ಶ್ರದ್ಧಾ ಭಕ್ತಿಯ ಕುಕ್ವಾಡೇಶ್ವರಿ ಜಾತ್ರೆ
Team Udayavani, Jan 20, 2021, 7:00 PM IST
ಹೊಳಲ್ಕೆರೆ: ಪಟ್ಟಣದ ಅಧಿದೇವತೆ ಶ್ರೀ ಕುಕ್ವಾಡೇಶ್ವರಿದೇವಿ ಜಾತ್ರೆ ಹಾಗೂ ಹೊರಬೀಡು ಉತ್ಸವ ಶ್ರದ್ಧಾ ಭಕ್ತಿಯಿಂದ ಜರುಗಿತು. ಸೋಮವಾರ ರಾತ್ರಿ ಬೀರಲಿಂಗೇಶ್ವರಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ನಾಡಿನ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ರಾಜಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
ಇದನ್ನೂ ಓದಿ:ಗುಜರಿ ವಸ್ತುಗಳನ್ನು ಬಳಸಿ ವಾಹನವನ್ನು ತಯಾರಿಸಿದ ಉಡುಪಿಯ ಯುವಕ
ಮಂಗಳವಾರ ಬೆಳಿಗ್ಗೆ ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ಕುಕ್ವಾಡೇಶ್ವರಿ ದೇವಿ ದೇವಸ್ಥಾನಕ್ಕೆ ಹೊರಬೀಡಿಗೆ ಕಾರ್ಯಕ್ರಮ ನಡೆಯಿತು. ಹೊರಬೀಡಿಗೆ ಬೇಕಾದ ದವಸ ಧಾನ್ಯ, ಹಣ್ಣು, ಹೂವು, ಕುರಿ, ಕೋಳಿ ಸೇರಿದಂತೆ ವಿವಿಧ ಹರಕೆ ಕಾಣಿಕೆಗಳನ್ನು ಹೊತ್ತ ಅಲಂಕೃತ ಎತ್ತಿನಗಾಡಿಗಳು ನೋಡುಗರ ಕಣ್ಮನ ಸೆಳೆದವು. ಶಾಸಕ ಎಂ. ಚಂದ್ರಪ್ಪ ಶ್ರೀ ಕುಕ್ವಾಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