ಮುರುಘರಾಜೇಂದ್ರ ಬೃಹನ್ಮಠದ ಇತಿಹಾಸ ದೊಡ್ಡದು


Team Udayavani, Mar 8, 2019, 8:26 AM IST

cta-2.jpg

ಚಿತ್ರದುರ್ಗ: ಧಾರ್ಮಿಕ ಕ್ಷೇತ್ರದಲ್ಲಿ ಮಠಗಳು ಮತ್ತು ಆಶ್ರಮಗಳ ಪಾತ್ರ ಮಹತ್ವದ್ದಾಗಿದೆ. ಅಂತಹ ಮಠಗಳಲ್ಲಿ ಮುರುಘರಾಜೇಂದ್ರ ಬೃಹನ್ಮಠಕ್ಕೆ ಐತಿಹಾಸಿಕ ಸ್ಥಾನವಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಮುರುಘಾ ಮಠದ ಬಸವ ಕೇಂದ್ರದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಏಕತಾ ಶರಣ ಮೇಳ-2019ನ್ನು ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.

 ಮುರುಘಾಮಠದ ಮಠಾಧೀಶರು ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಸುಧಾರಣೆ, ಸಂಘಟನೆ ಮತ್ತು ಜನ ಜಾಗೃತಿಯಂಥ ಉತ್ಕೃಷ್ಟ ಕಾರ್ಯಗಳನ್ನು ನಡೆಸುತ್ತ ಬಂದಿದ್ದಾರೆ. 1924ರಲ್ಲಿ ಕರ್ನಾಟಕಕ್ಕೆ ಬಂದಿದ್ದ ಮಹಾತ್ಮಾ ಗಾಂಧಿಧೀಜಿಯಯವರು ಅಂದಿನ ಜಗದ್ಗುರುಗಳಾದ ಜಯದೇವ ಶ್ರೀಗಳನ್ನು ಭೇಟಿ ಮಾಡಿ ಅಸ್ಪೃಶ್ಯತೆ ನಿವಾರಣೆ ಬಗ್ಗೆ ಚರ್ಚಿಸಿದ್ದಾರೆ.

ಶ್ರೀಮಠದ ಮೂಲಕತೃಗಳಾದ ಮುರುಗಿ ಶಾಂತವೀರರನ್ನು ಛತ್ರಪತಿ ಶಿವಾಜಿ ಮಹಾರಾಜರು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇದೇ ಮಠದ ಶಾಖಾ ಮಠವಾದ ಅಥಣಿ ಗಚ್ಚಿನಮಠದ ಮುರುಘೇಂದ್ರ ಶಿವಯೋಗಿಗಳನ್ನು ಬಾಲಗಂಗಾಧರ ತಿಲಕರು ಭಾರತಕ್ಕೆ ಸ್ವಾತಂತ್ರ್ಯಾ ಸಿಗುವಂತೆ ಆಶೀರ್ವದಿಸಬೇಕು ಎಂದು ಕೋರಿದ್ದರು. 

ಮಾತ್ರವಲ್ಲ, ಹತ್ತಾರು ರಾಜಮನೆತನಗಳು ಈ ಪೀಠದ ಆಶೀರ್ವಾದ ಪಡೆದ ಭವ್ಯ ಇತಿಹಾಸವಿದೆ. ಕಳೆದ 20 ವರ್ಷಗಳಿಂದ ಪ್ರತಿವರ್ಷ ರಾಜ್ಯದ ಹೊರಗಡೆ ಏಕತಾ ಮೇಳ ಸಂಘಟಿಸುತ್ತ ಬಂದಿದ್ದು, ಈ ಸಲ ಅಸ್ಸಾಂ ರಾಜ್ಯದ ರಾಜಧಾನಿ ಗುವಾಹಟಿಯಲ್ಲಿ ರಾಷ್ಟ್ರೀಯ ಏಕತಾ ಶರಣ ಮೇಳ ನಡೆಸಲಾಗುತ್ತಿದೆ ಎಂದರು.

