ಮಾನವ ಕುಲಕ್ಕೆ ಅನುಭಾವದ ಹಸಿವು ಮುಖ್ಯ; ಡಾ| ಮುರುಘಾ ಶರಣರು

ರಾಜಿ ಸಂಧಾನದ ಮೂಲಕ ಲೋಕ್‌ ಅದಾಲತ್‌ನಲ್ಲಿ ಬಗೆಹರಿಸಬಹುದು.

Team Udayavani, Aug 22, 2022, 5:39 PM IST

Udayavani Kannada Newspaper

ಚಿತ್ರದುರ್ಗ: ಬುದ್ಧಿಜೀವಿಯಾದ ಮಾನವ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದಾನೆ. ಬುದ್ಧಿವಂತ ಮಾನವ ಅಕ್ರಮ ಸೃಷ್ಟಿ ಮಾಡುತ್ತಾನೆ. ಅದರೊಟ್ಟಿಗೆ ಅತಿಕ್ರಮ ಮಾಡುತ್ತಾನೆ. ಅಕ್ರಮ ಇರುವಲ್ಲಿ ಅಪರಾಧವೂ ಇರುತ್ತದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ನಡೆದ “ನಿತ್ಯ ಕಲ್ಯಾಣ’ ಮನೆ ಮನೆಗೆ ಚಿಂತನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾನವನಿಗೆ ಹೊಟ್ಟೆಯ ಹಸಿವಿಗಿಂತ ಅನುಭಾವದ ಹಸಿವು ಆಗಬೇಕು. ನಿಸರ್ಗದಲ್ಲಿ ಬದುಕನ್ನು ನಡೆಸುತ್ತಿದ್ದೇವೆ. ಪ್ರಾಣಿ-ಪಕ್ಷಿಗಳಿಗೆ ಕಾನೂನು ಇಲ್ಲ.

ಆದರೆ ಮಾನವ ಪ್ರಾಣಿಗೆ ಕಾನೂನು ಇದೆ. ಮನುಷ್ಯ ಮಾತ್ರ ಕಾನೂನನ್ನು ಕೈಗೆತ್ತಿಕೊಳ್ಳುತ್ತಾನೆ. ಎಲ್ಲವುಗಳ ಆಚೆಗೆ ಮಾನವ ಬುದ್ಧಿಜೀವಿ. ಹಾಗೆಯೇ ಸಮಾಜ ಪ್ರಾಣಿಯೂ ಹೌದು. ಬುದ್ಧಿಜೀವಿಯಾದ ಮಾನವ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದಾನೆ. ಇದು ಮಾನವ ಲೋಕದ ಅನಾರೋಗ್ಯಕರ ಬೆಳವಣಿಗೆ ಎಂದು ವಿಷಾದಿಸಿದರು.

ಸಮ್ಮುಖ ವಹಿಸಿದ್ದ ಹೆಗ್ಗುಂದ ವನಕಲ್ಲು ಮಲ್ಲೇಶ್ವರ ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ ಮಾತನಾಡಿ, ಸಂವಿಧಾನದಲ್ಲಿ ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಅಂಶಗಳನ್ನು ಅಂಬೇಡ್ಕರ್‌ರವರು ಕೊಟ್ಟಿದ್ದಾರೆ. ಪ್ರಪಂಚದ ಎಲ್ಲ ಸಂವಿಧಾನಗಳಿಗಿಂತ ಭಾರತದ ಸಂವಿಧಾನವೇ ಶ್ರೇಷ್ಠವಾದುದು. ಇದರ ಹಿನ್ನೆಲೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾ ರಂಗಗಳಿವೆ ಎಂದರು.

ಸರಸ್ವತಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಎನ್‌.ಡಿ. ಗೌಡ ಮಾತನಾಡಿ, 1987ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಅ ಧಿನಿಯಮ ಜಾರಿಗೆ ಬಂದಿದೆ. ಇದರ ಆಶಯ ಭಾರತೀಯ ಪ್ರಜೆ ಕಾನೂನು ಜ್ಞಾನ ತಿಳಿದಿರಬೇಕು. ಅದೇ ರೀತಿ ರಾಜ್ಯ ಮಟ್ಟದ ಸೇವೆಗಳ ಪ್ರಾ ಧಿಕಾರ ರಚನೆಯಾಯಿತು. ಇದು ಸಂವಿಧಾನದ ಆಶಯ.

