ಅಸ್ಪ್ರಶ್ಯತೆ ನಿರ್ಮೂಲನೆಯೇ ಸವಾಲು

• ಬಾಬು ಜಗಜೀವನರಾಮ್‌ಗೆ ಪ್ರಧಾನಿ ಅವಕಾಶ ತಪ್ಪಿಸಿದ ಜಾತಿ ರಾಜಕಾರಣ: ಮುರುಘಾ ಶ್ರೀ

Team Udayavani, Aug 20, 2019, 2:48 PM IST

CD-TDY-2

ಚಿತ್ರದುರ್ಗ: ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಡಾ| ಶಿವಮೂರ್ತಿ ಮುರುಘಾ ಶರಣರು ಚಾಲನೆ ನೀಡಿದರು.

ಚಿತ್ರದುರ್ಗ: ಡಾ| ಬಾಬು ಜಗಜೀವನರಾಮ್‌ ದೇಶದ ಪ್ರಧಾನಿಯಾಗಬೇಕಿತ್ತು. ಆದರೆ ಜಾತಿ ರಾಜಕಾರಣದ ಕಾರಣಕ್ಕೆ ಅವಕಾಶ ಕಳೆದುಕೊಂಡರು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಚಿತ್ರದುರ್ಗದ ಬಾಪೂಜಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ನಡೆದ ಡಾ| ಬಾಬು ಜಗಜೀವನರಾಮ್‌ ಅವರ ಜೀವನ ಮತ್ತು ಸಾಧನೆ ಕುರಿತ ಉಪನ್ಯಾಸ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.

ಜಾತಿ ಹಾಗೂ ಮೂಲಭೂತ ವಾದ ಅನೇಕರನ್ನು ಅಧಿಕಾರ ವಂಚಿತರನ್ನಾಗಿ ಮಾಡಿದೆ. ಅದರಲ್ಲಿ ಬಾಬೂಜಿ ಕೂಡ ಒಬ್ಬರು. ಅಸ್ಪ್ರಶ್ಯತೆಯ ಕೆಸರಿನಲ್ಲಿ ಅರಳಿದ ತಾವರೆಯಾಗಿದ್ದಾರೆ. ಅಸ್ಪ್ರತೆಯಂತಹ ಸಮಸ್ಯೆ ಎಲ್ಲಾ ಕಾಲ, ದೇಶ, ಆಡಳಿತಕ್ಕೂ ಸವಾಲಾಗಿವೆ. ಇದುವರೆಗೆ ಯಾರೂ ಅದನ್ನು ಬೇರು ಸಹಿತ ಕಿತ್ತು ಹಾಕಲು ಸಾಧ್ಯವಾಗಿಲ್ಲ ಎಂದರು.

ಬಸವ ಯುಗದಲ್ಲಿ ಕುಲ ಹಾಗೂ 18 ಜಾತಿಗಳ ನಾಯಕರು ಒಂದೇ ಸೂರಿನಡಿ ಕುಳಿತು ಚರ್ಚಿಸುತ್ತಿದ್ದರು. ಆನಂತರ ಅಂತಹ ವಾತಾವರಣ ಎಲ್ಲಿಯೂ ಕಾಣಸಿಗಲಿಲ್ಲ. ನಂತರ ಬಂದ ಗಾಂಧೀಜಿ ಸರ್ವೋದಯಕ್ಕೆ ಚಾಲನೆ ನೀಡಿದರು. ಬಸವ ಯುಗ ಮತ್ತು ಗಾಂಧಿ ಯುಗದಲ್ಲಿ ಜಾತಿ ವಿನಾಶಕ್ಕೆ ಒಂದಷ್ಟು ಪ್ರಯೋಗಗಳು ನಡೆದಿವೆ. ಈ ಇಬ್ಬರ ಧೈರ್ಯ ಮತ್ತು ಸಾಮರ್ಥ್ಯವನ್ನು ಮೆಚ್ಚಬೇಕು. ಆನಂತರ ಬಂದ ಜಯಪ್ರಕಾಶ್‌ ನಾರಾಯಣ್‌ ರಾಜಕೀಯ ಧ್ರುವೀಕರಣ ಮಾಡಿದರು ಎಂದು ತಿಳಿಸಿದರು.

ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ವಿಭಾಗದ ಕನ್ನಡ ಪ್ರಾಧ್ಯಾಪಕ ಪ್ರೊ| ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ಉನ್ನತ ಶಿಕ್ಷಣ ಹಾಗೂ ವ್ಯಕ್ತಿತ್ವದಿಂದ ದೇಶದ ಉನ್ನತ ಹುದ್ದೆಯನ್ನು ಪಡೆಯಲು ಸಾಧ್ಯ. ಬುದ್ಧನ ನಾಡು ಬಿಹಾರದ ಹಿಂದುಳಿದ ಜಿಲ್ಲೆಯಲ್ಲಿ ಜನಿಸಿದ ಬಾಬೂಜಿ, ದೇಶದ ಪ್ರತಿಷ್ಠಿತ ಹಿಂದು ವಿಶ್ವವಿದ್ಯಾಲಯದಲ್ಲಿ ವಿಜ್ಞಾನ ಪದವಿ ಪಡೆದಿದ್ದರು ಎಂದರು.

ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ಭಾರತದಲ್ಲಿ ಹಲವು ಬಗೆಯ ಹೋರಾಟಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಮತ್ತು ಬೆಳಗಿಕೊಂಡ ಕೆಲವೇ ಕೆಲವು ಪ್ರಮುಖರಲ್ಲಿ ಬಾಬು ಜಗಜೀವನರಾಮ್‌ ಪ್ರಮುಖರು. ದೇಶದ ಶ್ರೇಣಿಕೃತ ವ್ಯವಸ್ಥೆಯಲ್ಲಿನ ಜಾತಿ ಪದ್ಧತಿಗಳಿಂದ ಅನೇಕ ಅವಮಾನ, ಶೋಷಣೆ ಅನುಭವಿಸಿ ಹಿಂದುಳಿದ ಮತ್ತು ದಲಿತ ಸಮುದಾಯಗಳ ಪರ, ಜಾತಿ ವ್ಯವಸ್ಥೆ ವಿರುದ್ಧ, ದಬ್ಟಾಳಿಕೆ, ದೌರ್ಜನ್ಯಗಳ ವಿರುದ್ಧ ನಿರಂತರ ಹೋರಾಟ ಮಾಡಬೇಕೆಂದು ಕರೆ ನೀಡಿದ್ದರು ಎಂದು ತಿಳಿಸಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಸಂವಿಧಾನ ಆಶಯಗಳನ್ನು ಜಗಜೀವನರಾಮ್‌ ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತಂದರು. ಕೃಷಿ ಮತ್ತು ಆಹಾರ ಸಚಿವರಾಗಿದ್ದಾಗ ಹಸಿದಿದ್ದ ದೇಶದ ಒಡಲನ್ನು ತುಂಬಿಸಿ ಹಸಿರು ಕ್ರಾಂತಿಯ ಹರಿಕಾರರಾದರು ಎಂದರು.

ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ| ಶರಣಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಎಸ್‌. ವಿದ್ಯಾಶಂಕರ್‌, ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ. ವೀರೇಶ್‌, ಎಸ್‌ಆರ್‌ಎಸ್‌ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ರವಿ, ಪ್ರಾಚಾರ್ಯೆ ಪ್ರೊ| ಎಂ.ಆರ್‌. ಜಯಲಕ್ಷ್ಮೀ ಉಪಸ್ಥಿತರಿದ್ದರು.

ಇಂದಿನ ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಏನೆಲ್ಲಾ ಅನಾಚಾರ ಮಾಡುವುದನ್ನು ನೋಡಿದ್ದೇವೆ. ಆದರೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸ್ವಾತಂತ್ರ್ಯಾ ನಂತರ ದೇಶಕ್ಕಾಗಿ ಎಲ್ಲಾ ಪಕ್ಷಗಳು ಒಂದಾಗಿ ಅಧಿಕಾರ ನಡೆಸಿದ್ದವು. ಈ ವೇಳೆ ಬಾಬು ಜಗಜೀವನರಾಮ್‌ ಉಪಪ್ರಧಾನಿಯಾಗಿ ದೇಶಕ್ಕೆ ಸ್ಪಷ್ಟ ದಿಕ್ಕು ತೋರಿದ್ದರು.• ಡಾ| ಶಿವಮೂರ್ತಿ ಮುರುಘಾ ಶರಣರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.