ದನಗಳ ಜಾತ್ರೆಯಲ್ಲಿ ಜನಗಳ ಸಂಖ್ಯೆಯೇ ಹೆಚ್ಚು


Team Udayavani, Mar 24, 2021, 9:02 PM IST

ಮಜನ್ಗನಚವ

ಚಿತ್ರದುರ್ಗ: ದನಗಳ ಜಾತ್ರೆಯಲ್ಲಿ ಜನಗಳ ಸಂಖ್ಯೆ ಹೆಚ್ಚಾಗಿ ದನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮಾನವ ಮಕ್ಕಳ ಪಾಲನೆಗೆ ಮಾತ್ರ ಸೀಮಿತನಾಗಿದ್ದಾನೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದರು. ಸೀಬಾರ ಗ್ರಾಮದಲ್ಲಿ ಜಿಪಂ, ತಾಪಂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ನಡೆದ ಜಾನುವಾರು ಜಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮನುಷ್ಯ ಸಸ್ಯ ಪಾಲನೆ, ಪಶುಪಾಲನೆಯನ್ನು ಬಿಟ್ಟಿದ್ದಾನೆ. ಇದರಿಂದ ದನಗಳ ಸಂಖ್ಯೆ ಕಮ್ಮಿಯಾಗಿ ಹಾಲು ಉತ್ಪಾದನೆ ಕಡಿಮೆಯಾಗಿದೆ. ಗುರುಪಾದ ಸ್ವಾಮಿಗಳ ಸ್ಮರಣೆಗಾಗಿ ಪ್ರತಿವರ್ಷ ಇಲ್ಲಿ ದನಗಳ ಜಾತ್ರೆ ನಡೆಸಲಾಗುತ್ತಿದೆ. ಆದರೆ ಈ ಹಿಂದೆ ಇದ್ದಂತೆ ದನಗಳು ಈಗ ಬರುತ್ತಿಲ್ಲ ಎಂದರು.

ಗುರುಪಾದ ಸ್ವಾಮಿಗಳು ತಪಸ್ವಿಗಳು. ಗವಿಮಠದಲ್ಲಿ ಏಕಾಂತವಾಗಿ ಧ್ಯಾನ ಮಾಡಿ ಸಮಾಜದಲ್ಲಿ ಶಾಂತಿ, ಸಹನೆ, ಬೋಧನೆ ಮಾಡಿದ್ದಾರೆ. ಮುರುಘಾ ಮಠದ ಗುರುಗಳಾಗಿ ಸಮಾಜ ಸೇವೆ ಮಾಡಿದ್ದಾರೆ. ಅವರ ಗದ್ದುಗೆ ಶ್ರೀಮಠದಲ್ಲಿದೆ. ಜಯದೇವ, ಜಯವಿಭವ ಮತ್ತು ಮಲ್ಲಿಕಾರ್ಜುನ ಶ್ರೀಗಳು ಇವರೆಲ್ಲರು ಗದ್ದುಗೆಯಲ್ಲಿ ಪೂಜೆ ಪ್ರಸಾದ ಧ್ಯಾನವನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.