ಉಚಿತವಾಗಿ ಕಾನೂನು ನೆರವು ನೀಡಬೇಕು. ಜನತಾ ನ್ಯಾಯಾಲಯಗಳನ್ನು ಸಂವಿಧಾನದ ಚೌಕಟ್ಟಿನಲ್ಲಿ ಸ್ಥಾಪಿಸಲಾಯಿತು. ಯಾವುದೇ ವ್ಯಕ್ತಿಯ ವಿರುದ್ಧ ದಾವೆ ಹೂಡಲು ಆ ವ್ಯಕ್ತಿ ಉಚಿತ ಕಾನೂನು ನೆರವು ಪಡೆಯಬಹುದು. ಆದರೆ ಎಷ್ಟೋ ಜನರಿಗೆ ಕಾನೂನಿನ ಹಕ್ಕುಗಳು ಗೊತ್ತಾಗುತ್ತಿಲ್ಲ. ಒಬ್ಬ ವ್ಯಕ್ತಿ ಹುಟ್ಟಿನಿಂದ 36 ಹಕ್ಕುಗಳನ್ನು ಸ್ವಾಭಾವಿಕವಾಗಿ ಪಡೆಯುತ್ತಾನೆ ಎಂದು ತಿಳಿಸಿದರು.

ಮಹಿಳೆ, ಮಕ್ಕಳು, ಅಶಕ್ತರು, ಕಾರ್ಮಿಕರು, ಜೀತದಾಳುಗಳು ಸೇರಿದಂತೆ ಅನೇಕರು ಉಚಿತ ಕಾನೂನು ಸಲಹೆ ಪಡೆಯಬಹುದಾಗಿದೆ. ವಾರ್ಷಿಕವಾಗಿ ಯಾವುದೇ ಧರ್ಮದ ವ್ಯಕ್ತಿ ಒಂದು ಲಕ್ಷದ ಒಳಗೆ ಆದಾಯ ಹೊಂದಿರುವವರು ಉಚಿತ ಕಾನೂನು ಸಲಹೆ ಪಡೆಯಬಹುದು. ಇಂಥವರು ಯಾವುದೇ ಶುಲ್ಕ ಕಟ್ಟಬೇಕಿಲ್ಲ. ಜನತಾ ನ್ಯಾಯಾಲಯಗಳು ಉಭಯ ಪಕ್ಷಗಾರರ ಸಮಸ್ಯೆಯನ್ನು ಇವರು ಯಾವುದೇ ನ್ಯಾಯಲಯಕ್ಕೆ ಹೋಗದ ಹಾಗೆ ಸಮಸ್ಯೆ ಬಗೆಹರಿಸಬಹುದಾಗಿದೆ.

ಪುರಸಭೆ, ನಗರಸಭೆ, ಗ್ರಾಮಪಂಚಾಯಿತಿ, ಬ್ಯಾಂಕ್‌ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಜೀವನದ ಸಮಸ್ಯೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಲೋಕ್‌ ಅದಾಲತ್‌ನಲ್ಲಿ ಬಗೆಹರಿಸಬಹುದು. ರಾಜಿ ಮಾಡಿಕೊಳ್ಳುವ ಅಥವಾ ರಾಜಿ ಮಾಡಿಕೊಳ್ಳಲಾಗದ ಪ್ರಕರಣಗಳು ಲೋಕ ಅದಾಲತ್‌ಗೆ ಬರುತ್ತವೆ ಎಂದು ವಿವರಿಸಿದರು. ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌. ನವೀನ್‌, ವೀರಶೈವ ಸಮಾಜದ ಅಧ್ಯಕ್ಷ ಎಲ್‌.ಬಿ. ರಾಜಶೇಖರ್‌ ಇದ್ದರು. ಎನ್‌.ಬಿ. ವಿಶ್ವನಾಥ್‌ ಸ್ವಾಗತಿಸಿದರು. ಬಸವರಾಜ ಹುರಳಿ ನಿರೂಪಿಸಿದರು.

ಪ್ರತಿಯೊಬ್ಬರಿಗೂ ಕಾನೂನು ಪ್ರಜ್ಞೆ, ತಿಳಿವಳಿಕೆ ಮುಖ್ಯ. “ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಸಂವಿಧಾನದ ಆಶಯವಾಗಿದೆ. ಕಾನೂನು ಅರಿವು ಹೊಂದಿರುವವರು ಕಾನೂನು ಅರಿವು ಇಲ್ಲದವರಲ್ಲಿ ಅರಿವು ಮೂಡಿಸಬೇಕು.
ಡಾ| ಎನ್‌.ಡಿ. ಗೌಡ, ಸರಸ್ವತಿ ಕಾನೂನು
ಕಾಲೇಜಿನ ಸಹಾಯಕ ಪ್ರಾಧ್ಯಾಪಕ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.