ವೀಲ್ ಚೇರ್ ನಲ್ಲಿ ಬಂದು ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ 73 ವರ್ಷದ ಗಂಗಮ್ಮ
Team Udayavani, Nov 1, 2019, 1:13 PM IST
ಚಿತ್ರದುರ್ಗ: ಕಾಲು ಮೂಳೆ ಮುರಿದು ಆಸ್ಪತ್ರೆ ಸೇರಿದ್ದ ಅಜ್ಜಿ ವೀಲ್ ಚೇರ್ ನಲ್ಲಿ ಬಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕಳೆದ 60 ವರ್ಷಗಳಿಂದ ಕಂಬಳಿ ನೇಕಾರಿಕೆ ಮಾಡುತ್ತಿರುವ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ಗಂಗಮ್ಮ ವೀಲ್ ಚೇರ್ ನಲ್ಲಿ ಬಂದು ಪ್ರಶಸ್ತಿ ಸ್ವೀಕರಿಸಿದ ಅಜ್ಜಿ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅವರ ಸಾಧನೆ ಗಮನಿಸಿ ಅವರನ್ನು ಆಯ್ಕೆ ಮಾಡಿತ್ತು
73 ವರ್ಷದ ಗಂಗಮ್ಮ ಕೆಲ ದಿನಗಳ ಹಿಂದೆ ಬಿದ್ದು ಕಾಲು ಮುರಿದುಕೊಂಡಿದ್ದರು. ಜಿಲ್ಲಾಸ್ಪತ್ರೆಯಿಂದ ಅಂಬ್ಯುಲೆನ್ಸ್ ಮೂಲಕ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯುತ್ತಿದ್ದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನೇರವಾಗಿ ಆಗಮಿಸಿ ಪ್ರಶಸ್ತಿ ಸ್ವೀಕರಿಸಿದ ಅಪರೂಪದ ಪ್ರಸಂಗ ಚಿತ್ರದುರ್ಗದಲ್ಲಿ ನಡೆಯಿತು.
ವೇದಿಕೆ ಏರಲು ಸಾಧ್ಯವಾಗದ ಕಾರಣ ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಪಂ ಸಿಇಒ ಸತ್ಯಭಾಮಾ ಅಜ್ಜಿಯ ಬಳಿ ಬಂದು ಪುರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್