ಶಿವಕುಮಾರ ಶ್ರೀಗಳ ಆದರ್ಶ ಪಾಲಿಸಿ


Team Udayavani, Jan 23, 2019, 9:14 AM IST

cta-1.jpg

ಚಳ್ಳಕೆರೆ: ಬಸವ ತತ್ವದ ಮೂಲಕ ನಾಡಿನ ಜನರ ಸೇವೆ ಮತ್ತು ಧಾರ್ಮಿಕ ಜಾಗೃತಿ ಮೂಡಿಸಿದ ತುಮಕೂರು ಸಿದ್ಧಗಂಗಾ ಮಠದ ಪೀಠಾಧಿಪತಿ ಡಾ| ಶ್ರೀ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿರುವುದು ರಾಜ್ಯ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ, ವಾಣಿಜ್ಯೋದ್ಯಮಿ ಎಚ್. ಗಂಗಣ್ಣ ಹೇಳಿದರು.

ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕಿನ ವೀರಶೈವ ಸಮಾಜದ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀಗಳ ಶ್ರದ್ಧಾಂಜಲಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೂಜ್ಯ ಸ್ವಾಮೀಜಿಗಳು ಸಿದ್ಧಗಂಗಾ ಮಠದಲ್ಲಿ ಪ್ರತಿನಿತ್ಯ ಸುಮಾರು 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಕ್ಷರ ಮತ್ತು ಅನ್ನ ದಾಸೋಹದ ಕಾಯಕ ಮಾಡಿದರು. ನಾವೆಲ್ಲರೂ ಮಹಾನ್‌ ಶ್ರೇಷ್ಠ ಸ್ವಾಮೀಜಿಯವರ ಆದರ್ಶಗಳನ್ನು ಮೈ ಗೂಡಿಸಿಕೊಳ್ಳಬೇಕು ಎಂದರು.

ತಾಲೂಕು ವೀರಶೈವ ಹಾಸ್ಟಲ್‌ ಅಧ್ಯಕ್ಷ ಡಾ| ಕೆ.ಎಂ. ಜಯಕುಮಾರ್‌ ಮಾತನಾಡಿ, ಇಂದು ನಾಡಿನೆಲ್ಲೆಡೆ ಕತ್ತಲು ಆವರಿಸಿದ ಎಂಬ ಭಾವನೆ ಉಂಟಾಗಿದೆ. ನಡೆದಾಡುವ ದೇವರು ಇಡೀ ಸಮಾಜಕ್ಕೆ ಜ್ಞಾನದ ಶಕ್ತಿಯಾಗಿದ್ದರು. ಇಂತಹ ಶ್ರೇಷ್ಠ ದಾರ್ಶನಿಕ ಮತ್ತೂಮ್ಮೆ ಈ ನಾಡಿನಲ್ಲಿ ಜನ್ಮತಾಳುವುದು ಕಷ್ಟ ಎಂದು ಹೇಳಿದರು.

ತಾಲೂಕು ವೀರಶೈವ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ಜಗದೀಶ್‌ ಮಾತನಾಡಿ, ಜನಸಾಮಾನ್ಯರ ಅಸಾಮಾನ್ಯ ಶಕ್ತಿಯಾಗಿ ಶ್ರೀಗಳು ತಮ್ಮ ಸಾರ್ಥಕ ಬದುಕನ್ನು ನಡೆಸಿದ್ದಾರೆ. ವಿಶೇಷವಾಗಿ 12ನೇ ಶತಮಾನದ ಜಗಜ್ಯೋತಿ ಬಸವಣ್ಣನವರ ಧಾರ್ಮಿಕ ವಿಚಾರಗಳನ್ನು ನಾಡಿನ ಎಲ್ಲರಿಗೂ ಧಾರೆ ಎರೆದ ಕೀರ್ತಿ ಅವರದ್ದು ಎಂದರು.

ವೀರಶೈವ ಮಹಿಳಾ ವೇದಿಕೆ ಕಾರ್ಯದರ್ಶಿ ಮಂಜುಳಾ ನಾಗರಾಜು ಮಾತನಾಡಿ, ರಾಷ್ಟ್ರ ಕಂಡ ಅಪರೂಪದ ದಿವ್ಯ ಜ್ಞಾನದ ಶಕ್ತಿಯಾಗಿದ್ದ ಪರಮಪೂಜ್ಯರು ಮಕ್ಕಳಲ್ಲಿ ದೇವರನ್ನು ಕಂಡ ಪುಣ್ಯಪುರುಷರು. ಯಾವುದೇ ಪ್ರತಿಫಲಾಷೇಕ್ಷೆ ನಿರೀಕ್ಷಿಸದೆ ನಿರಂತರವಾಗಿ ಸೇವೆಯಲ್ಲೇ ದೈವತ್ವ ಕಂಡ ಮಹಾಪುರುಷರು. ಶ್ರೀಮಠಕ್ಕೆ ಆಗಮಿಸುವ ಎಲ್ಲ ಭಕ್ತರಿಗೂ ದಾಸೋಹದ ಜತೆಯಲ್ಲಿ ಜ್ಞಾನದ ದೀಕ್ಷೆ ನೀಡಿದ ಕೀರ್ತಿ ಅವರದ್ದು ಎಂದು ಹೇಳಿದರು.

ಹಿರಿಯ ವಾಣಿಜ್ಯೋದ್ಯಮಿ ಬಿ.ಕೆ. ರಾಜಶೇಖರಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಾ ನಾಗರಾಜು, ಎಸ್‌. ರಾಜಶೇರಪ್ಪ, ಉಪಾಧ್ಯಕ್ಷ ಕೆ.ಎಂ. ಜಗದೀಶ್‌, ದಲ್ಲಾಳರ ಸಂಘದ ಅಧ್ಯಕ್ಷ ಕೆ.ಎಂ.ಅರವಿಂದ್‌, ಉಪಾಧ್ಯಕ್ಷ ಡಿ.ಎಂ. ತಿಪ್ಪೇಸ್ವಾಮಿ, ವೃಷಬೇಂದ್ರಪ್ಪ, ಎಚ್. ಮಂಜುನಾಥ, ಹೊಟ್ಟೆಪ್ಪನಹಳ್ಳಿ ಪ್ರಸನ್ನಕುಮಾರ್‌, ಕೆ.ವಿ.ಪ್ರಕಾಶ್‌, ಎನ್‌.ವಿ. ತಿಪ್ಪೇಸ್ವಾಮಿ, ಜಯಪ್ರಕಾಶ್‌, ವಂದನಾರಾಜು, ಈಶ್ವರಪ್ಪ ಮುಂತಾದವರು ಭಾಗವಹಿಸಿದ್ದರು. ಶಿಕ್ಷಕ ಎಚ್.ಮಂಜುನಾಥ ಸ್ವಾಗತಿಸಿದರು. ದೈಹಿಕ ಶಿಕ್ಷಕ ಎಸ್‌.ರೇವಣ್ಣ ವಂದಿಸಿದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.