ಕೊಲೆಗೈದು ಹೊಸದುರ್ಗದಲ್ಲಿ ಶವ ಹೂತಿಟ್ಟವರ ಬಂಧನ
Team Udayavani, Jul 11, 2022, 12:39 PM IST
ಹೊಸದುರ್ಗ: ವ್ಯಕ್ತಿಯೊಬ್ಬರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಸಣೀಹಳ್ಳಿ ಸಮೀ ಪದ ಗೋಮಾಳದಲ್ಲಿ ಹೂತು ಹಾಕಲಾಗಿದ್ದ ಆರೋಪಿಗಳನ್ನು ಹೊಸದುರ್ಗ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೊಲೆಯಾದ ಯದುಲ್ಲಾ ಷಫಿ ಅವರ ಪತ್ನಿ ಆಂಧ್ರಪ್ರದೇಶ ಮೂಲದ ಅರಬ್ ಜಾನ್, ಹೊಸದುರ್ಗ ತಾಲೂಕಿನ ರಂಗವ್ವನಹಳ್ಳಿ ಗ್ರಾಮದ ಹರೀಶ , ಮಾಚೇನಹಳ್ಳಿ ಗ್ರಾಮದ ಗೋಪಿ, ಅತ್ತಿಮಗ್ಗೆ ಗ್ರಾಮದ ಕೇಶವ ಬಂಧಿತರು.
ಜೂ.9ರಂದು ಹೊಸದುರ್ಗ ತಾಲೂಕಿನ ಮಸಣಿಹಳ್ಳಿ ಗ್ರಾಮದ ಬಳಿ ಇರುವ ಗೋಮಾಳ ಜಾಗದಲ್ಲಿ ಪುರುಷನ ಶವ ಹೂತು ಹಾಕಿರುವುದು ಕಂಡು ಬಂದಿತ್ತು. ಈ ಬಗ್ಗೆ ಮಸಣೀಹಳ್ಳಿ ಗ್ರಾಮದ ಹರೀಶ್ ನಾಯ್ಕ ಎಂಬುವವರು ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಹೊಸದುರ್ಗ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದರು.
ಇದನ್ನೂ ಓದಿ: ನ್ಯಾಯಾಂಗ ನಿಂದನೆ ಕೇಸ್:ಉದ್ಯಮಿ ಮಲ್ಯಗೆ 4 ತಿಂಗಳು ಜೈಲುಶಿಕ್ಷೆ, 2 ಸಾವಿರ ರೂ. ದಂಡ:ಸುಪ್ರೀಂ
ಮೃತನ ಭಾವ ನವಾಬ್ ಜಾನ್, ತನ್ನ ಪತ್ನಿಯ ಸಹೋದರ ಯದುಲ್ಲಾ ಷಫಿಯನ್ನು ಆತನ ಹೆಂಡತಿ ಹಾಗೂ ಮೂವರು ಯುವಕರು ಸೇರಿ ಕೊಲೆ ಮಾಡಿರಬಹುದೆಂದು ಶಂಕಿಸಿ ದೂರು ನೀಡಿದ್ದರು. ದೂರಿನ ಮೇರೆಗೆ ತಂಡ ರಚಿಸಿದದು, ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ತಂಡ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