ಸ್ಮಶಾನ ಜಾಗ ಅಧಿಕೃತ ಖಾತೆಗೆ ಒತ್ತಾಯ


Team Udayavani, May 25, 2018, 4:25 PM IST

cta-1.jpg

ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆ ಕನಕವೃತ್ತದ ಸಮೀಪವಿರುವ ಮೂರು ಎಕರೆ ಇಪ್ಪತ್ತು ಗುಂಟೆ ಸ್ಮಶಾನದ ಜಾಗವನ್ನು ಅಧಿಕೃತವಾಗಿ ಖಾತೆ ಮಾಡಿಕೊಡುವಂತೆ ಚಿರಶಾಂತಿ ಧಾಮದ ಟ್ರಸ್ಟ್‌ ಮತ್ತು ಬುರುಜನಹಟ್ಟಿಯ ನಿವಾಸಿಗಳು ಗುರುವಾರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬುರುಜನಹಟ್ಟಿ, ನೆಹರು ನಗರ, ಚೇಳುಗುಡ್ಡ, ಜೆ.ಸಿ.ಆರ್‌. ಬಡಾವಣೆ, ಕುಂಬಾರಬೀದಿ, ಸಾವಂತರಹಟ್ಟಿ, ಸೊಪ್ಪಿನವರಹಟ್ಟಿ, ಕೋಣನಹಟ್ಟಿ, ಕೆಂಚನಕಟ್ಟೆ, ಮಾಳಪ್ಪನಹಟ್ಟಿ ಹಾಗೂ ಸಿಹಿನೀರು ಹೊಂಡದ ವಾಸಿಗಳು ಪೂರ್ವಜರು ಮರಣ ಹೊಂದಿದಾಗ ಅನಾದಿ ಕಾಲದಿಂದಲೂ ಇಲ್ಲಿ ಶವಸಂಸ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಶವಸಂಸ್ಕಾರದ ನಂತರ ಸಮಾಕಟ್ಟಿ ಹಬ್ಬ ಹರಿದಿನಗಳಲ್ಲಿ ಈಗಲೂ ಹಿರಿಯರ ಪೂಜೆ ಮಾಡಲಾಗುತ್ತದೆ. ಸ್ಮಶಾನದ ಜಾಗವನ್ನು ಅಧಿಕೃತವಾಗಿ ಖಾತೆಗೆ ದಾಖಲಿಸಿ ಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಚಿರಶಾಂತಿಧಾಮ ಅಭಿವೃದ್ದಿ ಟ್ರಸ್ಟ್‌ ರಚಿಸಿ ಸ್ವತ್ಛತೆ ಮತ್ತು ನೀರಿನ ವ್ಯವಸ್ಥೆ ಮಾಡಿ ಶವಸಂಸ್ಕಾರಕ್ಕೆ ಬರುವವರಿಗೆ ಅನುಕೂಲ ಮಾಡಲಾಗಿದೆ. ನಗರಸಭೆ ಮತ್ತು ತಾಲೂಕು ಕಚೇರಿಯಲ್ಲಿ ಸ್ಮಶಾನದ ಜಾಗದ ಬಗ್ಗೆ ಪರಿಶೀಲಿಸಿದಾಗ ಯಾವುದೇ ಅಧಿಕೃತ ದಾಖಲೆಗಳು ಇಲ್ಲವೆಂಬುದು ತಿಳಿದು ಬಂದಿದೆ. ಹಾಗಾಗಿ ಸ್ಮಶಾನದ ಜಾಗ ಅಳತೆ ಮಾಡಲು ತಹಶೀಲ್ದಾರ್‌ಗೆ ಟ್ರಸ್ಟಿನಿಂದ ಮನವಿ ನೀಡಿದಾಗ ಸರ್ವೇಯರ್‌ ಅಳೆತೆ ಮಾಡಿದಾಗ ಮೂರು ಎಕರೆ ಇಪ್ಪತ್ತು ಗುಂಟೆ ಸ್ಮಶಾನದ ಜಾಗ ಎಂದು ಸ್ಕೆಚ್‌ ನೀಡಿರುತ್ತಾರೆ. ಆದ್ದರಿಂದ ಖಾತೆ ಮಾಡಲು ನಗರಸಭೆಗೂ ಅರ್ಜಿ ನೀಡಲಾಗಿದೆ. ಇದನ್ನು ಪರಿಗಣಿಸಿ ಸ್ಮಶಾನದ ಜಾಗವು ನಗರಸಭೆಗೆ ಸೇರಿದ್ದೆಂದು ದೃಢೀಕರಣ ಪತ್ರ ನೀಡಿರುತ್ತಾರೆ. ಆದ್ದರಿಂದ ಈ ಜಾಗವನ್ನು ಅಧೀಕೃತವಾಗಿ ಖಾತೆ ಮಾಡಿಕೊಡಲು ನಗರಸಭೆಗೆ ಸೂಚನೆ ನೀಡುವಂತೆ ಅಪರ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ನಗರಸಭೆ ಮಾಜಿ ಅಧ್ಯಕ್ಷ ಎಚ್‌.ಮಂಜಪ್ಪ, ಎಂ.ವಿ.ಮಾಲತೇಶ್‌, ಎನ್‌. ಲಕ್ಷ್ಮೀಶ್‌, ಎಸ್‌.ಪ್ರಕಾಶ್‌, ನಗರಸಭೆ ಮಾಜಿ ಸದಸ್ಯ ಎಲ್‌. ತಿಪ್ಪೇಸ್ವಾಮಿ, ಕೆ.ಆರ್‌. ಕೃಷ್ಣಮೂರ್ತಿ, ಎಸ್‌.ಪುಟ್ಟಸ್ವಾಮಿ, ಆಯ್ತಾರಪ್ಪ, ಎಸ್‌.ಬಿ. ರವಿಕುಮಾರ್‌ ಇತರರು ಇದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.