![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
Team Udayavani, May 11, 2024, 5:18 PM IST
![ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ](https://www.udayavani.com/wp-content/uploads/2024/05/Chitra-1-620x364.jpg)
■ ಉದಯವಾಣಿ ಸಮಾಚಾರ
ಚಿತ್ರದುರ್ಗ: ಸದ್ಯ ನೂತನ ವಟು ಸ್ವೀಕರಿಸಲಾಗಿದ್ದು, ಅವರ ಶಿಕ್ಷಣದ ಜವಾಬ್ದಾರಿ ಮಠದಿಂದ ವಹಿಸಿಕೊಳ್ಳಲಾಗುತ್ತದೆ. ಆದಿಚುಂಚನಗಿರಿ ಗುರುಕುಲದಲ್ಲಿ ಅಧ್ಯಯನಕ್ಕೆ ಕಳಿಸುತ್ತೇವೆ. ನಿರ್ಮಲಾನಂದನಾಥ ಸ್ವಾಮೀಜಿ ಮಾರ್ಗದರ್ಶನ ಹಾಗೂ ಆಶೀರ್ವಾದ ನೀಡುತ್ತಾರೆ. ಉನ್ನತ ಶಿಕ್ಷಣದ ನಂತರ ಮಠಕ್ಕೆ ಉತ್ತರಾಧಿಕಾರಿ ಆಯ್ಕೆಯನ್ನು ಟ್ರಸ್ಟ್ ಹಾಗೂ ಸಮಾಜದ ಹಿರಿಯರು ನೆರವೇರಿಸಲಿದ್ದಾರೆ. ಅದು ಅವರ ಜವಾಬ್ದಾರಿ ಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ವಟು ಸ್ವೀಕಾರ ಸಮಾರಂಭದ ನಂತರ ಮಾತನಾಡಿದ ಶ್ರೀಗಳು, ವಿಶ್ವಗುರು ಬಸವಣ್ಣನವರ ಜಯಂತಿಯಂದು ಸರ್ವ ಸಮುದಾಯಗಳಿಗೆ ಸಮಾನತೆ, ಶೋಷಿತ ಸಮುದಾಯಗಳಿಗೆ ಧ್ವನಿ ಕೊಟ್ಟವರ ಜಯಂತಿ ಸಂದರ್ಭದಲ್ಲಿ ವಟು ಸ್ವೀಕಾರ ಮಾಡಲಾಗಿದೆ. ಮಾದಾರ ಚನ್ನಯ್ಯ ಗುರುಪೀಠದ ಎರಡು ದಶಕಗಳ ನಡಿಗೆಯಲ್ಲಿ ಇದೊಂದು ಮಹತ್ತರ ಹಾಗೂ ಸ್ಮರಣೀಯ ದಿನವಾಗಿದೆ. ಜಯಬಸವ ದೇವರು ಎನ್ನುವ ಹೆಸರಿನಲ್ಲಿ ವಟು ಸ್ವೀಕಾರ ಮಾಡಿದ್ದೇವೆ ಎಂದರು.
ನಾವು ದೀಕ್ಷೆ ಪಡೆದ ಮುರುಘಾ ಮಠ ಹಾಗೂ ಬಸವ ತತ್ವ ಪರಂಪರೆ ಮುಂದುವರೆಸಿಕೊಂಡು, ಉಳಿಸಿಕೊಂಡು ಹೋಗಲಿದ್ದೇವೆ. ಕೇತಿಕವಾಗಿ ವಟು ಸ್ವೀಕಾರ ಮಾಡಲಾಗಿದೆ. ಅವರ ಶಿಕ್ಷಣ ನಂತರ ಸಮಾಜದ ಮುಖಂಡರಾದ ಗೋವಿಂದ ಕಾರಜೋಳ, ಕೆ.ಎಚ್. ಮುನಿಯಪ್ಪ, ಬಿ.ಎನ್. ಚಂದ್ರಪ್ಪ ಸೇರಿದಂತೆ ನಾಡಿನಾದ್ಯಂತ ಇರುವ ಹಿರಿಯರು ಉತ್ತರಾಧಿಕಾರಿ ಆಯ್ಕೆ ಮಾಡಲಿದ್ದಾರೆ.ಈ ಜವಾಬ್ದಾರಿಯನ್ನು ಅವರಿಗೆ ಬಿಡುತ್ತೇವೆ ಎಂದರು.
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕನಕ ಗುರುಪೀಠದ ಈಶ್ವರನಾಂದಪುರಿ ಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಮಾತಂಗಮುನಿ ಮಠದ ಮಾತಂಗಮುನಿ ಸ್ವಾಮೀಜಿ, ಲಂಬಾಣಿ
ಗುರುಪೀಠದ ನಂದ ಮಸಂದ ಸ್ವಾಮೀಜಿ, ಕೇದಾರ ಗುರುಪೀಠದ ಕೇತೇಶ್ವರ ಸ್ವಾಮೀಜಿ, ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ,
ರಾಣಿಬೆನ್ನೂರಿನ ಗಜದಂಡ ಸ್ವಾಮೀಜಿ, ಸಿದ್ಧಾರೂಢ ಆಶ್ರಮದ ಜಯದೇವ ಸ್ವಾಮೀಜಿ, ನಿರಂಜನಾನಂದ ಸ್ವಾಮೀಜಿ, ಪೂರ್ಣಾನಂದ ಸ್ವಾಮೀಜಿ, ತಿಪ್ಪೇರುದ್ರ ಸ್ವಾಮೀಜಿ, ಸತ್ಯಕ್ಕ, ಜಯದೇವಿ ತಾಯಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ](https://www.udayavani.com/wp-content/uploads/2024/07/Vinod-Raj-150x90.jpg)
Renukaswamy ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ
![1-weewq](https://www.udayavani.com/wp-content/uploads/2024/07/1-weewq-2-150x72.jpg)
Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ
![Nayakanahatti](https://www.udayavani.com/wp-content/uploads/2024/07/kudapuara-150x83.jpg)
Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್
![Chitradurga](https://www.udayavani.com/wp-content/uploads/2024/07/Chitradurga-1-150x90.jpg)
Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ
![Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ](https://www.udayavani.com/wp-content/uploads/2024/07/13-12-150x90.jpg)
Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.