ವಲಸೆಯಿಂದ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳ: ಡಾ| ಸ್ವಾಮಿ


Team Udayavani, Jun 13, 2018, 12:40 PM IST

chitrdurg-1.jpg

ಚಿತ್ರದುರ್ಗ: ಕಾಫಿ ತೋಟದಲ್ಲಿ ಕೆಲಸ ಮಾಡಲು ವಲಸೆ ಹೋದ ಕುಟುಂಬಗಳು ತಮ್ಮ ಜೊತೆಗೆ ಮಕ್ಕಳನ್ನು ಕರೆದುಕೊಂಡು ಹೋಗಿ ಕೆಲಸದಲ್ಲಿ ತೊಡಗಿಸುತ್ತಿದ್ದಾರೆ. ಇದರಿಂದ ಮಕ್ಕಳು  ಬಾಲಕಾರ್ಮಿಕರಾಗಿ  ದುಡಿಯುವುದು,
ಶಾಲೆಯಿಂದ ಹೊರಗುಳಿಯುತ್ತಿದ್ದಾರೆ ಎಂದು ಪರಿಸರವಾದಿ ಡಾ| ಎಚ್‌.ಕೆ.ಎಸ್‌. ಸ್ವಾಮಿ ಆತಂಕ ವ್ಯಕ್ತಪಡಿಸಿದರು.

ತಾಲೂಕಿನ ಐನಹಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ಸಣ್ಣ ವಯಸ್ಸಿನಲ್ಲಿಯೇ ದುಡಿಮೆ ಮಾಡುವುದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು, ಹೋಟೆಲ್‌ಗ‌ಳಲ್ಲಿ
ಕೆಲಸ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಮಕ್ಕಳು ಶಾಲೆಗಳನ್ನು ತೊರೆದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. 

ಪೋಷಕರ ಜತೆ ನಗರಗಳಲ್ಲಿ ನರಕದ ಜೀವನ ನಿರ್ವಹಿಸುವಂತಾಗಿದೆ. ಬಾಲಕಾರ್ಮಿಕರ ನಿವಾರಣೆಗೆ ಗ್ರಾಮೀಣ ಜನರ ವಲಸೆ ತಡೆಯಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಅವರನ್ನು ಹಿಂತಿರುಗಿಸುವಂತೆ ಏರ್ಪಾಡು ಮಾಡಬೇಕು ಎಂದರು. 

ಬಾಲಕಾರ್ಮಿಕ ಪದ್ಧತಿ ನಿವಾರಣೆಗೆ ಶಾಲೆಗಳಲ್ಲಿ ಸೂಕ್ತ ಅರಿವು ಮೂಡಿಸಬೇಕು. ಮೂಲ ಶಿಕ್ಷಣವನ್ನು ಅನುಷ್ಠಾನಗೊಳಿಸಬೇಕು.  ಶಾಲೆಯಲ್ಲೇ ಮಗು ದುಡಿಮೆಯ ಮಾರ್ಗಗಳನ್ನು ಕಲಿಯಬೇಕು. ಹತ್ತನೇ ತರಗತಿ
ಪೂರ್ಣಗೊಳ್ಳುವಷ್ಟರಲ್ಲಿ ಮಗು ಟೈಲರಿಂಗ್‌, ಬಡಗಿ ಕೆಲಸ, ಗುಡಿ ಕೈಗಾರಿಕೆಯ ಕೆಲಸಗಳು, ಕಾಗದ ತಯಾರಿಕೆ, ಕೃಷಿ ಕೆಲಸ ಮುಂತಾದ ಕೈಕಾಲುಗಳನ್ನು ಬಳಸಿ ದುಡಿಯುವಂತಹ ಮಾರ್ಗಗಳನ್ನು ಕಲಿಸಿಕೊಡಬೇಕು ಎಂದು ಸಲಹೆ ನೀಡಿದರು.

