ಹಕ್ಕು ಚಲಾಯಿಸಿ ಮತಾಧಿಪತಿಗಳಾದ ಮಠಾಧೀಶರು


Team Udayavani, May 13, 2018, 5:44 PM IST

dvg-.jpg

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ವಿವಿಧ ಮಠಾಧೀಶರು, ಶಾಸಕರು ಹಾಗೂ ಗಣ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಡಾ| ಶಿವಮೂರ್ತಿ ಮುರುಘಾ ಶರಣರು ನಗರದ ಹೊರವಲಯದ ಮಠದ ಕುರುಬಹಟ್ಟಿ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಮುರುಘಾ ಶರಣರು ಮತ ಚಲಾಯಿಸಿದ ನಂತರ ಹಲವು ಮಠಾಧೀಶರು ಮತದಾನ ಮಾಡಿದರು.

ಮಠದ ಕುರುಬಹಟ್ಟಿ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮಡಿವಾಳ ಮಾಚಿದೇವ ಸ್ವಾಮೀಜಿ, ಕುಂಚಿಟಿಗ ಮಠದ ಡಾ| ಶಾಂತವೀರ ಸ್ವಾಮೀಜಿ, ಹರಳಯ್ಯ ಮಠದ ಶ್ರೀ ಹರಳಯ್ಯ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ, ಚಲವಾದಿ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಸಂಗನಬಸವ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಪ್ರಮುಖ ಮಠಗಳ ಮಠಾಧೀಶರು ಒಟ್ಟಿಗೆ ಆಗಮಿಸಿ ಜನರ ಮಧ್ಯೆ ಸಾಲಾಗಿ ನಿಂತು ಮತ ಚಲಾಯಿಸಿದರು.

ಚಿತ್ರದುರ್ಗ ಶಾಸಕ, ಬಿಜೆಪಿ ಅಭ್ಯರ್ಥಿ ಜಿ.ಎಚ್‌. ತಿಪ್ಪಾರೆಡ್ಡಿ ಎಪಿಎಂಸಿ ಮತಗಟ್ಟೆ ಸಂಖ್ಯೆ 71ರ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಅನುಸೂಯಾ, ಪುತ್ರ ಡಾ| ಸಿದ್ಧಾರ್ಥ, ಪುತ್ರಿ ಸಿಂಧು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. 

ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಪಿ.ಎನ್‌. ರವೀಂದ್ರ ಸೆಂಟ್‌ ಜೋಸೆಫರ ಕಾನ್ವೆಂಟ್‌ ಶಾಲೆಯಲ್ಲಿ ಮತ ಚಲಾಯಿಸಿದರು. ಮಾಜಿ ಸಂಸದ ಜನಾರ್ದನಸ್ವಾಮಿ ಮತ್ತು ಅವರ ಪತ್ನಿ ಐಯುಡಿಪಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕೆಎಚ್‌ಬಿ ಮತಗಟ್ಟೆ ಕೇಂದ್ರದಲ್ಲಿ ನಟಿ ಭಾವನಾ ಮತ ಚಲಾಯಿಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದನ್ನಿಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.