ಸಮಾಜಸುಧಾರಕರು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಮ್ಮ ಅರಿವು-ಆಚರಣೆಯಿಂದ ತಿದ್ದಿದ್ದಾರೆ. ಸಂಪ್ರದಾಯದ ಕಂದಕದಿಂದ ಜನಸಾಮಾನ್ಯರನ್ನು ಮೇಲೆತ್ತಿದ್ದಾರೆ. ಸ್ವಪ್ರಯತ್ನ, ಸತತ ಸಾಧನೆ, ದೃಢ ನಿರ್ಧಾರ, ಸ್ಪಷ್ಟವಾದ ಗುರಿ, ಸ್ವಂತ ಭರವಸೆ, ಮಾನವೀಯತೆ ಮತ್ತು ಬದ್ಧತೆ ಮುಂತಾದ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಸನ್ಮಾರ್ಗ ತೋರಿಸಿದರು ಎಂದು ಸ್ಮರಿಸಿದರು.

ಬಸವಣ್ಣನವರಿಗಿಂತ ಮುಂಚೆಯೂ ಲಿಂಗ ತಾರತಮ್ಯ ಇತ್ತು. ಬಸವಣ್ಣನವರು ಸಮ ಸಮಾಜಕ್ಕಾಗಿ ಹೋರಾಟ ನಡೆಸಿ
ಮಹಿಳೆಯರಿಗೆ ಧಾರ್ಮಿಕ ಹಕ್ಕು ನೀಡಿದರು. ಅಸ್ಪೃಶ್ಯತೆ ಆಚರಣೆ ಮಿತಿ ಮೀರಿತ್ತು. ಶ್ರೇಣೀಕೃತ ವ್ಯವಸ್ಥೆ ಸಮಾಜವನ್ನು ವಿಭಜಿಸಿತ್ತು. ಬಸವಣ್ಣ ಮತ್ತು ಸಮಕಾಲೀನ ಶರಣರ ಸಾಮೂಹಿಕ ಹೋರಾಟದ ಫಲವಾಗಿ ಸಾಮಾಜಿಕ ಸಮಾನತೆ ಸಾಧ್ಯವಾಯಿತು ಎಂದರು. 

ಗುವಾಹಟಿ ನ್ಯಾಷನಲ್‌ ಲಾ ಯುನಿವರ್ಸಿಟಿ ಆ್ಯಂಡ್‌ ಜ್ಯುಡಿಷಿಯಲ್‌ ಅಕಾಡೆಮಿ ಕುಲಪತಿ ಡಾ| ಜೆ.ಎಸ್‌. ಪಾಟೀಲ್‌ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಾಮೂಹಿಕ ನಾಯಕತ್ವಕ್ಕೆ ಹೆಚ್ಚು ಒತ್ತು ನೀಡಿದ್ದರು. ಧಾರ್ಮಿಕ, ಸಾಮಾಜಿಕ, ಆರ್ಥಿಕ ಸಮಾನತೆಗಾಗಿ ನಿರಂತರವಾಗಿ ಹೋರಾಡಿದ್ದರು. ಅಸ್ಸಾಂ ಭಾಗದಲ್ಲಿ 16ನೇ ಶತಮಾನದಲ್ಲಿ ಬಂದ ಶಂಕರದೇವರು ಬಸವಣ್ಣನವರ ಹಾಗೆ ಆ ಜನರಿಗೆ ಸಮಾನತೆ ತರಲು ಯಶಸ್ವಿಯಾದರು. 

ಶಂಕರದೇವರು ಎಂದರೆ ಈ ಭಾಗದ ಜನರಿಗೆ ದೈವಸ್ವರೂಪಿಯಾಗಿದ್ದಾರೆ. ಅವರ ಆಚಾರ ವಿಚಾರಗಳು ಇಂದಿಗೂ ಪ್ರಸ್ತುತ. ಬಸವಣ್ಣನವರ ಕಲ್ಯಾಣ ಕ್ರಾಂತಿ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಲಿಲ್ಲ. ಸಾರ್ವತ್ರಿಕವಾಗಿ ಜಗತ್ತಿನಾದ್ಯಂತ ಪಸರಿಸಿತು ಎಂದು ತಿಳಿಸಿದರು.