ಪರಿಸರದ ಅಸಮತೋಲನಕ್ಕೆ ನಾವು ನಡೆಸುತ್ತಿರುವ ಜೀವನಶೈಲಿಯೂ ಕಾರಣ. ಸರಳ ಜೀವನ, ಸ್ವದೇಶಿ ಜೀವನದಿಂದ ದೂರ ಸರಿದಿದ್ದರ ಫಲವಾಗಿ ಇಂದು ಮಾಲಿನ್ಯ ಹೆಚ್ಚಾಗಿದೆ. ಆಧುನಿಕ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರಮಾಣದ ರಾಸಾಯನಿಕ ಗೊಬ್ಬರಗಳು ಮತ್ತು ಕ್ರಿಮಿನಾಶಕ ಬಳಸಲಾಗುತ್ತಿದೆ. ಇವುಗಳ ದೀರ್ಘ‌ಕಾಲಿಕ ಬಳಕೆಯಿಂದ ಮಣ್ಣಿನಲ್ಲಿರುವ ಪೋಷಕಾಂಶಗಳು, ನವೀಕರಿಸುವ ಸೂಕ್ಷ್ಮಜೀವಿಗಳು ನಾಶವಾಗುತ್ತವೆ. 

ಅಲ್ಲದೆ  ಹ್ಯೂಮಸ್‌ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಎರೆಹುಳುಗಳು ನಾಶವಾಗುತ್ತವೆ. ಫಲವತ್ತಾದ ಭೂಮಿ ಬರಡು ಭೂಮಿಯಾಗಿ ಪರಿವರ್ತನೆಯಾಗುತ್ತದೆ. ಮಣ್ಣಿನಲ್ಲಿರುವ ಉಪಯುಕ್ತ ಘಟಕಗಳನ್ನು ತೆಗೆದು
ಅನುಪಯುಕ್ತ ಘಟಕಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಗುಣಮಟ್ಟ ಗಣನೀಯವಾಗಿ ಕುಂಠಿತಗೊಳ್ಳುತ್ತದೆ.

ಅದರೊಂದಿಗೆ ಮಣ್ಣಿನಲ್ಲಿರುವ ವಿವಿಧ ಜೀವಿಗಳು ನಾಶಗೊಳ್ಳುತ್ತವೆ ಎಂದು ಎಚ್ಚರಿಸಿದರು. ಪ್ಲಾಸ್ಟಿಕ್‌ ಮರುಬಳಕೆ ಮಾಡಿದರೆ ರಸ್ತೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಬಹುದು, ಶಾಖ ಉತ್ಪಾದನೆ ಘಟಕಗಳಿಗೆ ಕಳುಹಿಸಬಹುದು. 

ಪ್ಲಾಸ್ಟಿಕ್‌ನಿಂದ ಮತ್ತೂಮ್ಮೆ ನಾವು ಪ್ಲಾಸ್ಟಿಕ್‌ ಗಳನ್ನು, ಕೆಳದರ್ಜೆಯ ಪ್ಲಾಸ್ಟಿಕ್‌ ಉತ್ಪಾದನೆ ಮಾಡಿಕೊಳ್ಳಬಹುದು.
 ಕೆಳದರ್ಜೆಯ ಪ್ಲಾಸ್ಟಿಕ್‌ ಗಳನ್ನು ಮತ್ತೆ ಮರು ಉತ್ಪಾದನೆಗೆ ಕಳಿಸಿ ಯಾವುದಾದರೊಂದು ಶಕ್ತಿಯ ರೂಪಕ್ಕೆ ಬಳಕೆ
ಮಾಡಿ ಅದನ್ನು ಉಪಯೋಗಿಸಿಕೊಳ್ಳಬಹುದು ಎಂದು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು. ಮುಖ್ಯ ಶಿಕ್ಷಕ ಜಿ. ಹನುಮಂತಪ್ಪ, ಶಿಕ್ಷಕರಾದ ಓಂಕಾರಪ್ಪ, ಗೋವಿಂದಪ್ಪ, ರೇವಣ್ಣ, ಸುಜಾತಾ, ಮಂಜುಳಾ, ಶಕುಂತಲಾ, ಕೋಕಿಲಾ, ವೀಣಾ, ನಾಗರಾಜ್‌ ಇದ್ದರು. ಮಕ್ಕಳು ಸಸಿ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. 

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.