ರಾಜ್ಯದಲ್ಲಿ ಉದ್ಯೋಗ ಖಾತ್ರಿ ಕೆಲಸದ ಅವಧಿ ಕಡಿತ


Team Udayavani, Mar 6, 2017, 3:45 AM IST

Labur.jpg

ಚಿತ್ರದುರ್ಗ: ಕೆಂಡದಂತಹ ಬಿಸಿಲು ಜನಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತಿರುವುದರಿಂದ ರಾಜ್ಯ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಕೂಲಿ ಕೆಲಸದಲ್ಲಿ ಸ್ಪಲ್ಪ ಮಟ್ಟಿನ ರಿಯಾಯಿತಿ ನೀಡಿದೆ.

ರಾಜ್ಯವನ್ನು ಕಾಡುತ್ತಿರುವ ಬರ, ಬಿರುಬಿಸಿಲಿನಿಂದ ಕೂಲಿ ಕಾರ್ಮಿಕರನ್ನು ರಕ್ಷಿಸಲು ಕೆಲಸದ ಅವಧಿಯ ಪ್ರಮಾಣದಲ್ಲಿ ಕಡಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಎಚ್‌.ಕೆ. ಪಾಟೀಲ್‌ ಮಾ. 1ರಂದು ಆದೇಶ ಹೊರಡಿಸಿದ್ದಾರೆ.

ತೆಲಂಗಾಣ ರಾಜ್ಯ ರೂಪಿಸಿರುವ ಹೊಸ ಮಾದರಿ ಅನುಸರಿಸಲು ಕರ್ನಾಟಕವೂ ಮುಂದಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರು, ತಮಗೆ ನಿಗದಿಪಡಿಸಿದ ಕೆಲಸಕ್ಕಿಂತ ಕಡಿಮೆ ಕೆಲಸ ಮಾಡಿದರೂ ಸಾಕೆಂದು ಆದೇಶಿಸಲಾಗಿದೆ.
ರಿಯಾಯಿತಿ ಪ್ರಮಾಣ ನಿಗದಿ:

ಫೆಬ್ರವರಿಯಿಂದ ಜೂನ್‌ವರೆಗೆ ರಿಯಾಯಿತಿ ಪ್ರಮಾಣದಲ್ಲಿ ಕೆಲಸ ಮಾಡುವ ಭಾಗ್ಯವನ್ನು ಕೂಲಿ ಕಾರ್ಮಿಕರು ಪಡೆದಿದ್ದಾರೆ. ಮಾರ್ಚ್‌ನಲ್ಲಿ ಶೇ.25, ಏಪ್ರಿಲ್‌ನಲ್ಲಿ ಶೇ.30, ಮೇನಲ್ಲಿ ಶೇ.30 ಹಾಗೂ ಜೂನ್‌ನಲ್ಲಿ ಶೇ.20ರಷ್ಟು ರಿಯಾಯಿತಿ ಕೂಲಿ ಕೆಲಸಕ್ಕೆ ನೀಡಲಾಗಿದೆ. ಉದಾಹರಣೆಗೆ ದಿನವೊಂದಕ್ಕೆ ಒಬ್ಬ ಕೂಲಿ ಕಾರ್ಮಿಕ 100 ಮೀಟರ್‌ ಉದ್ದದಷ್ಟು ನೆಲ ಅಗೆತದ ಕೆಲಸ ಮಾಡಬೇಕು ಎಂದಿಟ್ಟುಕೊಳ್ಳೋಣ. ಇದಕ್ಕೆ ಮಾರ್ಚ್‌ ತಿಂಗಳ ಶೇ.25ರಷ್ಟು ರಿಯಾಯಿತಿ ಅಂದರೆ 75 ಮೀಟರ್‌ನಷ್ಟು ನೆಲ ಅಗೆದರೂ ಆತನಿಗೆ ಪೂರ್ಣ ಪ್ರಮಾಣದ ಸಂಬಳವಾದ 224 ರೂ. ನೀಡಬೇಕು. ಜೂನ್‌ ತಿಂಗಳವರೆಗೆ ರಿಯಾಯಿತಿ ಸೌಲಭ್ಯ ಮುಂದುವರಿಯಲಿದೆ.

ಎಲ್ಲ ತಾಲೂಕುಗಳಿಗೂ ಅನ್ವಯ
ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ಅವಧಿ ಕಡಿಮೆಗೊಳಿಸಿರುವ ಆದೇಶ, ರಾಜ್ಯ ಸರ್ಕಾರ ಘೋಷಣೆ ಮಾಡಿರುವ 160 ಬರಪೀಡಿತ ತಾಲೂಕುಗಳಲ್ಲಷ್ಟೇ ಅಲ್ಲದೆ ರಾಜ್ಯದ ಎಲ್ಲ ತಾಲೂಕುಗಳಿಗೂ ಅನ್ವಯವಾಗಲಿದೆ.

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರಿಗೆ 150 ಮಾನವ ದಿನಗಳಿಗೆ ಕೂಲಿ ದಿನಗಳನ್ನು ಹೆಚ್ಚಿಸಿ ಸರ್ಕಾರ ಕರುಣೆ ತೋರಿತ್ತು. ಈಗ ಬಿಸಿಲಿನ ತಾಪದಿಂದ ಯಾವುದೇ ಸಾವು-ನೋವು ಸಂಭವಿಸಬಾರದು ಎನ್ನುವ ಮುಂಜಾಗ್ರತೆಯಿಂದ ಕೆಲಸದ ಅವಧಿ ಕಡಿಮೆ ಮಾಡಿರುವುದು ಗಮನಾರ್ಹ.

ಮಾ. 1ರಿಂದ ಅನ್ವಯವಾಗುವಂತೆ ನಿಗದಿತ ಕೂಲಿ ಕೆಲಸದ ಪ್ರಮಾಣ ಶೇ.20ರಿಂದ 30ರ ತನಕ ಕಡಿತ ಮಾಡಿ ಕೂಲಿ ಕಾರ್ಮಿಕರಿಗೆ ರಿಯಾಯಿತಿ ನೀಡಲಾಗಿದೆ. ಉದಾಹರಣೆಗೆ ಒಬ್ಬ ಕೂಲಿ ಕಾರ್ಮಿಕ ದಿನವೊಂದಕ್ಕೆ 100 ಕ್ಯೂಬಿಕ್‌ ಮೀ. ಕೆಲಸ ಮಾಡಬೇಕಿದ್ದರೆ ಮಾರ್ಚ್‌ ತಿಂಗಳಲ್ಲಿ ಶೇ.25ರಷ್ಟು ಕಡಿತ ಮಾಡಿ ಶೇ.75ರಷ್ಟು ಕೆಲಸ ಮಾಡಿದರೂ ಸಾಕು. ಈ ಆದೇಶ ರಾಜ್ಯದ ಎಲ್ಲ ತಾಲೂಕುಗಳಿಗೂ ಅನ್ವಯವಾಗಲಿದೆ. ಜೂನ್‌ ಅಂತ್ಯದವರೆಗೆ ಈ ಸೌಲಭ್ಯ ಇರಲಿದೆ.
– ಟಿ.ಎಂ. ವಿಜಯಭಾಸ್ಕರ್‌, ಸರ್ಕಾರದ ಅಪರ ಮುಖ್ಯ 
ಕಾರ್ಯದರ್ಶಿ.

– ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.