ವೈದ್ಯರ ಕಾರ್ಯವೈಖರಿಗೆ ತಾಪಂ ಸದಸ್ಯರ ಆಕ್ರೋಶ


Team Udayavani, Jun 24, 2020, 9:56 AM IST

cd-tdy-2

ಹೊಸದುರ್ಗ: ಸಾಮಾಜಿಕ ಹಾಗೂ ಆರೋಗ್ಯ ಜಾಗೃತಿ ಮೂಡಿಸಬೇಕಾದ ವೈದ್ಯರೇ ಆಸ್ಪತ್ರೆಗಳಲ್ಲಿನರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸುವುದಿಲ್ಲ ಎಂದು ತಾಪಂ ಸಾಮಾನ್ಯ ಸಭೆಯಲ್ಲಿ ಆರೋಪಗಳ ಸುರಿಮಳೆಯೇ ಕೇಳಿ ಬಂತು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷೆ ಸುಮಿತ್ರಾ ಮಂಜಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆರೋಗ್ಯ ಇಲಾಖೆ ಮೇಲಿನ ಚರ್ಚೆ ವೇಳೆ ವೈದ್ಯಾಧಿಕಾರಿಗಳ ವರ್ತನೆ ಬಗ್ಗೆ ಸದಸ್ಯರಿಂದ ಅಸಮಾಧಾ° ವ್ಯಕ್ತವಾಯಿತು. ವೈದ್ಯರು ರೋಗಿಗಳನ್ನು ಮುಟ್ಟದೆ ಚಿಕಿತ್ಸೆ ನೀಡುತ್ತಾರೆ, ದೂರದಲ್ಲಿ ನಿಲ್ಲಿಸಿ ಮಾತ್ರೆಗಳನ್ನು ಎಸೆಯುತ್ತಾರೆ. ಇಂತಹ ಅವ್ಯವಸ್ಥೆ ಕುರಿತು ಐದು ವರ್ಷಗಳಿಂದ ಹೇಳಿದರೂ ಏನೂ ಪ್ರಯೋಜನವಾಗಿಲ್ಲ. ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ತಾಪಂ ಉಪಾಧ್ಯಕ್ಷೆ ನೇತ್ರಾವತಿ ದೇವರಾಜ್‌ ಆರೋಪಿಸಿದರು.

ಸದಸ್ಯೆ ಪ್ರೇಮಾ ರವೀಂದ್ರ ಮಾತನಾಡಿ, ಮಾಡದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರೇ ನಿತ್ಯ ಕುಡಿದು ಬರುತ್ತಿದ್ದು, ಆಸ್ಪತ್ರೆಯಲ್ಲೇ ಕುಡಿಯುವ ಚಾಳಿ ಶುರು ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ನರ್ಸ್‌, ಆಶಾ ಕಾರ್ಯಕರ್ತೆಯರು, ರೋಗಿಗಳ ಮೇಲೆ ಗಲಾಟೆ ಮಾಡುತ್ತಾರೆ. ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇಂತಹ ವೈದ್ಯರಿಂದ ಸಾಮಾಜಿಕ ವ್ಯವಸ್ಥೆ ಕಾಪಾಡಲು ಸಾಧ್ಯವಿಲ್ಲ ಎಂದು ಹರಿ ಹಾಯ್ದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ ನಿರಂಜನಮೂರ್ತಿ, ಮತ್ತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ತಿಂಗಳಿನಿಂದ ಮೆಡಿಸಿನ್‌ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ ಎಂದು ದೂರಿದರು.

ಕೆಲ್ಲೋಡು ಕ್ಷೇತ್ರದ ಸದಸ್ಯೆ ಪ್ರೇಮಾ ಮಾತನಾಡಿ, ಬೆಂಗಳೂರಿನಲ್ಲಿ ಕೋವಿಡ್  ವೈರಸ್‌ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.ಇದೇ ಸಂದರ್ಭದಲ್ಲಿ ಪ್ರತಿನಿತ್ಯ ಹಳ್ಳಿಗಳಿಂದ ಬೆಂಗಳೂರಿಗೆ ಹೋಗಿ ವಾಪಸ್‌ ಬರುವವರ ಸಂಖ್ಯೆಯಲ್ಲೂ ಜಾಸ್ತಿಯಾಗಿದ್ದು, ತಾಲೂಕು ಆಡಳಿತ ಅವರನ್ನುತಡೆ ಹಿಡಿಯುವ ಕೆಲಸ ಮಾಡಬೇಕುಎಂದು ಆಗ್ರಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌.ಜಯಪ್ಪ ಮಾತನಾಡಿ, ಆಂಗ್ಲ ಮಾಧ್ಯಮ ಶಾಲೆ ಪ್ರಾರಂಬಿಸಲು ಇಲಾಖೆ ಅನುಮತಿ ನೀಡಿದೆ. ತಾಲೂಕಿನ ಸಣ್ಣಕಿಟ್ಟದಹಳ್ಳಿ, ಕಂಗುವಳ್ಳಿ, ಲಕ್ಕಿಹಳ್ಳಿ, ದೊಡ್ಡತೇಕಲವಟ್ಟಿ ಗೂಳಿಹಟ್ಟಿ ಸೇರಿದಂತೆ 10 ಗ್ರಾಮಗಳಲ್ಲಿ ಶಾಲೆ ಆರಂಭಿಸಲಾಗುವುದು ಎಂದರು.

ಮತ್ತೋಡು ಗ್ರಾಮದಲ್ಲಿ ಕಳೆದ ವರ್ಷ ದುರಸ್ತಿ ಮಾಡಲಾಗಿದ್ದ ಅಂಗನವಾಡಿ ಕಟ್ಟಡವನ್ನು ಕೆಡವಿ ಹೊಸದಾಗಿ ಕಟ್ಟಡ ನಿರ್ಮಿಸಲಾಗಿದೆ. ಉತ್ತಮವಾಗಿರುವ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ಕಟ್ಟುವ ಅಗತ್ಯವಾದರೂ ಏನಿತ್ತು. ಇದೇ ಅನುದಾನ ಬಳಸಿ ಹೊಸ ಕಟ್ಟಡ ನಿರ್ಮಿಸಬಹುದಾಗಿತ್ತು ಎಂದು ಸದಸ್ಯ ನಿರಂಜನಮೂರ್ತಿ, ಸಿಡಿಪಿಒ ಪವಿತ್ರಾ ಅವರನ್ನು ತರಾಟೆಗೆತೆಗೆದುಕೊಂಡರು. ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಾ ಮಂಜುನಾಥ್‌, ಇಒ ಜಾನಕಿರಾಮ್‌, ಸದಸ್ಯರಾದ ಐಲಾಪುರ ಮಲ್ಲಿಕಾರ್ಜುನ್‌, ಪ್ರಫುಲ್ಲಾ, ಬಸವರಾಜ್‌, ಶಶಿಕಲಾ ಇತರರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.