ಕೋವ್ಯಾಕ್ಸಿನ್ ಲಸಿಕೆ ಪಡೆದ ತರಳಬಾಳು ಶ್ರೀ
Team Udayavani, Mar 17, 2021, 8:16 PM IST
ಸಿರಿಗೆರೆ : ಇಲ್ಲಿನ ತರಳಬಾಳು ಜಗದ್ಗುರು ಪೀಠಾಧ್ಯಕ್ಷರಾದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಬೆಂಗಳೂರಿನ ವಿಕ್ಟೋರಿಯಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಸಂದೇಶ ನೀಡಿರುವ ತರಳಬಾಳು ಜಗದ್ಗುರುಗಳು, ವಿಶ್ವದೆಲ್ಲೆಡೆ ತಲ್ಲಣ ಸೃಷ್ಟಿಸಿದ ಮಹಾಮಾರಿ ಕೊರೊನಾ ಪಿಡುಗನ್ನು ಹೋಗಲಾಡಿಸಲು ಲಸಿಕೆ ಪಡೆಯುವುದೇ ಏಕೈಕ ಮಾರ್ಗ. ಸರ್ಕಾರದ ನಿಬಂಧನೆಗಳಂತೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಪಡೆಯಲು ಯಾರೂ ಭಯ ಪಡಬೇಕಾಗಿಲ್ಲ. ಸೂಜಿ ಚುಚ್ಚುವುದು ಗೊತ್ತೇ ಆಗುವುದಿಲ್ಲ. ಸಣ್ಣ ನೋವೂ ಆಗುವುದಿಲ್ಲ. ಆದ್ದರಿಂದ ಭಕ್ತಾದಿಗಳು ಮತ್ತು ಸಾರ್ವಜನಿಕರು ಯಾವುದೇ ಭಯವಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.
ಮೋದಿ ಆರೋಗ್ಯ ಕಾಳಜಿಗೆ ಪ್ರಶಂಸೆ: “ಮನೆ ಗೆದ್ದು ಮಾರು ಗೆಲ್ಲು’ ಎನ್ನುವಂತೆ ನಮ್ಮ ದೇಶದ ಎಲ್ಲಾ ಪ್ರಜೆಗಳಿಗೆ ಲಸಿಕೆ ಕೊಡುವುದಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆ ಪೂರೈಕೆ ಮಾಡುತ್ತಿರುವ ಪ್ರಧಾನಿ ಮೋದಿ ಮಾನವೀಯ ಗುಣ ಶ್ಲಾಘನೀಯ. ಇಡೀ ದೇಶದ ಜನರ ಆರೋಗ್ಯದ ದೃಷ್ಟಿಯಿಂದ ವ್ಯಾಪಕ ಕ್ರಮಗಳನ್ನು ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳಿಗೆ ಭಾರತದಲ್ಲಿ ಸಂಶೋಧಿಸಿದ ಲಸಿಕೆಯನ್ನು ಸರಬರಾಜು ಮಾಡುವ ಮೂಲಕ ಜಗತ್ತಿನ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ತೋರಿರುವುದು ಪ್ರಶಂಸನೀಯ ಎಂದು ಶ್ರೀಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ
ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