಾಲೆಯಲ್ಲೇ ಓದುತ್ತೇವೆ ಇದು ಖಾಸಗಿ ಶಾಲೆಯ ವಿದ್ಯಾರ್ಥಿನಿ ಸಚಿವ ಆಂಜನೇಯಗೆ ಬಹಿರಂಗವಾಗಿ ಸವಾಲು ಹಾಕಿದ ಪರಿ ಇದು!
ಶುಕ್ರವಾರ ಚಿತ್ರದುರ್ಗದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಸಚಿವ ಆಂಜನೇಯ ಸರ್ಕಾರಿ ಶಾಲೆಯಲ್ಲೇ ಮಕ್ಕಳು ಓದಬೇಕು ಎಂಬ ಬಗ್ಗೆ ಭಾಷಣ ಬಿಗಿದಿದ್ದರು. ಬಳಿಕ ಭಾಷಣ ಮುಗಿಸಿ ಸಚಿವರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆಯೇ ಖಾಸಗಿ ಶಾಲೆಯ ವಿದ್ಯಾರ್ಥಿನಿ ನಯನ ಎಂಬಾಕೆ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಳು.
ಸರ್ ಸರ್ಕಾರಿ ಶಾಲೆಗೆ ಸೇರಿ ಅಂತ ಹೇಳುತ್ತೀರಿ. ಆದರೆ ಸರ್ಕಾರಿ ಶಾಲೆಯಲ್ಲಿ ಸೌಲಭ್ಯಗಳೇ ಇಲ್ಲ. ಆಯ್ತು ಸೌಲಭ್ಯ ಕೊಡುತ್ತೇವೆ ಓದಿ ಎಂದು ಸಚಿವ ಆಂಜನೇಯ ಅವರು ಹೇಳಿದಾಗ, ಬರೀ ಭರವಸೆ ಕೊಡಬೇಡಿ, ಮೊದಲು ಸೌಲಭ್ಯ ಕೊಡಿ ಆಮೇಲೆ ಮಾತನಾಡಿ. ಸೌಲಭ್ಯ ಕೊಡ್ತೀರಾ… ನಾನು ಹಾಗೂ 30 ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಸೇರುವುದಾಗಿ ನಯನಾ ಹೇಳಿದಳು.
ವಿದ್ಯಾರ್ಥಿನಿ ನಯನ ಪ್ರಶ್ನೆಯನ್ನು ನಗುತ್ತಲೇ ಕೇಳಿಸಿಕೊಂಡ ಸಚಿವ ಆಂಜನೇಯ,ಈ ಬಗ್ಗೆ ಶಿಕ್ಷಣ ಸಚಿವರ ಜತೆ ಚರ್ಚಿಸಿ ಕಾನೂನನ್ನು ಜಾರಿಗೆ ತರಲು ಶ್ರಮಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್