ಬೇಸಿಗೆ ಕಾಲದಲ್ಲಿ ಜನರಿಗೆ ಮಜ್ಜಿಗೆ ಕೊಡಿ. ಹಾಲು, ಮೊಸರು, ಬೆಣ್ಣೆ, ತುಪ್ಪ, ಪೇಡಾ ತಿನಿಸುಗಳಿಗೆ ಹಾಲು ಅತ್ಯವಶ್ಯಕ. ಹೀಗಾಗಿ ಪಶುಪಾಲನೆ ಅತಿ ಮುಖ್ಯವಾಗಿದ್ದು ಎತ್ತು, ಎಮ್ಮೆ, ಆಕಳು, ಕುರಿ, ಮೇಕೆಗಳನ್ನು ಸಾಕಿ ಕೃಷಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ಕೊಟ್ಟು ಪಶುಪಾಲನೆಯಲ್ಲಿ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಮಾತನಾಡಿ, ಜಿಲ್ಲೆಯಲ್ಲೇ ಏಕೈಕ ಜಾನುವಾರು ಜಾತ್ರೆ ನಡೆಯುವ ಸ್ಥಳ ಸೀಬಾರವಾಗಿದೆ. ಹಿಂದೆ ಕುಟುಂಬ ವ್ಯವಸ್ಥೆಯಲ್ಲಿ ಜನರು ಹೆಚ್ಚು ಸಂಖ್ಯೆಯಲ್ಲಿದ್ದು ದನ ಕರುಗಳನ್ನು ಸಾಕುತ್ತಿದ್ದರು. ಈಗ ಮನೆಯಲ್ಲಿ ಜನ ಕಡಿಮೆಯಾಗಿರುವುದರಿಂದ ಪಶುಪಾಲನೆಯೂ ಕಡಿಮೆಯಾಗಿದೆ. ಜಾನುವಾರುಗಳಿಂದ ದೊರೆಯುವ ಸಾವಯವ ಗೊಬ್ಬರದಿಂದ ಭೂಮಿ ಫಲವತ್ತಾಗುತ್ತದೆ. ಆರೋಗ್ಯವೂ ಉತ್ತಮಗೊಳ್ಳುತ್ತದೆ ಎಂದರು.

ಗ್ರಾಪಂ ಸದಸ್ಯ ರಾಮಾಂಜನೇಯ ಮಾತನಾಡಿ, ಮುರುಘಾಮಠದಿಂದ ಕಳೆದ 66 ವರ್ಷಗಳಿಂದ ಈ ಜಾತ್ರೆ ನಿರಂತರವಾಗಿ ನಡೆಯುತ್ತ ಬಂದಿದೆ. ಇಲ್ಲಿ ನಡೆಯುವ ಜಾತ್ರೆಯಲ್ಲಿ ಈ ಹಿಂದೆ 10 ಸಾವಿರ ಜೋಡಿ ಎತ್ತುಗಳು ಭಾಗವಹಿಸಿದ ಉದಾಹರಣೆಗಳಿವೆ. ಈಗ ಲಾಭದ ಹಿಂದೆ ಹೋಗಿ ಮಾನವ ಜಾನುವಾರು ಸಾಕುವುದನ್ನೇ ಬಿಟ್ಟಿದ್ದಾನೆ ಎಂದು ವಿಷಾದಿಸಿದರು.

ಎಂ.ಕೆ. ಹಟ್ಟಿ ಗ್ರಾಪಂ ಅಧ್ಯಕ್ಷೆ ಬಿ. ಗೀತಾ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೌಸಲ್ಯ ತಿಪ್ಪೇಸ್ವಾಮಿ, ತಾಪಂ ಸದಸ್ಯೆ ರಾಧಮ್ಮ ಜಗದೀಶ್‌, ಪ್ರಕಾಶ್‌ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮುರುಘಾ ಶರಣರು ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿದರು. ಜಾತ್ರೆಯಲ್ಲಿ ಹಳ್ಳಿಕಾರ್‌, ಅಮೃತ್‌ ಮಹಲ್‌ ಇನ್ನಿತರೆ ತಳಿಗಳ 250ಕ್ಕೂ ಹೆಚ್ಚು ಜೋಡಿ ಎತ್ತುಗಳು ಭಾಗವಹಿಸಿವೆ. ಪಶುಪಾಲನಾ ಇಲಾಖೆ ನಿರ್ದೇಶಕ ಡಾ| ಕೃಷ್ಣಪ್ಪ ಸ್ವಾಗತಿಸಿದರು. ಡಾ| ಬಿ. ಪ್ರಸನ್ನಕುಮಾರ್‌ ನಿರ್ವಹಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.