ಸಹಾಯಕ ಪ್ರಾಧ್ಯಾಪಕ ಡಾ| ನೀಲ್‌ ಮೋಹನ್‌ ರಾಯ್‌ ಮಾತನಾಡಿ, ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವಲ್ಲಿ ಶಂಕರದೇವರ ಪಾತ್ರ ಮಹತ್ವದ್ದಾಗಿದೆ. ಶಂಕರದೇವರು ಅಸಮಾನತೆಯ ವಿರುದ್ಧ ಹೋರಾಟ ಮಾಡಿ ಸಫಲತೆ ಕಂಡರು ಎಂದು ತಿಳಿಸಿದರು.

ಪಾಂಡೋಮಟ್ಟಿಯ ಗುರುಬಸವ ಸ್ವಾಮಿಗಳು, ಬಸವ ಶಾಂತಲಿಂಗ ಸ್ವಾಮಿಗಳು, ಬಸವ ಪ್ರಭು ಸ್ವಾಮಿಗಳು, ಬಸವಭೂಷಣ ಸ್ವಾಮಿಗಳು, ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮಿಗಳು, ಬಸವ ಮಡಿವಾಳ ಮಾಚಿದೇವ ಸ್ವಾಮಿಗಳು, ಬಸವ ಮುರುಘಾ ಸಾರಂಗ ದೇಶೀಕೇಂದ್ರ ಸ್ವಾಮಿಗಳು, ಮಲ್ಲಿಕಾರ್ಜುನ ಸ್ವಾಮಿಗಳು, ಬಸವ ನಿರಂಜನ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. 

ರಾಜೀವ ಗಾಂಧಿ ಯುನಿವರ್ಸಿಟಿಯ ಗ್ರಂಥಪಾಲಕ ಡಾ| ಮಾಲತೇಶ ಮೋಟೆಬೆನ್ನೂರು, ಗುವಾಹಟಿ ಪಾಂಡು ಕಾಲೇಜಿನ ಪ್ರಾಂಶುಪಾಲ ಡಾ| ಜೋಗೇಶ್‌ ಕಾಕಥಿ ಇದ್ದರು. ಮೇಘಶ್ರೀ ಸಾಣಿಕೊಪ್ಪ ಪ್ರಾರ್ಥಿಸಿದರು. ಈಶ್ವರ ಸಾಣಿಕೊಪ್ಪ ಸ್ವಾಗತಿಸಿದರು.

ಬಸವ ತತ್ವ ಮತ್ತು ಅಸ್ಸಾಂನ ಶಂಕರ ದೇವರ ತತ್ವಗಳಿಗೆ ಹೋಲಿಕೆ ಇದೆ. ಬಸವಣ್ಣನವರು ಕಾಯಕದ ಮೂಲಕ ಜನರನ್ನು ತಲುಪಿದರೆ ಶಂಕರದೇವರು ತಮ್ಮ ತತ್ವಗಳ ಮೂಲಕ ಹಳ್ಳಿಗಳಿಗೆ ಹೋಗಿ ಹಾಡುತ್ತ ಕುಣಿಯುತ್ತ ಜನರನ್ನು ತಲುಪಿದರು. ಅವರದೂ ಭಕ್ತಿಮಾರ್ಗ. ಮಾನವ ಕುಲಕ್ಕೆ ಜ್ಞಾನ ದೀವಿಗೆ ಹಚ್ಚುವಲ್ಲಿ ಯಶಸ್ವಿಯಾದರು.
 ಪ್ರೊ| ಅಮಲೆಂದು ಚಕ್ರವರ್ತಿ, ಗುವಾಹಟಿಯ ಪ್ರಾಧ್ಯಾಪಕ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.